ಪಾಕಿಸ್ತಾನಿ ಪ್ರಜೆಗಳು 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಕೇಂದ್ರ ಸರ್ಕಾರ ಆದೇಶ
Share Now ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದಂತ ಉನ್ನತ ಮಟ್ಟದ ಸಭೆಯಲ್ಲಿ ಪಾಕಿಸ್ತಾನಿ ಪ್ರಜೆಗಳು 48 ಗಂಟೆಯಲ್ಲಿ ಭಾರತ ತೊರೆಯುವಂತೆ ಆದೇಶದ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನೂ ಭಾರತದಲ್ಲಿ ಪಾಕಿಸ್ತಾನಿ ರಾಯಭಾರಿಯನ್ನು ಗಡಿಪಾರು ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದಲ್ಲದೇ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ನೀಡದಿರಲು ನಿರ್ಧರಿಸಲಾಗಿದೆ. ಅಟ್ಟಾರಿ-ವಾಘಾ ಗಡಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲಾಗುವಂತೆಯೂ ಕೇಂದ್ರ ಗೃಹ ಇಲಾಖೆಯಿಂದ ಆದೇಶಿಸಲಾಗಿದೆ. ಪಾಕಿಸ್ತಾನದಲ್ಲಿರುವಂತ ಭಾರತದ ರಾಯಬಾರಿಯನ್ನು ವಾಪಾಸ್ ಕರೆಸಿಕೊಳ್ಳುವಂತೆ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. “ಈ ಭಯೋತ್ಪಾದಕ…
ಪಹಲ್ಗಾಮ್ ದಾಳಿಯಲ್ಲಿ ಮೃತರಾದವರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ: ಸಿಎಂ ಸಿದ್ಧರಾಮಯ್ಯ ಘೋಷಣೆ
Share Now ಬೆಂಗಳೂರು: ಜಮ್ಮುಕಾಶ್ಮೀರದ ಪಹಲ್ಗಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ಹತ್ತು ಲಕ್ಷ ರೂ.ಗಳ ಪರಿಹಾರ ಘೋಷಣೆ ಮಾಡಿದ್ದಾರೆ. ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಅತ್ಯಂತ ತೀವ್ರವಾಗಿ ಖಂಡಿಸುತ್ತೇನೆ. ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್ ಎಂಬುವರು ಮೃತಪಟ್ಟಿದ್ದಾರೆ. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ…
ಪಹಲ್ಗಾಮ್ ದಾಳಿ ಕೋರರನ್ನು ಸದೆಬಡಿಯದೇ ಬಿಡುವುದಿಲ್ಲ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರತಿಜ್ಞೆ
Share Now ನವದೆಹಲಿ: ಪಹಲ್ಗಾಮ್ ದಾಳಿಗೆ ಭಾರತ ಹೆದರುವುದಿಲ್ಲ: ಭಯೋತ್ಪಾದಕರ ವಿರುದ್ಧ ಉಗ್ರ ಹೋರಾಟ ಮುಂದುವರೆಯಲಿದೆ. ಪಹಲ್ಗಾಮ್ ದಾಳಿ ಕೋರರನ್ನು ಸದೆ ಬಡಿಯದೇ ಬಿಡುವುದಿಲ್ಲ ಎಂಬುದಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರತಿಜ್ಞೆ ಮಾಡಿದ್ದಾರೆ. ಪಹಲ್ಗಾಮ್ನಲ್ಲಿ ನಡೆದ ಹೇಡಿತನದ ಕೃತ್ಯದಲ್ಲಿ ನಾವು ಅನೇಕ ಮುಗ್ಧ ಜೀವಗಳನ್ನು ಕಳೆದುಕೊಂಡಿದ್ದೇವೆ. ನಮಗೆ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ನನ್ನ ಸಂತಾಪ ಸೂಚಿಸುತ್ತೇನೆ ಎಂದರು. ಭಯೋತ್ಪಾದನೆಯ ವಿರುದ್ಧ ಭಾರತದ ಸಂಕಲ್ಪವನ್ನು ನಾನು ಪುನರಾವರ್ತಿಸಲು ಬಯಸುತ್ತೇನೆ. ಭಯೋತ್ಪಾದನೆಯ ಬಗ್ಗೆ ನಮಗೆ…
ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ, ಕೇಂದ್ರ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ: ಆರ್.ಅಶೋಕ್
Share Now ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್ ಸೆಲ್ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ. ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿ, ಅಭಿವೃದ್ಧಿಗೆ ದಾರಿ ಮಾಡಿದ್ದರು. ನಾನು ಕೂಡ ಎರಡು ವರ್ಷಗಳ ಹಿಂದೆ ಅಲ್ಲಿಗೆ ಭೇಟಿ ನೀಡಿದ್ದೆ. ವ್ಯಾಪಾರ ವಹಿವಾಟು ಉತ್ತಮವಾಗಿ ನಡೆಯುತ್ತಿತ್ತು. ಬಹುಸಂಖ್ಯಾತ…
ರಾಮಾಪುರ ಕ್ರಾಸ್ ಬಳಿ 50ಸಾವಿರರೂ. ಮೌಲ್ಯದ ಗಾಂಜಾ ವಶ : ಆರೋಪಿ ಬಂಧನ
Share Now ಮುಂಡಗೋಡ : ಗಾಂಜಾ ಮಾರಾಟ ಮಾಡಲು ಪ್ರಯತ್ನಿಸಿದ ವ್ಯಕ್ತಿಯೊಬ್ಬನನ್ನು ಪೊಲೀಸರು ತಾಲೂಕಿನ ರಾಮಾಪುರ ಕ್ರಾಸ್ ಬಳಿ ಬಂಧಿಸಿದ್ದಾರೆ. ಮುಂಡಗೋಡ ಯಲ್ಲಾಪುರ ರಸ್ತೆಯ ಮಹಮ್ಮದ್ ಅನೀಸ್ ಇಜಾಜ ಅಹ್ಮದ ಬೇಗ(20) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿತನಿಂದ 902 ಗ್ರಾಂ. ಗಾಂಜಾ ಹಾಗೂ 200ರೂ. ನಗದು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾದ ಮೌಲ್ಯ ಐವತ್ತು ಸಾವಿರ ರೂಪಾಯಿ ಎಂದು ಹೇಳಲಾಗಿದೆ. ಸಿಪಿಐ ರಂಗನಾಥ ನೀಲಮ್ಮನವರ ನೇತೃತ್ವದಲ್ಲಿ ಪಿಎಸ್ಐ ಪರಶುರಾಮ ಮಿರ್ಜಗಿ, ಪಿಎಸ್ಐ ಹನುಮಂತಪ್ಪ ಸಿಬ್ಬಂದಿಗಳಾದ ಗಣಪತಿ ಹುನ್ನಳ್ಳಿ, ಕೋಟೇಶ ನಾಗರವಳ್ಳಿ, ಅಣ್ಣಪ್ಪ…
ಮಳೆಯಿಂದ ಅರಣ್ಯದಲ್ಲಿ ಬಿದ್ದ ಕೋಟ್ಯಾಂತರರೂ. ಮೌಲ್ಯದ ಮರಗಳ ಉತ್ಪನ್ನವನ್ನು ಅರಣ್ಯ ಇಲಾಖೆ ಸದ್ಬಳಕೆ ಮಾಡಿಕೊಳ್ಳಲು ಶಾಸಕ ಹೆಬ್ಬಾರ್ ಸೂಚನೆ
Share Now ಮುಂಡಗೋಡ : ತಾಲೂಕಿನ ಗುಂಜಾವತಿ, ಮೈನಳ್ಳಿ ಭಾಗದಲ್ಲಿ ಇತ್ತೀಚೆಗೆ ಬಿದ್ದ ಮಳೆಗಾಳಿಯಿಂದ ಅರಣ್ಯದಲ್ಲಿ ಕೋಟ್ಯಾಂತರರೂ. ಮೌಲ್ಯದ ಮರಗಳು ಬಿದ್ದಿದೆ. ಈ ಬಗ್ಗೆ ಅರಣ್ಯ ಇಲಾಖೆಗೆ ಉತ್ಪನ್ನ ಆಗುವಂತೆ ಸದ್ಬಳಕೆ ಮಾಡಿಕೊಳ್ಳಿ ಎಂದು ಶಾಸಕರಾದ ಶಿವರಾಮ ಹೆಬ್ಬಾರ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಅವರು ತಾ.ಪಂ. ಸಭಾಭವನದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಅರಣ್ಯ ಬೆಳೆಸಬೇಕಾದ ಜವಾಬ್ದಾರಿ ನಮಗೆ, ನಿಮಗೆ ಹಾಗೂ ಸಾರ್ವಜನಿಕರಿಗೂ ಇದೆ. ನಮ್ಮ ಜನರ ಭಾವನೆಗಳಿಗೆ…
ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ಏ.30ರೊಳಗೆ `ಇ-ಕೆವೈಸಿ’ ಮಾಡದಿದ್ದರೆ ಮೇ.1ರಿಂದ ಸಿಗಲ್ಲ ರೇಷನ್ |
Share Now ಬೆಂಗಳೂರು : ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ. ಪಡಿತರ ಚೀಟಿದಾರರು ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ಮೂಲಕ ತಮ್ಮ ಗುರುತು, ನೋಂದಣಿ ಅಥವಾ ಮರು ನೋಂದಣಿ ಮಾಡಿಸದೆ ಇರುವ ಎಲ್ಲಾ ಸದಸ್ಯರು ಏ.30 ರೊಳಗೆ…
ನಿವೃತ್ತ ಡಿಜಿಪಿ `ಓಂ ಪ್ರಕಾಶ್ ಹತ್ಯೆ’ ಪ್ರಕರಣ `CCB’ ಗೆ ವರ್ಗಾಯಿಸಿ ಆದೇಶ.!
Share Now ಬೆಂಗಳೂರು : ರಾಜ್ಯದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ನಿವೃತ್ತ ಐಜಿ ಮತ್ತು ಡಿಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಆದೇಶಿಸಿದ್ದಾರೆ. ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಲು ಸಿಸಿಬಿ ತನಿಖೆಗೆ…
ಚಿಗಳ್ಳಿಯ ಹಿರೇಕೆರೆಯಲ್ಲಿ ನೂರಾರು ಮೀನುಗಳ ಸಂಶಯಾಸ್ಪದ ಸಾವು..!
Share Now ಮುಂಡಗೋಡ : ತಾಲೂಕಿನ ಚಿಗಳ್ಳಿಯ ಹಿರೇ ಕೆರೆಯಲ್ಲಿ ನೂರಾರು ಮೀನುಗಳು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದೆ. ಚಿಗಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಕೆರೆಯಲ್ಲಿ ಸರ್ವೆ ನಂಬರ್ 49ರಲ್ಲಿ ನೂರಾರು ಸಂಖ್ಯೆಯಲ್ಲಿ ಮೀನುಗಳು ಸಾವನ್ನಪ್ಪುತ್ತಿವೆ.ಮೌಲಾಲಿ ಮಕಾಂದಾರ ಎಂಬುವರು ಈ ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಲು ಟೆಂಡರ್ ಪಡೆದಿದ್ದರು. ಮೀನುಗಳ ಸಾವಿಗೆ ಖಚಿತವಾದ ಕಾರಣ ತಿಳಿದು ಬಂದಿಲ್ಲ.
ಉಕ್ಕು ಆಮದು ಮೇಲೆ ಶೇ.12 ಸುರಕ್ಷತಾ ಸುಂಕ ವಿಧಿಸಿದ ಕೇಂದ್ರ ಸರ್ಕಾರ: ಪ್ರಧಾನಿ ಮೋದಿಗೆ HDK ಕೃತಜ್ಞತೆ
Share Now ನವದೆಹಲಿ: ದೇಶೀಯ ಉಕ್ಕು ಉದ್ಯಮದ ಹಿತರಕ್ಷಣೆ ನಿಟ್ಟಿನಲ್ಲಿ ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ ರಕ್ಷಣಾತ್ಮಕ ಕ್ರಮ ಕೈಗೊಂಡಿದ್ದು; ಉಕ್ಕು ಆಮದಿನ ಮೇಲೆ ಕೇಂದ್ರವು ಶೇ.12ರಷ್ಟು ಸುರಕ್ಷತಾ ಸುಂಕವನ್ನು ವಿಧಿಸಿದೆ. ಈ ನಿಟ್ಟಿನಲ್ಲಿ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದು, ಈ ಉಪಕ್ರಮವು ದೇಶೀಯ ಉಕ್ಕು ಉದ್ಯಮಕ್ಕೆ ಪ್ರೋತ್ಸಾಹದ ಜತೆಗೆ ಮತ್ತಷ್ಟು ಶಕ್ತಿ ತುಂಬಲಿದೆ ಎಂದು ಹೇಳಿದ್ದಾರೆ. ಮಿಶ್ರಲೋಹವಲ್ಲದ ಮತ್ತು ಮಿಶ್ರಲೋಹದ ಉಕ್ಕಿನಿಂದ…