ಶಿರ್ಲೆ ಜಲಪಾತದ ಬಳಿ ನಾಪತ್ತೆಯಾಗಿದ್ದವರು ಪತ್ತೆ
ಯಲ್ಲಾಪುರ : ಶಿರ್ಲೆ ಜಲಪಾತಕ್ಕೆಂದು ಹೋಗಿ ಕಾಡಿನಲ್ಲಿ ನಾಪತ್ತೆಯಾದವರು ಸುರಕ್ಷಿತವಾಗಿ ಪತ್ತೆಯಾಗಿದ್ದು ಅವರನ್ನು ಯಲ್ಲಾಪುರಕ್ಕೆ ಕರೆದುಕೊಂಡು ಬರಲಾಗಿದೆ. ಹುಬ್ಬಳ್ಳಿಯ ನವನಗರದ ಮೆಹಬೂಬ್, ಇಮ್ತಿಯಾಜ, ಅಹಮದ್, ಶಾನವಾಜ, ಅಲ್ತಾಫ ಹಾಗೂ ಆಸೀಫ ಅವರು ಮೂರು ಡಿಯೋ ಸ್ಕೂಟಿಯಲ್ಲಿ ಗುರುವಾರ ಜಲಪಾತಕ್ಕೆ ತೆರಳಿದ್ದರು. ಹಳ್ಳ ದಾಟಲು ಇದ್ದ ಕಾಲುಸಂಕದಲ್ಲಿ ಅವರು ಸಾಗಿದ್ದರು. ಆದರೆ ನೀರಿನ ಪ್ರವಾಹ ಹೆಚ್ಚಾಗಿ ಕಾಲುಸಂಕ ಕೊಚ್ಚಿಕೊಂಡು ಹೋಯಿತು. ಇದರಿಂದ ಪುನಃ ಬರಲಾಗದೇ ಜಲಪಾತವಿರುವ ಗುಡ್ಡದ ಮತ್ತೊಂದು ಭಾಗದಲ್ಲಿ ರಾತ್ರಿ ಕಳೆದರು. ಶುಕ್ರವಾರ ಬೆಳಿಗ್ಗೆ ದಾರಿ ಹುಡುಕುತ್ತ…
ಕ್ಯಾಸನಕೇರಿ-ಚವಡಳ್ಳಿ ರಸ್ತೆ ಬಂದ್
ಮುಂಡಗೋಡ : ಭಾರೀ ಮಳೆಯಿಂದಾಗಿ ತಾಲೂಕಿನ ಕ್ಯಾಸನಕೇರಿ ಗ್ರಾಮದ ಹಳ್ಳದ ನೀರು ರಸ್ತೆ ಮೇಲೆ ಹರಿಯುತ್ತಿದ್ದು ಕ್ಯಾಸನಕೇರಿ ಮತ್ತು ಚವಡಳ್ಳಿ ರಸ್ತೆ ಬಂದ್ ಆಗಿದೆ. ಭಾರೀ ಮಳೆಯಿಂದಾಗಿ ನಂದಿಕಟ್ಟಾ-ಯರೇಬೈಲ್ ರಸ್ತೆ ಬಂದ್ ಆಗಿದೆ. ಇಂದೂರ-ಕಲಘಟಗಿ ರಸ್ತೆ ನೀರು ಆವರಿಸಿದೆ. ಮುಂಡಗೋಡ ಪಟ್ಟಣದ ಹಳೂರ ಶಾಲೆ ಕಟ್ಟಡ ಮಳೆಯಿಂದಾಗಿ ಕುಸಿದಿದೆ. ಇಂದೂರ ಗ್ರಾಮದಲ್ಲಿ 10 ಮನೆಗಳಿಗೆ ನೀರು ತುಂಬಿದೆ.
ನೆರೆ, ತುರ್ತು ಕಾರ್ಯಾಚರಣೆಗೆ ಸನ್ನದ್ಧರಾಗುವಂತೆ ಸಚಿವ ಹೆಬ್ಬಾರ್ ಸೂಚನೆ.
ಮುಂಡಗೋಡ : ನೆರೆ ಹಾಗೂ ತುರ್ತು ಕಾರ್ಯಾಚರಣೆಗೆ ಸನ್ನದ್ಧರಾಗುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ್ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತಗಳಿಗೆ ಸೂಚನೆ ನೀಡಿದ್ದಾರೆ. ಉತ್ತರಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ವರ್ಷಧಾರೆಯಿಂದ ಅನೇಕ ಕಡೆಗಳಲ್ಲಿ ಸಮಸ್ಯೆಗಳು ಉದ್ಬವಿಸಿದ್ದು ಯಾವುದೇ ಅವಘಡಗಳು ಸಂಭವಿಸದಂತೆ ಜಿಲ್ಲಾಡಳಿತ ಮತ್ತು ತಾಲೂಕಾಡಳಿತ ಸನ್ನದ್ದರಾಗಿದ್ದು ಪರಿಹಾರ ಕಾರ್ಯಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಮೌಕಿಕ ಆದೇಶ ನೀಡಿದ್ದಾರೆ. ನೆರೆ ಅಥವಾ ತುರ್ತು ಕಾರ್ಯಾಚರಣೆಗಾಗಿ ಅಧಿಕಾರಿಗಳು ಸನ್ನದ್ದರಾಗಿರುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು ಹಾಗು…
ಕುಸಿದ ಹನುಮಾಪುರ ಸರಕಾರಿ ಶಾಲೆ
ಮುಂಡಗೋಡ : ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಹನುಮಾಪುರ ಗ್ರಾಮದಲ್ಲಿನ ಸರಕಾರಿ ಪ್ರಾಥಮಿಕ ಶಾಲೆ ಕುಸಿದಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ತಾಲೂಕಿನ ಹುನಗುಂದ ಹಾಗೂ ಲಕ್ಕೊಳ್ಳಿ ಗ್ರಾಮದಲ್ಲಿ ಮನೆ ಕುಸಿತಗೊಂಡಿವೆ. ತಾಲೂಕಿನ ಹುನಗುಂದ ಗ್ರಾಮದ ರೇಣವ್ವ ಕಣವಿ ಹಾಗೂ ಲಕ್ಕೊಳ್ಳಿ ಗ್ರಾಮದ ಶೋಭಾ ಕಿಳ್ಳಿಕ್ಯಾತರ್ ಎಂಬವರ ಮನೆಯೂ ಮಳೆಗೆ ಕುಸಿದು ಬಿದ್ದು ಹಾನಿ ಸಂಭವಿಸಿದೆ. ಕಂದಾಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಸ್ತೆಯ ಮೇಲೆ ನೀರು : ವಾಹನ ಸವಾರರ ಪರದಾಟ
ಮುಂಡಗೋಡ: ನಗರ ಮತ್ತು ತಾಲೂಕಿನಾದ್ಯಂತ ಎಲ್ಲಾ ಕಡೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಪಟ್ಟಣದ ಹೊರವಲಯದ ಯಲ್ಲಾಪುರ ರಸ್ತೆಯಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ರಸ್ತೆಯ ಅಂಚಿನಲ್ಲಿನ ಚರಂಡಿಗಳಲ್ಲಿ ಸಮರ್ಪಕವಾಗಿ ನೀರು ಹರಿದು ಹೋಗದೆ ರಸ್ತೆಯ ಮೇಲೆ ನೀರು ನಿಲ್ಲುತ್ತಿದೆ. ಇದರಿಂದ ಬೈಕ್ ಹಾಗೂ ಕಾರುಗಳು ಬೇರೆ ಮಾರ್ಗವಾಗಿ ಸಂಚರಿಸುವ ಪರಿಸ್ಥಿತಿ ಬಂದಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮ ಕೈಗೊಳ್ಳುವಂತೆ ಜನರು ಆಗ್ರಹಿಸಿದ್ದಾರೆ.