ಮುಂಡಗೋಡಿನಲ್ಲಿ ಭರ್ಜರಿ ಓಕುಳಿ…. ಬಣ್ಣದಾಟ…..
ಮುಂಡಗೋಡ : ಮುಂಡಗೋಡ ನಗರದಲ್ಲಿ ಬುಧವಾರ ಹೋಳಿ ಹಬ್ಬದ ಅಂಗವಾಗಿ ಓಕುಳಿ, ಬಣ್ಣದಾಟ ಭರ್ಜರಿಯಾಗಿ ನಡೆಯಿತು. ಮುಂಡಗೋಡ ಪಟ್ಟಣದ ಅರಣ್ಯ…
ಮುಂಡಗೋಡ : ಮುಂಡಗೋಡ ನಗರದಲ್ಲಿ ಬುಧವಾರ ಹೋಳಿ ಹಬ್ಬದ ಅಂಗವಾಗಿ ಓಕುಳಿ, ಬಣ್ಣದಾಟ ಭರ್ಜರಿಯಾಗಿ ನಡೆಯಿತು. ಮುಂಡಗೋಡ ಪಟ್ಟಣದ ಅರಣ್ಯ ಇಲಾಖೆಯ ಆವರಣ, ಹೆಸ್ಕಾಂ ಕಚೇರಿ ಆವರಣ, ನಂದೀಶ್ವರ ನಗರ, ಹೊಸ ಓಣಿ, ಬಸವನಬೀದಿ, ಆನಂದನಗರ, ಕಂಬಾರಗಟ್ಟಿ ಪ್ಲಾಟ, ಹಳೂರ ಓಣಿ, ನೆಹರುನಗರ ಸೇರಿದಂತೆ ವಿವಿಧೆಡೆಗಳಲ್ಲಿ ಪುಟ್ಟ ಮಕ್ಕಳಿಂದ ಹಿಡಿದು ಮಹಿಳೆಯರು, ಯುವಕರು ಸೇರಿದಂತೆ ಹಿರಿಯ ನಾಗರಿಕರು ಬಣ್ಣ ಎರಚಿ….. ಬಣ್ಣದಾಟದಲ್ಲಿ ಖುಷಿಪಟ್ಟರು. ಬಿಸಿಲಿನ ನಡುವೆಯೂ ಯುವಕರು ರಂಗಿನಾಟ ರಂಗೇರಿತ್ತು. ಯುವಕರು ಬೈಕುಗಳಲ್ಲಿ ಸಂಚರಿಸುತ್ತಾ, ಓಣಿ ಕ್ರಾಸ್…
ಬೆಂಗಳೂರು: ವಕ್ಫ್ (ತಿದ್ದುಪಡಿ) ಮಸೂದೆಯ ವಿರುದ್ಧ ಕರ್ನಾಟಕ ವಿಧಾನಸಭೆ ಬುಧವಾರ ನಿರ್ಣಯವನ್ನು ಅಂಗೀಕರಿಸಿತು. ಸುದ್ದಿ ಸಂಸ್ಥೆ ಎಎನ್ಐ ಪ್ರಕಾರ, ಈ ಮಸೂದೆಯನ್ನು ರಾಜ್ಯದ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಂಡಿಸಿದರು. ವಕ್ಫ್ (ತಿದ್ದುಪಡಿ) ಮಸೂದೆ, 2024 ರಾಜ್ಯದ ಜನರ ಸಾರ್ವತ್ರಿಕ ಆಕಾಂಕ್ಷೆಗಳಿಗೆ ವಿರುದ್ಧವಾಗಿರುವುದರಿಂದ ಸದನವು ಸರ್ವಾನುಮತದಿಂದ ತಿರಸ್ಕರಿಸಿದೆ ಮತ್ತು ಶಾಸನವನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರವನ್ನು ಒತ್ತಾಯಿಸಿದೆ ಎಂದು ಎಚ್.ಕೆ.ಪಾಟೀಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ ಎಂದಿದ್ದಾರೆ. ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ…
ಬೆಂಗಳೂರು : 2025ರ ಮಾಚ/ಏಪ್ರಿಲ್ ಮಾಹೆಯಲ್ಲಿ ನಡೆಯುವ ಎಸ್.ಎಸ್.ಎಲ್.ಸಿ.ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಅನಧಿಕೃತವಾಗಿ ನೊಂದಾಯಿಸಿರುವ ವಿದ್ಯಾರ್ಥಿಗಳನ್ನು ರದ್ದುಪಡಿಸಿರುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮಹತ್ವದ ಆದೇಶ ಹೊರಡಿಸಿದೆ. ಮೇಲಿನ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ ಶಾಲಾ ಸಂಕೇತ NA 0142 ಶ್ರೀ ಶಿವಾನಂದ ಭಾರತಿ ಪ್ರೌಢಶಾಲೆ, ಖೇಮಲಾಪುರ, ರಾಯಭಾಗ ತಾ, ಚಿಕ್ಕೋಡಿ ಜಿಲ್ಲೆ ಈ ಶಾಲೆಗೆ ಸಂಬಂಧಿಸಿದಂತೆ 2025ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ. ಮುಖ್ಯಪರೀಕ್ಷೆಗೆ 31 ವಿದ್ಯಾರ್ಥಿಗಳು ಪುನರಾವರ್ತಿತ CCERF 06…
ಫ್ಲೋರಿಡಾ : ನಾಸಾದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ 286 ದಿನಗಳ (ಸುಮಾರು 9 ತಿಂಗಳು) ನಂತರ ಭೂಮಿಗೆ ಮರಳಿದ್ದಾರೆ. ಭಾರತೀಯ ಕಾಲಮಾನ ಬೆಳಗಿನ ಜಾವ 3:30 ರ ಸುಮಾರಿಗೆ ಫ್ಲೋರಿಡಾ ಕರಾವಳಿಯ ಸಮುದ್ರದಲ್ಲಿ ಸ್ಪೇಸ್ಎಕ್ಸ್ನ ಡ್ರ್ಯಾಗನ್ ಕ್ಯಾಪ್ಸುಲ್ ಇಳಿಯಿತು. ಈ ಇಳಿಯುವಿಕೆಯೊಂದಿಗೆ ಐತಿಹಾಸಿಕ ಬಾಹ್ಯಾಕಾಶ ಯಾತ್ರೆ ಅಂತ್ಯಗೊಂಡಿತು. ಈ ಮಿಷನ್ ಕೇವಲ 8 ದಿನಗಳದ್ದಾಗಿತ್ತು. ಆದರೆ ಅದು 9 ತಿಂಗಳುಗಳನ್ನು ತೆಗೆದುಕೊಂಡಿತು. ಕ್ಯಾಪ್ಸುಲ್ ಸಾಗರದಲ್ಲಿ ಯಶಸ್ವಿಯಾಗಿ ಇಳಿದ ಕ್ಷಣವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಇಬ್ಬರೂ…
ಮುಂಡಗೋಡ : ಧರ್ಮಸ್ಥಳದ ಸೌಜನ್ಯ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ಆಗಬೇಕು ಎಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಚಿದಾನಂದ ಹರಿಜನ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಧರ್ಮಸ್ಥಳದ ಸೌಜನ್ಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳು ಯಾರೇ ಆಗಿರಲಿ ಅವರಿಗೆ ಕಠಿಣ ಶಿಕ್ಷೆ ಆಗಲೇಬೇಕು. ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರು ತನಿಖೆ ನಡೆಸಿ ತಪ್ಪಿತಸ್ಥರನ್ನು ಜೈಲಿಗೆ ಕಳಿಸಬೇಕು ಎಂದು ಅವರು ಆಗ್ರಹಿಸಿದರು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ರಾಜ್ಯಾದ್ಯಂತ ತಲ್ಲಣ ಮೂಡಿಸಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
ಬೆಂಗಳೂರು : ಬೆಳಗಾವಿಯಲ್ಲಿ ಕನ್ನಡಿಗ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ, ಇದೇ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕರೆ ನೀಡಿದ್ದಾರೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕನ್ನಡ ಸಂಘಟನೆಗಳ ಸಭೆ ನಡೆದಿದ್ದು ಈ ಒಂದು ಸಭೆಯಲ್ಲಿ ಮಾರ್ಚ್ 22 ರಂದು ಕರ್ನಾಟಕ ಬಂದ್ ಬಹುತೇಕ ಫಿಕ್ಸ್ ಆದಂತಾಗಿದೆ. ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾರ್ಚ್ 22ರಂದು ಕರ್ನಾಟಕ ರಾಜ್ಯ ಬಂದ್ ಮಾಡುತ್ತಿದ್ದೇವೆ. ನೆರೆ ರಾಜ್ಯ…
ಬೆಂಗಳೂರು : ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಿಗೆ ಸರ್ಕಾರ ಬಿಗ್ ಶಾಕ್ ನೀಡಿದ್ದು, ವೃಂದ ಮತ್ತು ನೇಮಕಾತಿ ನಿಯಮಗಳು ಬೇರೆ ಆಗಿರುವುದರಿಂದ ಸರ್ಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಿಗೆ ಮುಖ್ಯ ಶಿಕ್ಷಕ ಹುದ್ದೆ ಮುಂಬಡ್ತಿ ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದರು. ವಿಧಾನಪರಿಷತ್ನ ಪ್ರಶೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು,ಸದಸ್ಯ ರಾಮೋಜಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರೊ.ಎಲ್.ಆರ್ ವೈದ್ಯನಾಥನ್ ವರದಿ ಆಧರಿಸಿ ದೈಹಿಕ ಶಿಕ್ಷಕರಿಗೆ ಮುಂಬಡ್ತಿ…
ಬೆಂಗಳೂರು: ಇಂದು ಪುನೀತ್ ರಾಜ್ ಕುಮಾರ್ ಅವರ 50ನೇ ಹುಟ್ಟು ಹಬ್ಬ. ಇಂದಿನ ಪುನೀತ್ ರಾಜ್ ಕುಮಾರ್ ಜನ್ಮದಿನಕ್ಕೆ ಸಿಎಂ ಸಿದ್ಧರಾಮಯ್ಯ ಅವರು ನಿಷ್ಕಲ್ಮಷ ಮನಸಿನ ಹಸನ್ಮುಖಿ ವ್ಯಕ್ತಿಯಾಗಿದ್ದ ಅಪ್ಪುವಿಗೆ ನನ್ನ ನಮನಗಳು ಅಂತ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ನಟನೆಯ ಜೊತೆಗೆ ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಪುನೀತ್ ರಾಜ್ಕುಮಾರ್ ನೂರಾರು ದುರ್ಬಲ ಜೀವಗಳಿಗೆ ಬದುಕಿನ ಹಾದಿ ತೋರಿದ್ದರು. ಬಡವ, ಬಲ್ಲಿದನೆನ್ನದೆ ಸರ್ವರನ್ನೂ ಪ್ರೀತಿಸುತ್ತಿದ್ದ, ಸದಾ ಹಸನ್ಮುಖಿಯಾಗಿದ್ದ…
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನು ಅಗಲಿದ್ದಾರೆ. ಆದರೇ ಅವರ ಸಾಧನೆ, ನಟಿಸಿದಂತ ಚಿತ್ರಗಳ ಮೂಲಕ ಇನ್ನೂ ನೆನಪಾಗಿಯೇ ಉಳಿದಿದ್ದಾರೆ. ಇಂದು ಪುನೀತ್ ರಾಜ್ ಕುಮಾರ್ ಅವರಿಗೆ 50ನೇ ಜನ್ಮ ದಿನದ ಹಿನ್ನಲೆಯಲ್ಲಿ ಅವರ ಸಮಾಧಿ ಸ್ಥಳಕ್ಕೆ ಅಭಿಮಾನಿಗಳ ದಂಡೆ ನೆರೆದಿದೆ. ರಾತ್ರಿಯಿಂದಲೇ ಬೆಂಗಳೂರಿನ ಕಂಠೀರವ ಸ್ಟೂಡಿಯೋದಲ್ಲಿರುವಂತ ಅಪ್ಪು ಸಮಾಧಿ ದರ್ಶನಕ್ಕಾಗಿ ಅಭಿಮಾನಿಗಳು ಸಾಲುಗಟ್ಟಿ ನಿಂತಿದ್ದಾರೆ. ಅಪ್ಪು ಸಮಾಧಿಯ ದರ್ಶನವನ್ನು ಪಡೆಯುತ್ತಿದ್ದಾರೆ. ಇಂದು ಪುನೀತ್ ರಾಜ್ ಕುಮಾರ್ 50ನೇ ಹುಟ್ಟು ಹಬ್ಬ ಹಿನ್ನಲೆಯಲ್ಲಿ ಅಪ್ಪು…