ಮುಂಡಗೋಡ ಐ.ಬಿ. ಬಳಿ ಬೈಕ್ ಅಪಘಾತ : ಓರ್ವನ ಕಾಲಿಗೆ ತೀವ್ರ ಗಾಯ
ಮುಂಡಗೋಡ : ಮುಂಡಗೋಡದ ಐ.ಬಿ. ಬಳಿ ಬೈಕ್ ಅಪಘಾತವಾಗಿದ್ದು, ಓರ್ವನ ಕಾಲಿಗೆ ತೀವ್ರ ಗಾಯವಾದ ಘಟನೆ ನಡೆದಿದೆ. ತಾಲೂಕಿನ ಚವಡಳ್ಳಿ ಗ್ರಾಮದ ಸಹದೇವಪ್ಪ ಮಾಯಣ್ಣವರ್ (71) ಅವರ ಕಾಲಿಗೆ ತೀವ್ರ ಗಾಯವಾಗಿದೆ.
ಮುಂಡಗೋಡ : ಮುಂಡಗೋಡದ ಐ.ಬಿ. ಬಳಿ ಬೈಕ್ ಅಪಘಾತವಾಗಿದ್ದು, ಓರ್ವನ ಕಾಲಿಗೆ ತೀವ್ರ ಗಾಯವಾದ ಘಟನೆ ನಡೆದಿದೆ. ತಾಲೂಕಿನ ಚವಡಳ್ಳಿ ಗ್ರಾಮದ ಸಹದೇವಪ್ಪ ಮಾಯಣ್ಣವರ್ (71) ಅವರ ಕಾಲಿಗೆ ತೀವ್ರ ಗಾಯವಾಗಿದೆ.
ಬೆಂಗಳೂರು: ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಎಂಎಲ್ಸಿ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವುದು ಖಚಿತ ಎಂದು ಸಿಐಡಿ ಮೂಲಗಳು ತಿಳಿಸಿವೆ. ಅಸಲಿ ವೀಡಿಯೋ ಇದೀಗ ಸಿಐಡಿಗೆ ಲಭ್ಯವಾಗಿದೆ. ಸಿ.ಟಿ.ರವಿ ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿತ್ತು. ಆದರೆ, ಅದಕ್ಕೆ ಸಿ.ಟಿ.ರವಿ ನಿರಾಕರಿಸಿದ್ದರು. ಕೊನೆಗೆ ಡಿಪಿಎಆರ್ನಿಂದ ಅಸಲಿ ವೀಡಿಯೋವನ್ನು ಸಿಐಡಿ ವಶಕ್ಕೆ ಪಡೆದಿತ್ತು. ಬೆಳಗಾವಿ ಅಧಿವೇಶನದ ವೇಳೆ ಮೇಲ್ಮನೆಯಲ್ಲಿ ನಡೆದಿದ್ದ ಘಟನಾವಳಿಗಳ ಕುರಿತು ವೀಡಿಯೋ-ಆಡಿಯೋ ದಾಖಲೆ ನೀಡುವಂತೆ ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆಗೆ (ಡಿಎಪಿಆರ್)…
ಮುಂಡಗೋಡ : ತಾಲೂಕಿನ 16 ಗ್ರಾಮ ಪಂಚಾಯತಗಳಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾಯಕ ಬಂಧುಗಳನ್ನು ಸಜ್ಜುಗೊಳಿಸುವ ಸಲುವಾಗಿ ಕಾಯಕಬಂಧುಗಳ ತಾಲೂಕಾ ಮಟ್ಟದ ತರಬೇತಿ ಕಾರ್ಯಾಗಾರವು ಗುರುವಾರ ಮುಂಡಗೋಡ ತಾಲೂಕ ಪಂಚಾಯತ ಸಭಾಭವನದಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಟಿ.ವೈ.ದಾಸನಕೊಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ಈ ತರಬೇತಿಯು ಲೋಯಲಾ ವಿಕಾಸ ಕೇಂದ್ರ ಮುಂಡಗೋಡ ರವರ ಸಹಭಾಗಿತ್ವದಲ್ಲಿ ದಿ.12-02-2025ರ ವರೆಗೆ ಜರುಗಲಿದ್ದು ಒಟ್ಟೂ 300 ಕಾಯಕ ಬಂಧುಗಳಿಗೆ ತರಬೇತಿ ನೀಡುವ ಉದ್ದೇಶಹೊಂದಲಾಗಿದೆ.ತರಬೇತಿ ಕಾರ್ಯಾಗಾರವನ್ನು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ…
ಶಿವಮೊಗ್ಗ: ಕೆಲಸದ ವಿಚಾರವಾಗಿ ಜಗಳ ಮಾಡಿಕೊಂಡ ವೈದ್ಯೆ ಹಾಗೂ ನರ್ಸ್ ಇಬ್ಬರು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಶಿವಮೊಗ್ಗದ ಬಿಆರ್ ಪಿಯಲ್ಲಿ ನಡೆದಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಬಿಆರ್ ಪಿಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಡಾ.ಹಂಸವೇಣಿ ಹಾಗೂ ನರ್ಸ್ ಸುಕನ್ಯಾ ಎಂಬುವರು ಕೆಲಸದ ವಿಚಾರವಾಗಿ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಕೆಲಸದ ವಿಚಾರದಲ್ಲಿ ವೈದ್ಯೆ ಕಿರುಕುಳ ನೀಡುತ್ತಿದ್ದಾರೆ ಎಂಬುದಾಗಿ ಆರೋಪಿಸಿ ನಿದ್ರೆ ಮಾತ್ರೆ ಸೇವಿಸಿ ನರ್ಸ್…
ಮುಂಡಗೋಡ : ಬೆಳೆ ವಿಮೆ ಪರಿಹಾರಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದವರು ಗುರುವಾರ ಮಳಗಿಯಲ್ಲಿ ರಸ್ತೆ ತಡೆ ನಡೆಸಿದರು. ಅತಿವೃಷ್ಟಿಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಆದರೆ, ಈವರೆಗೂ ವಿಮಾ ಕಂಪನಿ ಪರಿಹಾರ ಜಮಾ ಮಾಡಿಲ್ಲ. ರೈತರ ಸಮಸ್ಯೆಯನ್ನು ಸಹ ಆಲಿಸಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.ಕೂಡಲೇ ರೈತರ ಖಾತೆಗಳಿಗೆ ಪರಿಹಾರ ಜಮಾ ಮಾಡಬೇಕು. ಸರ್ಕಾರ ರೈತರ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು. ಅರಣ್ಯ ಅತಿಕ್ರಮಣದಾರರಿಗೆ ಸಹ ಬೆಳೆ ಪರಿಹಾರ ಸಿಗಬೇಕು. ಅತಿಕ್ರಮಣ ಭೂಮಿ ಜಿಪಿಎಸ್ ಪ್ರಕ್ರಿಯೆ…
ಬೆಂಗಳೂರು : ಸಚಿವರಾಗಿದ್ದ ಬಿ.ನಾಗೇಂದ್ರ ಅವರಿಗೆ ವಾಲ್ಮೀಕಿ ನಿಗಮದ ಹಗರಣದಿಂದ ಕ್ಲೀನ್ ಚಿಟ್ ಸಿಕ್ಕಿದ ನಂತರ, ಅವರು ಮತ್ತೆ ಸಂಪುಟಕ್ಕೆ ಸೇರುವ ವಿಚಾರ ಮುನ್ನಲೆಗೆ ಬಂದಿತ್ತು. ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವುದಾಗಿ, ಖುದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡಾ ಸ್ಪಷ್ಟನೆಯನ್ನು ನೀಡಿದ್ದರು. ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಯ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿದ್ದರೂ, ಇವೆಲ್ಲಾ ಸುಳ್ಳು ಎಂದು ಡಿಕೆಶಿ ಹೇಳಿದ್ದರು. ಈಗ, ಮತ್ತೆ ಸಂಪುಟ ವಿಸ್ತರಣೆಯ ಬಗ್ಗೆ ಮಾತುಗಳು ಬಲವಾಗಿ ಕೇಳಿ…
ಮುಂಬೈ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಈ ಸಂಬಂಧ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿ ಸೈಫ್ ಅಲಿ ಖಾನ್ ಮೇಲೆ ತಡರಾತ್ರಿ 2 ಗಂಟೆಗೆ ದಾಳಿ ನಡೆದಿದೆ. ದರೋಡೆಗೆ ಬಂದಿದ್ದ ಕಿಡಿಗೇಡಿಗಳಿಂದ ಈ ಕೃತ್ಯ ಜರುಗಿದೆ. ಸೈಫ್ ಅಲಿ ಖಾನ್ಗೆ ಚಾಕುವಿನಿಂದ ಇರಿದು, ಕಿಡಿಗೇಡಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ನಟನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪತ್ನಿ ಕರೀನಾ ಕಪೂರ್…
ಮುಂಡಗೋಡ : 14 ವರ್ಷಗಳಿಂದ ಎದೆನೋವಿನಿಂದ ಬಳಲುತ್ತಿದ್ದ ಮಂಜುನಾಥ ಗೆಜ್ಜೆಹಳ್ಳಿ ಅದೇ ನೋವಿನಲ್ಲಿ ಕೈ ಕೊರೆದುಕೊಂಡಿದ್ದು, ಚಿಕಿತ್ಸೆಗೆ ದಾಖಲಿಸಿದರೂ ಸ್ಪಂದಿಸದೇ ಸಾವನಪ್ಪಿದ್ದಾರೆ. ಮುಂಡಗೋಡಿನ ರಾಮಾಪುರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ ಗೆಜ್ಜೆಹಳ್ಳಿ (34) ಎದೆನೋವಿನ ಕಾರಣ ಹಲವು ಆಸ್ಪತ್ರೆಗಳಿಗೆ ಅಲೆದಾಡಿದ್ದರು. ಆದರೆ, ಎಲ್ಲಿಯೂ ಅವರ ಸಮಸ್ಯೆ ಬಗೆಹರಿದಿರಲಿಲ್ಲ. ಜನವರಿ 14ರಂದು ಮತ್ತೆ ಎದೆನೋವು ಕಾಣಿಸಿಕೊಂಡಿದ್ದು, ಕೆಮ್ಮು-ಜ್ವರದಿಂದ ಅವರು ಬಳಲಿದರು.ಅನಾರೋಗ್ಯದ ಕಾರಣ ಜೀವನದಲ್ಲಿ ಜಿಗುಪ್ಸೆ ಹೊಂದಿ ಅವರು ಬ್ಲೇಡಿನಿಂದ ಕೈ ಕೊರೆದುಕೊಂಡರು. ರಕ್ತದ ಮೊಡವಿನಲ್ಲಿ ಬಿದ್ದಿದ್ದ ಮಂಜುನಾಥ ಅವರನ್ನು…
ಮುಂಡಗೋಡ : ಇಲ್ಲಿಯ ತಹಶೀಲದಾರ ಕಾರ್ಯಾಲಯದಲ್ಲಿ ಬುಧವಾರ ಶಾಸಕರಾದ ಶಿವರಾಮ ಹೆಬ್ಬಾರ ಅವರು ಭೂಸುರಕ್ಷಾ (ಭೂ ದಾಖಲೆಗಳ ಡಿಜಿಟಲೀಕರಣ) ಯೋಜನೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ವಿ.ಎಸ್.ಪಾಟೀಲ, ತಹಶೀಲದಾರ ಶಂಕರ ಗೌಡಿ, ಮುಖಂಡರಾದ ವಿವೇಕ ಹೆಬ್ಬಾರ, ಗ್ರೆಡ್2 ತಹಶೀಲದಾರ ಚಂದ್ರಶೇಖರ್ ಹೊಸಮನಿ, ಮುಖಂಡರಾದ ಎಚ್.ಎಂ.ನಾಯ್ಕ, ಕೃಷ್ಣ ಹಿರೇಹಳ್ಳಿ, ಪ.ಪಂ.ಅಧ್ಯಕ್ಷೆ ಜಯಸುಧಾ ಭೋವಿವಡ್ಡರ, ತಹಶೀಲದಾರ ಕಚೇರಿಯ ಸಿಬ್ಬಂದಿಗಳು ಇದ್ದರು.
ಮುಂಡಗೋಡ : ತಾಲೂಕಿನ ಓಣಿಕೇರಿಯ ಮಾರುತಿ ದೇವಸ್ಥಾನದ ಬಳಿ ಅಂದರ್ ಬಾಹರ್ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಪೊಲೀಸರಿಗೆ 52 ಇಸ್ಪಿಟ್ ಎಲೆಗಳ ಜೊತೆ ಅಲ್ಲಿ ಹರಡಿಕೊಂಡಿದ್ದ 7400ರೂ ಹಣ ಸಿಕ್ಕಿದೆ. ಬೆಳಗಾವಿಯಲ್ಲಿ ಬಂಗಾರದ ಕೆಲಸ ಮಾಡುವ ಅರುಣ ಅಕ್ಕಸಾಲಿಗ ಜನವರಿ 14ರಂದು ರಾತ್ರಿ 8 ಗಂಟೆಗೆ ಅಂದರ್ ಬಾಹರ್ ಆಟಕ್ಕೆ ಆಮಂತ್ರಿಸಿದ್ದರು. ಅದರ ಪ್ರಕಾರ ಓಣಿಕೇರಿಯ ಚಾಲಕ ಸೋಮನಗೌಡ ಪಾಟೀಲ, ಕೂಲಿ ಕೆಲಸ ಮಾಡುವ ಸಂತೋಷ ಬಾಳಂಬೀಡ, ಪಾಂಡುರಂಗ ಕೋಣನಕೇರಿ ಹಾಗೂ…