Raj Newsline

ಶನಿವಾರ ದಿ.10ರಂದು ಹೆಬ್ಬಾರ್ ರೇಶನ್ ಕಿಟ್ ವಿತರಣೆ

ಮುಂಡಗೋಡ : ಶನಿವಾರ ದಿ.10ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ ಅವರು ತಾಲೂಕಿನ ಗುಂಜಾವತಿ, ಬಾಚಣಕಿ, ನ್ಯಾಸರ್ಗಿ, ಸಾಲಗಾಂವ, ಚಿಗಳ್ಳಿ, ಚವಡಳ್ಳಿ, ನಾಗನೂರ, ಕಾತೂರ, ಓಣಿಕೇರಿ, ಪಾಳಾ, ಕೋಡಂಬಿ, ಮಳಗಿ, ಬೆಡಸಗಾಂವ ಗ್ರಾಮದಲ್ಲಿ ಹೆಬ್ಬಾರ್ ರೇಶನ್ ಕಿಟ್ ವಿತರಿಸಲಿದ್ದಾರೆ. ನಂತರ ಮುಂಡಗೋಡದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಸಚಿವರು, ಟ್ಯಾಬ್ ವಿತರಿಸಲಿದ್ದಾರೆ.

Read More

ಪಾಳಾ ನೆಮ್ಮದಿ ಕೇಂದ್ರದಲ್ಲಿ ಆಧಾರ್ ತಿದ್ದುಪಡಿ ಕೇಂದ್ರ ಆರಂಭ

ಮುಂಡಗೋಡ : ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆ ಜೋಡಣೆಗೆ ರೈತರು, ಕಾರ್ಮಿಕರಿಗೆ ಆಗುತ್ತಿದ್ದ ಸಮಸ್ಯೆಯನ್ನು ಅರಿತು ಪಾಳಾ ಗ್ರಾಮದ ನೆಮ್ಮದಿ ಕೇಂದ್ರದಲ್ಲಿ ಆಧಾರ್ ತಿದ್ದುಪಡಿ ಕೇಂದ್ರ ಪುನರ್ ಆರಂಭಿಸಲಾಗಿದೆ.    ಆಧಾರ್ ಕಾರ್ಡಗೆ ಮೊಬೈಲ್ ಸಂಖ್ಯೆ ಜೋಡಣೆಗೆ ತಾಲೂಕಿನ ಜನರ ಪರದಾಡುತ್ತಿರುವ ಕುರಿತು ಪತ್ರಿಕೆಯಲ್ಲಿ ವರದಿ ಪ್ರಕಟಗೊಂಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ ಅವರು ತಹಶೀಲದಾರ ಶ್ರೀಧರ ಮುಂದಲಮನಿ ಅವರಿಗೆ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ತಹಶೀಲದಾರ ಶ್ರೀಧರ ಮುಂದಲಮನಿ ಅವರು…

Read More

ಮೋದಿ ಸಚಿವ ಸಂಪುಟ : ರಾಜ್ಯದ ನಾಲ್ವರಿಗೂ ಖಾತೆ ಹಂಚಿಕೆ

ನವದೆಹಲಿ: ಪುನರ್‌ರಚನೆಯಾದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ರಾಜ್ಯ ಸಚಿವರಾಗಿ ಪದಗ್ರಹಣ ಮಾಡಿದ್ದ ರಾಜ್ಯದ ನಾಲ್ವರಿಗೂ ಖಾತೆ ಹಂಚಿಕೆ ಮಾಡಲಾಗಿದೆ. ಶೋಭಾ ಕರಂದ್ಲಾಜೆ ಅವರಿಗೆ ಕೃಷಿ ಮತ್ತು ರೈತರ ಕಲ್ಯಾಣ ಖಾತೆ, ಎ.ನಾರಾಯಣಸ್ವಾಮಿ ಅವರಿಗೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ರಾಜೀವ್‌ ಚಂದ್ರಶೇಖರ್‌ ಅವರಿಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಹಾಗೂ ಭಗವಂತ ಖೂಬಾ ಅವರಿಗೆ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ನೀಡಲಾಗಿದೆ. ಬುಧವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣವಚನ ಸ್ವೀಕಾರ…

Read More

ಮನೆ ಮದ್ದು

ನೆಲ್ಲಿಕಾಯಿಯ ಪುಡಿಗೆ ನಿಂಬೆಹಣ್ಣಿನ ರಸವನ್ನು ಹಿಂಡಿ ಪೇಸ್ಟ ಮಾಡಿ ಕೂದಲ ಬುಡ ಮತ್ತು ಕೂದಲಿಗೆಲ್ಲಾ ಹಚ್ಚಿ ಅರ್ಧ ಗಂಟೆ ಬಿಟ್ಟು ತೊಳೆದರೆ ಕೂದಲು ಉದುರುವುದು ಕಡಿಮೆಯಾಗುತ್ತದೆ ಮತ್ತು ನುಣುಪಾಗುತ್ತದೆ.

Read More

ಮುಂಡಗೋಡಿನಲ್ಲಿ ಡಿಕೆಶಿಗೆ ಹೂವಿನ ಮಳೆ..!

ಮುಂಡಗೋಡ: ಶಿರಸಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸೈಕಲ್ ಜಾಥಾ ಪ್ರತಿಭಟನೆಗೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂಡಗೋಡ ಪಟ್ಟಣಕ್ಕೆ ಭೇಟಿ ನೀಡಿದರು. ಶಿರಸಿಯಿಂದ ಹುಬ್ಬಳ್ಳಿಗೆ ತೆರಳುವ ವೇಳೆ ಮುಂಡಗೋಡ ಪಟ್ಟಣದಲ್ಲೂ ಕೆಲಹೊತ್ತು ನಿಂತು ಕಾರ್ಯಕರ್ತರನ್ನು ಭೇಟಿ ಮಾಡಿದರು. ಡಿಕೆಶಿ ಬರುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತರು ಜಮಾವಣೆ ಆಗಿದ್ದರು.   ಡಿ.ಕೆ.ಶಿವಕುಮಾರ್ ಬರುತ್ತಿದ್ದಂತೆ ಘೋಷಣೆ ಕೂಗಿ ಹೂವಿನ ಮಳೆ ಸುರಿಸಿದರು. ಹಾರ ಹಾಕಿ…

Read More

ಶಿರಸಿಯಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಡಿಕೆಶಿ ನೇತೃತ್ವದಲ್ಲಿ ಸೈಕಲ್ ಜಾಥಾ

ಶಿರಸಿ: ನಗರದಲ್ಲಿ ಇಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ, ತೈಲ ಬೆಲೆ ಏರಿಕೆ ಖಂಡಿಸಿ ಸೈಕಲ್ ಜಾಥಾ ನಡೆಯಿತು. ಕೋವಿಡ್ ನಿಯಮ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಸೈಕಲ್ ಜಾಥಾಗೆ ಉತ್ತರ ಕನ್ನಡ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೂ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಆರ್. ವಿ.ದೇಶಪಾಂಡೆ, ಮುಖಂಡರಾದ ಪ್ರಶಾಂತ ದೇಶಪಾಂಡೆ, ರವೀಂದ್ರ ನಾಯ್ಕ, ಕೃಷ್ಣ…

Read More

ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

ಕಾರವಾರ : ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 7 ರಿಂದ ಜುಲೈ 11ರವರೆಗೂ ಈ ಜಿಲ್ಲೆಗಳಲ್ಲಿ ವಿಪರೀತ ಮಳೆ ಸುರಿಯಲಿದೆ ಎಂದು ಹೇಳಲಾಗಿದೆ. ಹವಾಮಾನ ವರದಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

Read More

ಹಿಂದಿ ಚಿತ್ರರಂಗದ ಹಿರಿಯ ನಟ ದಿಲೀಪಕುಮಾರ ಇನ್ನಿಲ್ಲ

ಮುಂಬೈ : ಹಿಂದಿ ಚಿತ್ರರಂಗದ ದಿಗ್ಗಜ ದಿಲೀಪ್ ಕುಮಾರ ಇಂದು ಬೆಳಗ್ಗೆ 7:30ಕ್ಕೆ ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ನಿಧನರಾದರು. 98 ವರ್ಷ ವಯಸ್ಸಿನ ಹಿರಿಯ ನಟ ದಿಲೀಪ್ ಕುಮಾರ್ ಬಹುಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ದಿಲೀಪ್‌ರನ್ನು ಹಲವು ಬಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 30 ರಂದು ಮುಂಬೈನ ಹಿಂದೂಜಾ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿತ್ತು. ಇದಕ್ಕೂ ಮೊದಲು ದಿಲೀಪ್ ಕುಮಾರ್ ಅವರು ಜೂನ್ 6 ರಂದು ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಐದು ದಿನಗಳ ನಂತರ…

Read More

ಮನೆ ಮದ್ದು

ಪೆಟ್ಟು ಬಿದ್ದು ಊದುಕೊಂಡಿದ್ದರೆ ನುಗ್ಗೆ ಸೊಪ್ಪನ್ನು ಒಂದು ಬಟ್ಟೆಯಲ್ಲಿ ಗಂಟು ಕಟ್ಟಿ ಹೆಂಚಿನ ಮೇಲೆ ಬಿಸಿ ಮಾಡಿ ಶಾಖ ಕೊಟ್ಟರೆ ಕಡಿಮೆಯಾಗುತ್ತದೆ.

Read More