Raj Newsline

‘ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ’ ಪಟ್ಟಿ ಪ್ರಕಟ: 20 ಪ್ರಾಥಮಿಕ, 11 ಪ್ರೌಢಶಾಲಾ ಶಿಕ್ಷಕರಿಗೆ ಪ್ರಶಸ್ತಿ

ಬೆಂಗಳೂರು: ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಂತ ಶಿಕ್ಷಕರ ಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಪ್ರಕಟಿಸಲಾಗಿದೆ. 2024-25ನೇ ಸಾಲಿಗೆ 20 ಪ್ರಾಥಮಿಕ ಶಾಲಾ ಶಿಕ್ಷಕರಿಗೆ, 11 ಪ್ರೌಢ ಶಾಲಾ ಶಿಕ್ಷಕರಿಗೆ ಪ್ರಶಸ್ತಿಯನ್ನು ನೀಡಲಾಗಿದೆ.  ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ ಓರ್ವ ವಿಶೇಷ ಶಿಕ್ಷಕ ಒಳಗೊಂಡಂತೆ 11 ಶಿಕ್ಷಕರನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದೆ….

Read More

ಶಿಕ್ಷಕ ರಾಮಚಂದ್ರ ಕಲಾಲ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

@ ರಾಜಶೇಖರ ನಾಯ್ಕ ಮುಂಡಗೋಡ : ತಾಲೂಕಿನ ಜೋಗೇಶ್ವರಹಳ್ಳದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ರಾಮಚಂದ್ರ ಕಲಾಲ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.ರಾಮಚಂದ್ರ ಕಲಾಲ ಅವರಿಗೆ ಈಗಾಗಲೇ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ದೊರಕಿದೆ.  ರಾಮಚಂದ್ರ ಕಲಾಲ ಅವರು ಇತ್ರಕಲೆಯಲ್ಲಿ ಸಿದ್ದಹಸ್ತರು. ಜಲವರ್ಣದಲ್ಲಿ ಹಲವಾರು ಚಿತ್ರಕಲೆಯನ್ನು ಅವರು ರಚಿಸಿದ್ದಾರೆ.ವರ್ಲಿ ಚಿತ್ರಕಲೆಯಿಂದ ಅವರು ಎಲ್ಲರನ್ನೂ ಸಮ್ಮೋಹನಗೊಳಿಸಿದ್ದಾರೆ.ಕಲಾಲ ಅವರು ಹಲವಾರು ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನಗಳನ್ನು ಹಾಗೂ ಸಮೂಹ ಚಿತ್ರಕಲಾ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆ…

Read More

ಬಾಚಣಕಿ, ಸನವಳ್ಳಿ, ಚಿಗಳ್ಳಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಶಾಸಕ ಹೆಬ್ಬಾರ್

ಮುಂಡಗೋಡ : ತಾಲೂಕಿನ ಬಾಚಣಕಿ, ಸನವಳ್ಳಿ ಮತ್ತು ಚಿಗಳ್ಳಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮಂಗಳವಾರ ಶಾಸಕರಾದ ಶಿವರಾಮ ಹೆಬ್ಬಾರ್ ಬಾಗಿನ ಅರ್ಪಿಸಿದರು.  ನಂತರ ಅವರು ಮಾತನಾಡುತ್ತಾ, ತಾಲೂಕಿನ ಜಲಾಶಯ ಭರ್ತಿಯಾಗುತ್ತಿದೆ ಪ್ರತಿ ವರ್ಷ ಜಲಾಶಯ ಅಭ್ಯರ್ಥಿಯಾಗಿ ನಾಡಿಗೆ ಅಭಿವೃದ್ಧಿ ಸಮೃದ್ಧಿ ತರಬೇಕೆಂದು ಭಗವಂತನಲ್ಲಿ ಪ್ರಾರ್ಥಿಸಿಕೊಳ್ಳುತ್ತೇನೆ ಪ್ರತಿವರ್ಷ ಜಲಾಶಯ ಭರ್ತಿಯಾಗಿ ನಾಡಿನ ಹಾಗೂ ತಾಲೂಕಿನ ರೈತರಿಗೆ ಸುಖ ಸಮೃದ್ಧಿ ತರಲಿ. ಉತ್ತಮ ಬೆಳೆ ಬರಲಿ. ಇದರಿಂದ ಎಲ್ಲರಿಗೂ ಒಳ್ಳೆಯದಾಗಲಿ ಎಂದರು.  ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ವಿ.ಎಸ್.ಪಾಟೀಲ್, ಬ್ಲಾಕ್…

Read More

ಅರಣ್ಯ ಸಚಿವರ ಟಿಪ್ಪಣಿಗೆ ಮಾರ್ಪಾಡು : ಕಾನೂನು ಪ್ರಕ್ರಿಯೆ ಜರುಗಿಸದೆ ಒಕ್ಕಲೆಬ್ಬಿಸುವಿಕೆಯಿಲ್ಲ…..

ಶಿರಸಿ : ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸುವುದಿಲ್ಲ ಹಾಗೂ ಕಾನೂನಿನಡಿಯಲ್ಲಿ ಅನಧಿಕೃತ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸುವ ಕಾನೂನು ಪ್ರಕ್ರಿಯೆ ಜರುಗಿಸದೆ ಒಕ್ಕಲೆಬ್ಬಿಸಲಾಗದು ಎಂಬ  ಹೊಸ ಟಿಪ್ಪಣೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶಿಸಿದ್ದಾರೆ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೊರಾಟಗಾರರ  ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.   ಅವರು ಇಂದು  ಹೋರಾಟಗಾರರ ವೇದಿಕೆಯ ಕಾರ್ಯಾಲಯದಲ್ಲಿ ಅರಣ್ಯ ಸಚಿವರು ಸೆ. ೨ರಂದು ಬಿಡುಗಡೆಗೊಳಿಸಿದ ಟಿಪ್ಪಣೆಯ ಆದೇಶವನ್ನ ಬಿಡುಗಡೆಗೊಳಿಸುತ್ತಾ ಮೇಲಿನಂತೆ ಹೇಳಿದರು.ಸಚಿವರ ಆದೇಶದಲ್ಲಿ  ಎಪ್ರೀಲ್…

Read More

ಸಿಎಂ ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು – ಅಧಿಕೃತವಾಗಿ ಒಪ್ಪಿಕೊಂಡ ಸರ್ಕಾರ..!

ಮೈಸೂರು : ಸಿಎಂ ಸಿದ್ದರಾಮಯ್ಯ (Siddaramaiah) ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು ಎಂದು ಅಧಿಕೃತವಾಗಿ ಸರ್ಕಾರ ಒಪ್ಪಿಕೊಂಡಿದೆ.  ಈ ಒಂದು ಆದೇಶ ಸಿಎಂಗೆ ಮುಳ್ಳಾಗುತ್ತಾ ಎಂಬ ಪ್ರಶ್ನೆ ಎದುರಾಗಿದೆ. 2001 ರಲ್ಲೇ ದೇವನೂರು ಬಡಾವಣೆ ನಿರ್ಮಾಣವಾಗಿದೆ ಎಂದು ಖುದ್ದು ಸಿಎಂ ಪತ್ನಿ ಬರೆದ ಪತ್ರದಲ್ಲಿ ಉಲ್ಲೇಖವಾಗಿದೆ. ಇದೀಗ ಆ ಸೈಟ್ ಕೊಟ್ಟಿರುವುದು ನಿಯಮ ಬಾಹಿರ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಯಿಂದ ಆದೇಶ ಬಂದಿದೆ.ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ‌ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅಮಾನತು ಆದೇಶದಲ್ಲೇ ರಾಜ್ಯ ಸರ್ಕಾರ…

Read More

ರಾಜ್ಯ ಸರ್ಕಾರದಿಂದ `ಪಂಚ ಗ್ಯಾರಂಟಿ’ ಯೋಜನೆಗಳಿಗೆ 52,000 ಕೋಟಿ ರೂ. ಮೀಸಲು : ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರವು ಗೃಹಲಕ್ಷ್ಮಿ, ಶಕ್ತಿ ಯೋಜನೆ ಸೇರಿ ಐದು ಗ್ಯಾರಂಟಿ ಯೋಜನೆಗಳಿಗೆ 52,009 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಮೀಸಲಿಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಹಿಂದೆ ನಾನು ಸಿಎಂ ಆಗಿದ್ದಾಗ, ಅನ್ನಭಾಗ್ಯ, ಶಾದಿ ಭಾಗ್ಯ, ಶೂ ಭಾಗ್ಯ, ಇಂದಿರಾ ಕ್ಯಾಂಟೀನ್, ಮನಸ್ವಿನಿ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದೆ. ಯಾವುದೇ ಜಾತಿ – ಧರ್ಮದ ಬಡವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗಿ ಬರುವಂತಾಗಲು ಐದು…

Read More

ಮುಂಡಗೋಡ : ದಿ.4ರಂದು ಸಚಿವ ಮಂಕಾಳು ವೈದ್ಯರಿಂದ ಗ್ಯಾರಂಟಿ ಯೋಜನೆಯ ಕಚೇರಿ ಉದ್ಘಾಟನೆ

ಮುಂಡಗೋಡ : ಮೀನುಗಾರಿಕೆ ತಂದರು ಹಾಗೂ ಒಳನಾಡು ಜನತಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳು ವೈದ್ಯರು ದಿ.4ರಂದು ಬೆಳಿಗ್ಗೆ 11-30ಗಂಟೆಗೆ ಮುಂಡಗೋಡ ತಾಲೂಕಾ ಗ್ಯಾರಂಟಿ ಯೋಜನೆಯ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ನಾಳೆ ದಿ.3ರಂದು ಸಂಜೆ 7 ಗಂಟೆಗೆ ಹಳಿಯಾಳದಿಂದ ಮುಂಡಗೋಡಿಗೆ ಆಗಮಿಸುವ ಸಚಿವರು ಮುಂಡಗೋಡ ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಮಾಡಲಿದ್ದಾರೆಂದು ಸಚಿವರ ಪ್ರವಾಸ ಕಾರ್ಯಕ್ರಮದ ಪಟ್ಟಿಯಲ್ಲಿ ತಿಳಿಸಲಾಗಿದೆ.

Read More

ಸಿಎಂ ಕುರ್ಚಿ ಖಾಲಿಯಿಲ್ಲ… ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು : ಡಿಕೆಶಿ

ಬೆಂಗಳೂರು : ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಹೇಳಿದರು.  ನಾನು ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿ ಎನ್ನುವ ಶಾಸಕ ಆ‌ರ್.ವಿ. ದೇಶಪಾಂಡೆ ಅವರ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಿರಿಯರಾದ ದೇಶಪಾಂಡೆ ಅವರು ಆಸೆ ಪಡುವುದು ತಪ್ಪಲ್ಲ. ಆದರೆ, ಮಾಧ್ಯಮಗಳ ಮುಂದೆ ಮಾತನಾಡಬಾರದಿತ್ತು. ಹಿರಿಯರಾದ ಅವರಿಗೆ ಏನು ಗೌರವ ನೀಡಲಾಗುವುದೊ ಅದನ್ನು ನೀಡೋಣ ಎಂದರು.ನ್ಯಾಯಾಲಯದಲ್ಲಿ…

Read More

KPSC ಕೆಎಎಸ್ ಮರು ಪರೀಕ್ಷೆ; ಉದ್ಯೋಗಾಕಾಂಕ್ಷಿಗಳು, ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ ಜಯ: ಆರ್ ಅಶೋಕ್

ಬೆಂಗಳೂರು: 2 ವಾರಗಳಲ್ಲಿ ಕೆಪಿಎಸ್ಸಿಯ ಕೆಎಎಸ್ ಮರು ಪರೀಕ್ಷೆಗೆ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದರು. ಇದು ಉದ್ಯೋಗಾಕಾಂಕ್ಷಿಗಳು ಹಾಗೂ ಪ್ರತಿಪಕ್ಷಗಳ ಹೋರಾಟಕ್ಕೆ ಸಂದ ಜಯ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವಂತ ಅವರು, “ಕೆಪಿಎಸ್ ಸಿ ಪರೀಕ್ಷೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತು”. ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಘೋರ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದ್ದು, ಇದು…

Read More

ನಾಳೆ ದಿ.3ರಂದು 3 ಜಲಾಶಯಗಳಿಗೆ ಶಾಸಕ ಹೆಬ್ಬಾರ ಅವರಿಂದ ಬಾಗಿನ ಅರ್ಪಣೆ

ಮುಂಡಗೋಡ : ನಾಳೆ ದಿನ ದಿ.3ರಂದು ಮುಂಡಗೋಡ ತಾಲೂಕಿನ ಮೂರು ಜಲಾಶಯಗಳಿಗೆ ಶಾಸಕರಾದ ಶಿವರಾಮ ಹೆಬ್ಬಾರ್ ಬಾಗಿನ ಅರ್ಪಿಸಲಿದ್ದಾರೆ.  ನಾಳೆ ದಿ.3ರಂದು ಬೆಳಿಗ್ಗೆ 10 ಗಂಟೆಗೆ ಬಾಚಣಕಿ ಜಲಾಶಯಕ್ಕೆ, ಬೆಳಿಗ್ಗೆ 11 ಗಂಟೆಗೆ ಸನವಳ್ಳಿ ಜಲಾಶಯಕ್ಕೆ ಮತ್ತು ಮಧ್ಯಾಹ್ನ 12 ಗಂಟೆಗೆ ಚಿಗಳ್ಳಿ ಜಲಾಶಯಕ್ಕೆ ಶಾಸಕರಾದ ಶಿವರಾಮ ಹೆಬ್ಬಾರ್ ಬಾಗಿನ ಅರ್ಪಿಸಲಿದ್ದಾರೆಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಟಿ.ವೈ.ದಾಸನಕೊಪ್ಪ ತಿಳಿಸಿದ್ದಾರೆ.

Read More