Raj Newsline

ಬೈಕಗೆ ಗುದ್ದಿದ ಟ್ಯಾಂಕರ್ : ಬೈಕ್ ಸವಾರ ಸಾವು

ಕುಮಟಾ : ಕುಮಟಾ ತಾಲೂಕಿನ ಮಿರ್ಜಾನ ಸಮೀಪ ಅತಿ ವೇಗದಿಂದ ಬಂದ ಟ್ಯಾಂಕರೊಂದು ಬೈಕ್ ಸವಾರನಿಗೆ ಗುದ್ದಿದ ಪರಿಣಾಮವಾಗಿ ಬೈಕ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.     ಮೃತ ವ್ಯಕ್ತಿಯನ್ನು ಕಿಮಾನಿ ಗ್ರಾಮದ ರಮೇಶ ಹರಿಕಂತ್ರ ಎಂದು ಗುರುತಿಸಲಾಗಿದೆ.     ಕುಮಟಾ ಪೊಲೀಸರು ಟ್ಯಾಂಕರನ್ನು ಅಂತ್ರವಳ್ಳಿ ಸಮೀಪ ತಡೆ ಹಿಡಿದಿದ್ದು ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆಂದು ತಿಳಿದುಬಂದಿದೆ. ಲಾರಿ ತಮಿಳುನಾಡು ಮೂಲದ್ದಾಗಿದೆ.  

Read More

ಮುಂಡಗೋಡ : ತಾ.ಪಂ., ಜಿ.ಪಂ. ಮೀಸಲಾತಿ ವಿವರ

ಕಾರವಾರ : ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾಯಿತ ಸದಸ್ಯರ ಅಧಿಕಾರದ ಅವಧಿ ಏಪ್ರಿಲ್‌ ಅಂತ್ಯದಲ್ಲೇ ಕೊನೆಗೊಂಡಿದೆ. ಕೋವಿಡ್‌ ಕಾರಣದಿಂದ ಚುನಾವಣೆ ವಿಳಂಬವಾಗಿದ್ದು, ಈಗಾಗಲೇ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ. ರಾಜ್ಯ ಚುನಾವಣಾ ಆಯೋಗವು, ಕರಡು ಮೀಸಲಾತಿ ಪಟ್ಟಿಯನ್ನು ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು ಎಂಟು ದಿನಗಳ ಕಾಲಾವಕಾಶ ನೀಡಿದೆ ಮುಂಡಗೋಡದ 6ತಾ.ಪಂ.ಕ್ಷೇತ್ರಗಳಲ್ಲಿ ಮೀಸಲಾತಿ ಪುನರಾವರ್ತನೆ… ಮುಂಡಗೋಡ ತಾಲೂಕಿನಲ್ಲಿ ಒಟ್ಟು 11 ತಾಲೂಕ ಪಂಚಾಯತ ಕ್ಷೇತ್ರಗಳಿದ್ದು, ಅವುಗಳ ಪೈಕಿ 6 ಕ್ಷೇತ್ರದಲ್ಲಿ ಈ ಹಿಂದೆ ಇದ್ದ ಮೀಸಲಾತಿ ಈ ಬಾರಿಯೂ ಮುಂದುವರೆದಿದೆ….

Read More

ಭಟ್ಕಳ ನ್ಯಾಯಾಲಯದಲ್ಲಿ ಬೆಂಕಿ ಅವಘಡ

ಭಟ್ಕಳ : ಪಟ್ಟಣದ ರಂಗಿನಕಟ್ಟೆಯಲ್ಲಿರುವ ಭಟ್ಕಳ ಜೆ.ಎಂ.ಎಫ್.ಸಿ.ನ್ಯಾಯಾಲಯದ ಕಟ್ಟಡದಲ್ಲಿ ಇಂದು ಮುಂಜಾನೆ ಅಗ್ನಿ ಅವಘಡ ನಡೆದಿದೆ.ನ್ಯಾಯಾಲಯದ ಮುಂದಿನ ಭಾಗ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು,ದಾಖಲೆಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರುವುದಾಗಿ ಪ್ರಥಮ ಮಾಹಿತಿಯನ್ನು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದು, ಬೆಳಿಗ್ಗೆ 4.15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಾಗ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಹಲವು ತಾಸುಗಳ ಪ್ರಯತ್ನದಿಂದ ಬೆಂಕಿ ನಂದಿಸಿದ್ದಾರೆ. ನ್ಯಾಯಾಲಯದಲ್ಲಿದ್ದ ಸಾವಿರಾರು ಕೇಸುಗಳ ಕಡತಗಳು ಅವಘಡದಲ್ಲಿ ಸುಟ್ಟುಹೋಗಿದ್ದು,ಕಾಗದಕ್ಕೆ ಬೆಂಕಿ ಹೊತ್ತಿಕೊಂಡ ಕಾರಣ ಬೆಂಕಿಯ ತೀವ್ರತೆ…

Read More

ಅರಣ್ಯ ಸಿಬ್ಬಂದಿ ದೌರ್ಜನ್ಯ : ಉಪ ವಿಭಾಗಾಧಿಕಾರಿಗಳ ಮುಂದೆ ಅರಣ್ಯವಾಸಿಗಳ ಆಕ್ರೋಶ

ಭಟ್ಕಳ : ಅರಣ್ಯ ಸಿಬ್ಬಂದಿಗಳಿಂದ ಕಾನೂನು ಬಾಹಿರವಾದ ದೌರ್ಜನ್ಯ,ಕಿರುಕುಳ ನಿಯಂತ್ರಿಸಿ,ಇಲ್ಲದಿದ್ದಲ್ಲಿ ಅರಣ್ಯ ಅತಿಕ್ರಮಣದಾರರ ಸಹನೆಯ ಕಟ್ಟೆ ಒಡೆದೀತು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ಅಧ್ಯಕ್ಷ ರವೀಂದ್ರನಾಥ್ ನಾಯ್ಕ ಸರಕಾರಕ್ಕೆ ಎಚ್ಚರಿಸಿದ್ದಾರೆ. ಅವರು ಇಂದು ಭಟ್ಕಳ ಉಪವಿಭಾಗಾಧಿಕಾರಿ ಅವರನ್ನು ಅರಣ್ಯವಾಸಿಗಳೊಂದಿಗೆ ಭೇಟಿಯಾದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ರಾಜ್ಯ ಉಚ್ಛ ನ್ಯಾಯಾಲಯ ಮತ್ತು ಮುಖ್ಯಮಂತ್ರಿಗಳ ನಿರ್ದೇಶನವನ್ನು ನಿರ್ಲಕ್ಷಿಸುವ ಅರಣ್ಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಲಿ.ನಮ್ಮ ಸಹನೆಯನ್ನು ಪರೀಕ್ಷೀಸುವುದು ಸೂಕ್ತವಲ್ಲ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ…

Read More

ಮನೆ ಮದ್ದು

ಅಲರ್ಜಿಯ ಕಾರಣದಿಂದ ಮೂಗಿನಲ್ಲಿ ನೀರು ಸುರಿಯುತ್ತಿದ್ದರೆ ಸ್ವಲ್ಪ ಅರಿಶಿಣ ಮತ್ತು ಕಡಲೆ ಹಿಟ್ಟನ್ನು ಸೇರಿಸಿ ಕೆಂಡದ ಮೇಲೆ ಹಾಕಿ ಬರುವ ಹೊಗೆಯನ್ನು 3-4 ಬಾರಿ ಮೂಗಿನಲ್ಲಿ ಸೇದಿ ಬಾಯಿಯಲ್ಲಿ ಬಿಡಬೇಕು.

Read More

ವಿವಾಹಿತ ಮಹಿಳೆ ಆತ್ಮಹತ್ಯೆ : ಗಂಡ, ಅತ್ತೆ ಮೇಲೆ ಪ್ರಕರಣ ದಾಖಲು

ಮುಂಡಗೋಡ: ವಿವಾಹಿತ ಮಹಿಳೆಯೊಬ್ಬಳು ಮನನೊಂದು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಜರುಗಿದೆ. ಸ್ವಾತಿ ಮಂಜುನಾಥ ಹೊಸೂರ (26) ಎಂಬವಳೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಯಾಗಿದ್ದಾಳೆ. ಸ್ವಾತಿ ಮದುವೆಯಲ್ಲಿ ವರದಕ್ಷಿಣೆಯನ್ನು ನೀಡಿಲ್ಲ ಹಾಗೂ ಗಂಡು ಮಕ್ಕಳು ಸಹ ಜನಿಸಿಲ್ಲ ಎಂದು ಸ್ವಾತಿಯ ಗಂಡ ಮಂಜುನಾಥ ಹೊಸೂರ ಹಾಗೂ ತಾಯವ್ವ ಕಲ್ಲಪ್ಪ ಹೊಸೂರ ಎಂಬವರು ಸೇರಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಾ ಬಂದಿದ್ದು ಇದರಿಂದ ಮನನೊಂದ ನನ್ನ ಮಗಳು…

Read More

ಕೋಗಿಲಬನದ ರಸ್ತೆಯಲ್ಲಿ ರಾಜಾರೋಷವಾಗಿ ತಿರುಗಾಡಿದ ಮೊಸಳೆ

ದಾಂಡೇಲಿ : ದಾಂಡೇಲಿಯ ಕಾಳಿ ನದಿಯ ಕೋಗಿಲಬನದ ರಸ್ತೆಯಲ್ಲಿ ಇಂದು ದೊಡ್ಡದಾದ ಮೊಸಳೆಯೊಂದು ಆಹಾರ ಅರಸಿ ಬಂದು ರಾಜಾರೋಷವಾಗಿ ತಿರುಗಾಡುತ್ತಿತ್ತು. ಆಗಾಗ ಬಾಯ್ದೆರೆದು ಹೆದರಿಸುತ್ತಿತ್ತು. ಮೊಸಳೆಯ ಈ ಸಂಚಾರ ಜನರನ್ನು ಭಯ ಬೀಳಿಸಿತ್ತು. ರಸ್ತೆಯ ಅಕ್ಕ ಪಕ್ಕದ ಮನೆಯವರು ಬಾಗಿಲು ಹಾಕಿಕೊಂಡು ಮನೆಯೊಳಗೆ ಸೇರಿದ್ದರು. ಕೆಲವರು ಮರದಿಂದಲೇ ವಿಡಿಯೋ ಮಾಡುತ್ತಿದ್ದರು. ಸುದ್ದಿ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳೀಯರ ಸಹಕಾರದೊಂದಿಗೆ ಆ ಮೊಸಳೆಯನ್ನು ಕಾಳಿನದಿಗೆ ಹೊಂದಿಕೊಂಡಿದ್ದ ನಾಲಾದೊಳಗೆ ಸೇರುವ ಹಾಗೆ ಮಾಡಿದರು. ಮನೆಯೆದುರು ಬಂದು ಜನರನ್ನು ಭಯ…

Read More

ನೀರು ಸೇದಲು ಹೋಗಿ ತೆರೆದ ಬಾವಿ ಬಿದ್ದ ವೃದ್ದೆಯ ರಕ್ಷಣೆ

ಭಟ್ಕಳ : ತೆರೆದ ಬಾವಿಯಲ್ಲಿ ನೀರು ಸೇದಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ವೃದ್ಧೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಭಟ್ಕಳ ತಾಲೂಕಿನ ಸೋಡಿಗದ್ದೆಯಲ್ಲಿ ಇಂದು ನಡೆದಿದೆ. ಸೋಡಿಗದ್ದೆ ನಿವಾಸಿಯಾಗಿರುವ ನಾಗಮ್ಮ (60) ತನ್ನ ಮನೆಯ ತೆರೆದ ಬಾವಿಯಿಂದ ನೀರು ಸೇದುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಯಲ್ಲಿ ಬಿದ್ದಿದ್ದು, ತಕ್ಷಣ ವಿಷಯ ತಿಳಿದ ಮನೆಯವರು ಅಗ್ನಿಶಾಮಕ ದಳ ಸಿಬ್ಬಂದಿಗೆ ಕರೆ ಮಾಡಿದ್ದಾರೆ.ತಕ್ಷಣ ಕರೆಗೆ ಸ್ಪಂದಿಸಿ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ…

Read More

ಶಿರಸಿ : ಅಪಘಾತ, ಬೈಕ್ ಸವಾರ ಸಾವು

 ಶಿರಸಿ : ಬೈಕ್‌ ಸ್ಕಿಡ್‌ ಆಗಿ ಪಿಕಪ್‌ ಗೆ ಗುದ್ದಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಬೈಕ್‌ ಸವಾರನೋರ್ವ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಿರೇಕೈಗದ್ದೆ ತಿರುವಿನಲ್ಲಿ ಇಂದು ಸಂಭವಿಸಿದೆ. ಬೈಕಿನಲ್ಲಿ ಶಿರಸಿಯಿಂದ ಹೆಗಡೆಕಟ್ಟಾ ಸಂಚರಿಸುವ ಸಂದರ್ಭದಲ್ಲಿ ಅಜಾಗರೂಕತೆ ಚಾಲನೆಯಿಂದ ಈ ಘಟನೆ ಸಂಭವಿಸಿದೆ. ಬೈಕ್‌ ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆಗೆ ಗಾಯಗಳಾಗಿವೆ. ಬೈಕ್‌ ನಲ್ಲಿ ತೆರಳುತ್ತಿರುವ ಸಂದರ್ಭದಲ್ಲಿ ಬೈಕ್‌ ಸ್ಕಿಡ್‌ ಆಗಿದ್ದು,ಬೈಕ್‌ ನ್ನು ನಿಯಂತ್ರಿಸಲಾಗದೆ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಸಂಭವಿಸಿದೆ. ಈ…

Read More