ಹಳ್ಳದಲ್ಲಿ ತೇಲಿ ಬಂದ ಚಿರತೆ ಶವ…
ಮುಂಡಗೋಡ : ದೊಡ್ಡಹಾರವಳ್ಳಿ ಭಾಗದ ಅರಣ್ಯದಲ್ಲಿ ಚಿರತೆ ಸಾವನಪ್ಪಿದೆ.ಗುರುವಾರ ಅಲ್ಲಿ ಹರಿದಿರುವ ಹಳ್ಳದಲ್ಲಿ ಚಿರತೆ ಶವ ತೇಲಿ ಬಂದಿದೆ. 2.5…
ಮುಂಡಗೋಡ : ದೊಡ್ಡಹಾರವಳ್ಳಿ ಭಾಗದ ಅರಣ್ಯದಲ್ಲಿ ಚಿರತೆ ಸಾವನಪ್ಪಿದೆ.ಗುರುವಾರ ಅಲ್ಲಿ ಹರಿದಿರುವ ಹಳ್ಳದಲ್ಲಿ ಚಿರತೆ ಶವ ತೇಲಿ ಬಂದಿದೆ. 2.5 ವರ್ಷದ ಗಂಡು ಚಿರತೆ ಇದಾಗಿದೆ ಎಂದು ಅಂದಾಜಿಸಲಾಗಿದೆ. ಚಿರತೆಯ ದೇಹ ಕೊಳೆತಿದ್ದು ದೇಹದ ಮೇಲೆ ಹುಳಗಳಾಗಿವೆ. ಪಶುವೈದ್ಯರು ಆಗಮಿಸಿ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಹಳ್ಳದ ನೀರಿನ ರಭಸಕ್ಕೆ ಚಿರತೆ ಸಾವನಪ್ಪಿದೆ ಎನ್ನಲಾಗಿದೆ.7-8 ದಿನಗಳ ಹಿಂದೆಯೇ ಈ ಚಿರತೆ ಸಾವನ್ನಪ್ಪಿದ್ದು ಅದರ ದೇಹದ ಮೇಲೆಲ್ಲಾ ಹುಳುಗಳಾಗಿದೆ ಎಂದು ಮುಖ್ಯ ಪಶು ವೈದ್ಯಾಧಿಕಾರಿ ಡಾ.ಕೃಷ್ಣಮೂರ್ತಿ ಹೆಗಡೆ ತಿಳಿಸಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಕುರ್ಚಿ ಕುರಿತು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಮಹತ್ವದ ಹೇಳಿಕೆ ನೀಡಿದ್ದು, ಅಧಿಕಾರದಲ್ಲಿರುವ ಯಾರೂ ಬೇಕಾದರೂ ಟವೆಲ್ ಹಾಕಬಹುದು. ನಮ್ಮಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹತೆ ಇರುವವರು ತುಂಬಾ ಜನರಿದ್ದಾರೆ ಎಂದು ತಿಳಿಸಿದ್ದಾರೆ. ಮುಡಾ ಹಗರಣ ಬಯಲಾಗಿರುವುದು ಮುಖ್ಯಮಂತ್ರಿಗಳ ಕುರ್ಚಿಗೆ ಟವೆಲ್ ಹಾಕಿದವರಿಂದ ಎಂಬ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಅಧಿಕಾರದಲ್ಲಿರುವ ಯಾರೂ ಬೇಕಾದರೂ ಸಿಎಂ ಕುರ್ಚಿಗೆ ಟವೆಲ್ ಹಾಕಬಹುದು. ನಮ್ಮಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹತೆ ಇರುವವರು ತುಂಬಾ…
ಮುಂಡಗೋಡ : ನಿರಂತರ ಮಳೆ ಹಿನ್ನೆಲೆಯಲ್ಲಿ ಮುಂಡಗೋಡ ಪಟ್ಟಣದ ಹೊರವಲಯದಲ್ಲಿರುವ ಅಮ್ಮಾಜಿ ಕೆರೆ ತುಂಬಿ ಹೆಚ್ಚುವರಿ ನೀರು ಯಲ್ಲಾಪುರ ರಸ್ತೆಯಲ್ಲಿ ಹರಿಯುತ್ತಿದೆ. ಯಲ್ಲಾಪುರ ರಸ್ತೆಯ ಮೇಲೆ ನೀರು ಹರಿಯುತ್ತಿರುವ ಕಾರಣ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಗಿದೆ. ಪ್ರತಿ ವರ್ಷ ಮಳೆ ಹೆಚ್ಚಾದಾಗಲೆಲ್ಲ ಇದೇ ರೀತಿಯ ನೀರು ಈ ರಸ್ತೆಯ ಮೇಲೆ ಹರಿಯುವುದು ಸಾಮಾನ್ಯವಾಗಿದೆ. ಆದರೆ ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಶಾಶ್ವತ ಪರಿಹಾರ ಕ್ರಮ ಕೈಗೊಳ್ಳದಿರುವುದು ನಿಜಕ್ಕೂ ದುರ್ದೈವದ ಸಂಗತಿಯಾಗಿದೆ. ಜನಪ್ರತಿನಿಧಿಗಳು ಇದೇ ರಸ್ತೆಯಲ್ಲಿ ಓಡಾಡಿದರೂ…
ಮುಂಡಗೋಡ : ತಾಲೂಕಿನ ಮಳಗಿ ಸಮೀಪದ ಧರ್ಮ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮಳಗಿ-ದಾಸನಕೊಪ್ಪ ರಸ್ತೆ ಜಲಾವೃತವಾಗಿದೆ. ಮಿನಿ ಸೇತುವೆ ಮೇಲೆ ನೀರು ಹರಿಯುತ್ತಿರುವ ಕಾರಣ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಧಾರಾಕಾರ ಮಳೆಯಿಂದಾಗಿ ಧರ್ಮ ಜಲಾಶಯಕ್ಕೆ ನೀರು ಹರಿದು ಬರುತ್ತಿವೆ. ಮಳಗಿ-ದಾಸನಕೊಪ್ಪ ರಸ್ತೆ ಮೇಲೆ ನೀರು ಹರಿಯುತ್ತಿರುವುದರಿಂದ ಸಾರ್ವಜನಿಕರು, ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ.
ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ತಮ್ಮ ದೇಶದ ಸೇವೆಯಲ್ಲಿ ಅಂತಿಮ ತ್ಯಾಗ ಮಾಡಿದ ಧೈರ್ಯಶಾಲಿಗಳಿಗೆ ಗೌರವ ಸಲ್ಲಿಸಿದರು. ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧದ ವಿಜಯದ 25 ನೇ ವಾರ್ಷಿಕೋತ್ಸವದ ನೆನಪಿಗಾಗಿ ಅವರು ಸ್ಮಾರಕಕ್ಕೆ ಭೇಟಿ ನೀಡಿದರು. ಜುಲೈ 26, 1999 ರಂದು, ಭಾರತೀಯ ಸೇನೆಯು “ಆಪರೇಷನ್ ವಿಜಯ್” ನ ಯಶಸ್ವಿ ಪರಾಕಾಷ್ಠೆಯನ್ನು ಘೋಷಿಸಿತು, ಲಡಾಖ್ನ ಕಾರ್ಗಿಲ್ನ ಹಿಮಾವೃತ ಎತ್ತರದಲ್ಲಿ ಸುಮಾರು ಮೂರು ತಿಂಗಳ ಸುದೀರ್ಘ ಯುದ್ಧದ ನಂತರ ವಿಜಯವನ್ನು…
ಕಾರವಾರ: ‘ಶಿರೂರು ಗುಡ್ಡ ಕುಸಿತ ದುರಂತದಲ್ಲಿಕಣ್ಮರೆಯಾದ ಕೇರಳದ ಲಾರಿಯ ಕ್ಯಾಬಿನ್ ಗಂಗಾವಳಿ ನದಿಯಲ್ಲಿ ಐದು ಮೀಟರ್ ಆಳದಲ್ಲಿ ಇರುವುದು ಪತ್ತೆಯಾಗಿದೆ’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ತಿಳಿಸಿದರು.ನೊಯ್ದಾದಿಂದ ತರಲಾದ ಡೋನ್ ಆಧಾರಿತ ಶೋಧನ ಯಂತ್ರದ ಮೂಲಕ ತಜ್ಞರು ದಿನವಿಡೀ ಲಾರಿ ಪತ್ತೆ ಕಾರ್ಯ ನಡೆಸಿದರು. ನದಿ ಮೇಲ್ಮನಲ್ಲಿ ಹಾರಾಟ ನಡೆಸಿದ ಯಂತ್ರ ನಾಲ್ಕು ಕಡೆ ಲೋಹದ ವಸ್ತುಗಳಿರುವುದನ್ನು ಪತ್ತೆ ಮಾಡಿತು. ‘ನದಿಯ ದಡದಿಂದ 60 ಮೀಟರ್ ದೂರ ಮತ್ತು 6 ಮೀಟರ್ ಆಳ ಲಾರಿಯ ಕ್ಯಾಬಿನ್ ಇರುವುದು ದೃಢಪಟ್ಟಿದೆ….
ಬೆಂಗಳೂರು : ನಾನು 40 ವರ್ಷಗಳ ಕಾಲ ಕಳಂಕರಹಿತ ರಾಜಕೀಯ ಜೀವನ ನಡೆಸಿದಕ್ಕೆ ನನ್ನ ಮೇಲಿನ ಹೊಟ್ಟೆ ಕಿಚ್ಚಿನಿಂದ ವಿರೋಧ ಪಕ್ಷದವರು ವೈಯಕ್ತಿಕ ದಾಳಿ ಮಾಡಿ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಮುಖ್ಯಮ೦ತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ, ಮುಡಾ ನಿವೇಶನ ಹಂಚಿಕೆ ಹಗರಣ ಮತ್ತು ವಾಲ್ಮೀಕಿ ನಿಗಮ ಹಗರಣದ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ವಿಪಕ್ಷಗಳು ಘೋಷಣೆಗಳನ್ನು ಕೂಗಿದವು. ಗದ್ದಲದ ನಡುವೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು 40 ವರ್ಷಗಳ ಕಾಲ…
ನವದೆಹಲಿ : ಜೆಪಿ ನಡ್ಡಾ ಅವರ ಅವಧಿ ಮುಗಿದ ನಂತರ ಪಕ್ಷದ ಮುಂದಿನ ನಾಯಕತ್ವದ ಬಗ್ಗೆ ಊಹಾಪೋಹಗಳು ಹೆಚ್ಚುತ್ತಿರುವುದರಿಂದ ಬಿಜೆಪಿ ಆಗಸ್ಟ್ ಅಂತ್ಯದ ವೇಳೆಗೆ ಹೊಸ ಕಾರ್ಯಕಾರಿ ಅಧ್ಯಕ್ಷರನ್ನ ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಡ್ಡಾ ಅವರ ಅಧಿಕಾರಾವಧಿ ಜೂನ್ 2024ರಲ್ಲಿ ಕೊನೆಗೊಂಡಿತು. ಆದರೆ ಕಳೆದ ವರ್ಷ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಅಂಗೀಕರಿಸಿದ ನಿರ್ಣಯದ ಪ್ರಕಾರ, ಪಕ್ಷದ ಹೊಸ ಅಧ್ಯಕ್ಷರನ್ನ ಆಯ್ಕೆ ಮಾಡುವವರೆಗೂ ಅವರು ಅಧಿಕಾರದಲ್ಲಿ ಮುಂದುವರಿಯುತ್ತಾರೆ.
ಬೆಂಗಳೂರು : ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET)ಯನ್ನು ರದ್ದುಪಡಿಸಿ ಹಳೆಯ ಸಾಮಾನ್ಯ ಪ್ರವೇಶ ಪರೀಕ್ಷೆ (CET) ವ್ಯವಸ್ಥೆಯನ್ನೇ ಮುಂದುವರೆಸುವ ಮಹತ್ವದ ನಿರ್ಣಯವನ್ನು ವಿಧಾಮಂಡಲದ ಉಭಯ ಸದನಗಳಲ್ಲಿ ಗುರುವಾರ ಮಂಡಿಸಿ ಅಂಗೀಕರಿಸಲಾಗಿದೆ. ಪ್ರತಿಪಕ್ಷಗಳ ಸದಸ್ಯರ ವಿರೋಧ ನಡುವೆಯೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ವಿಧಾನಸಭೆಯಲ್ಲಿ ಹಾಗೂ ವಿಧಾನಪರಿಷತ್ ನಲ್ಲಿ ಉಪಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ್ ಅವರು ನೀಟ್ ಪರೀಕ್ಷೆಯ ವಿರುದ್ಧ ನಿರ್ಣಯವನ್ನು ಮಂಡನೆ ಮಾಡಿದರು. ಪ್ರತಿಪಕ್ಷಗಳ…
ಬೆಂಗಳೂರು : “ಬಿಜೆಪಿ ಕಾಲದಲ್ಲಿ ಅಕ್ರಮವಾಗಿ ಮುಡಾ ಸೈಟು ಹಂಚಿಕೆ ಮಾಡಲಾಗಿದ್ದು, ಈ ನಿವೇಶನಗಳನ್ನು ಬಿಜೆಪಿಯವರೇ ಹಂಚಿಕೆ ಮಾಡಿಕೊಂಡಿದ್ದಾರೆ. ಶೀಘ್ರದಲ್ಲೇ ಆ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು “ಎರಡು ವರ್ಷಗಳ ಹಿಂದೆಯೇ ಬಿಜೆಪಿ ಆಡಳಿತಾವಧಿಯಲ್ಲಿ ಮುಡಾ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬಿಜೆಪಿಯವರು ಸದನ ಪ್ರಾರಂಭದ ದಿನವೇ ಈ ವಿಚಾರ ಪ್ರಸ್ತಾಪ ಮಾಡಬಹುದಿತ್ತಲ್ಲವೇ? ಅವರ ಹಗರಣಗಳು ಈಗ ಹೊರಗೆ…