Raj Newsline

ಆಧಾರ ಕಾರ್ಡ ತಿದ್ದುಪಡಿ ಮಾಡಲು ಸರದಿ ಸಾಲಿನಲ್ಲಿ ನಿಂತ ಜನರು

ಮುಂಡಗೋಡ: ಆಧಾರ ಕಾರ್ಡನಲ್ಲಿ ಹೆಸರುಗಳ ತಿದ್ದುಪಡಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವುದು ಇಂದು ಕಂಡು ಬಂತು.    ಪಟ್ಟಣದ ಬಸ್‍ನಿಲ್ದಾಣದ ಮುಂಭಾಗದಲ್ಲಿನ ಎಸ್‍ಬಿಐ ಬ್ಯಾಂಕ್‍ನಲ್ಲಿ ಆಧಾರ ಕಾರ್ಡ ತಿದ್ದುಪಡಿ ಮಾಡುತ್ತಿದ್ದು ಆದ್ದರಿಂದ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಜನರು ಬ್ಯಾಂಕ್ ಬಳಿ ಸರದಿ ಸಾಲಲ್ಲಿ ನಿಂತು ಆಧಾರ ಕಾರ್ಡ ತಿದ್ದುಪಡಿಯನ್ನು  ಮಾಡಿಸುತ್ತಿರುವುದು ಕಂಡು ಬಂತು.

Read More

ಉಚಿತ ಲಸಿಕೆ ಅಭಿಯಾನ ಕಾರ್ಯಕ್ರಮ

ಮುಂಡಗೋಡ: ಉಚಿತ ಲಸಿಕೆ ಅಭಿಯಾನಕ್ಕೆ ಕರ್ನಾಟಕ ವಾಯುವ್ಯ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ ಮುಂಡಗೋಡ ಸರಕಾರಿ ಆಸ್ಪತ್ರೆಯಲ್ಲಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ನಂತರ ಜಿ.ಪಂ. ಮಾಜಿ ಸದಸ್ಯ ಎಲ್.ಟಿ.ಪಾಟೀಲ ಮಾತನಾಡಿ, ಕೊರೋನಾದಂತಹ ಮಹಾಮಾರಿಯನ್ನು  ತಡೆಗಟ್ಟಲು ಹದಿನೆಂಟು ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು. ಕೇಂದ್ರ ಹಾಗೂ ರಾಜ್ಯ ಸರಕಾರ  ಉಚಿತವಾಗಿ  ಲಸಿಕೆ ನೀಡುತ್ತಿದೆ. ಇದರ ಪ್ರಯೋಜನವನ್ನು ಜನರು ಪಡೆದುಕೊಳ್ಳಬೇಕು ಎಂದರು. ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ ಮಾತನಾಡಿ, ಕೊರೋನಾದಂತಹ ಮಹಾಮಾರಿಯಿಂದಾಗಿ ಜನರು ಕೆಲಸವಿಲ್ಲದೆ…

Read More

ಅನಲಾಕ್ : ಮುಂಡಗೋಡನಲ್ಲಿ ಜನದಟ್ಟಣೆ

ಮುಂಡಗೋಡ : ಇಂದು ಅನಲಾಕ್ ಆದ ಹಿನ್ನೆಲೆಯಲ್ಲಿ ಮುಂಡಗೋಡನಲ್ಲಿ ಜನದಟ್ಟಣೆ ಹೆಚ್ಚಾಗಿತ್ತು. ಗ್ರಾಮೀಣ ಭಾಗದಿಂದಲೂ ಇಂದು ಜನರು ಹೆಚ್ಚಾಗಿ ಬಂದು ವಸ್ತುಗಳನ್ನು ಖರೀದಿಸಿದರು. ಸಾಮಾಜಿಕ ಅಂತರವನ್ನು ಎಲ್ಲರೂ ಮರೆತಿರುವುದು ಕಂಡುಬಂತು. ಕೆಲವರು ಮಾಸ್ಕ ಧರಿಸದೇ ತಿರುಗಾಡುತ್ತಿದ್ದರು. ಕಿರಾಣಿ ಅಂಗಡಿ ಮತ್ತು ತರಕಾರಿ ಖರೀದಿಗೆ ಜನರು ಮುಗಿಬಿದ್ದಿದ್ದರು.

Read More

ಹಾಳಾದ ರಸ್ತೆ ದುರಸ್ತಿ ಮಾಡುವಂತೆ ಜನರ ಆಗ್ರಹ

ಮುಂಡಗೋಡ : ಎರಡು ದಿನ ನಿರಂತರವಾಗಿ ಮಳೆ ಸುರಿದಿದ್ದರಿಂದ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆಯ ನೀರು ಹರಿದು ಕೆಲವೆಡೆ ರಸ್ತೆ ಕಿತ್ತು ಹೋಗಿದೆ.     ಯಲ್ಲಾಪುರ ರಸ್ತೆಯ ಮಾರ್ಗವಾಗಿ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತದೆ. ಈಗ ಈ ರಸ್ತೆಯಲ್ಲಿ ಹೊಂಡ ನಿರ್ಮಾಣವಾಗಿದ್ದರಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಕುರಿತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಳಾದ ರಸ್ತೆಯನ್ನು ದುರಸ್ತಿ ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Read More

ಕಣಜ ಮುಂಡಗೋಡ ವತಿಯಿಂದ ಸಂಗ್ರಹಿಸಿದ ಆಹಾರ ಕಿಟ್ ಎಂ.ಎಲ್.ಸಿ. ಶಾಂತಾರಾಮ ಸಿದ್ದಿಯಿಂದ ವಿತರಣೆ

ಮುಂಡಗೋಡ : ಎಂ.ಎಲ್.ಸಿ. ಶಾಂತಾರಾಮ ಸಿದ್ದಿ ಅವರು ಕಣಜಮುಂಡಗೋಡ ವತಿಯಿಂದ ಸಂಗ್ರಹಿಸಿದ ಆಹಾರ ಕಿಟಗಳನ್ನು ಮುಂಡಗೋಡ ತಾಲೂಕಿನ ಜೋಗೇಶ್ವರ ಹಳ್ಳ, ಜೇನುಮುರಿ, ಸಿರಿಗೇರಿ, ಚವಡಳ್ಳಿ, ಬ್ಯಾನಳ್ಳಿ ಭಾಗದಲ್ಲಿ ಕಡುಬಡವರಿಗೆ ಹಾಗೂ ಕೋವಿಡ್ ಸೋಂಕಿನಿಂದ ಬಳಲಿದವರಿಗೆ ವಿತರಿಸಿದರು.     ಈ ಸಂದರ್ಭದಲ್ಲಿ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾದ ವಿ.ಎಸ್.ಪಾಟೀಲ ಹಾಗೂ ಬಿ.ಜೆ.ಪಿ. ಮುಖಂಡರು ಇದ್ದರು.

Read More

ಕಾಲುವೆ ದುರಸ್ತಿ ಮಾಡುವಂತೆ ರೈತರ ಮನವಿ

ಮುಂಡಗೋಡ : ಮುಂಡಗೋಡ ತಾಲೂಕಿನ ಸನವಳ್ಳಿ ಜಲಾಶಯಕ್ಕೆ ಸೇರುವ ಮಳೆ ನೀರು ಕಾಲುವೆ ಒಡ್ಡು ಒಡೆದು ಅರಣ್ಯ ಪಾಲಾಗುತ್ತಿದೆ. ಒಡೆದ ಕಾಲುವೆ ದುರಸ್ತಿ ಮಾಡಿಸಿಕೊಡುವಂತೆ ಸನವಳ್ಳಿ ಗ್ರಾಮದ ರೈತರು ತಹಶೀಲದಾರ ಶ್ರೀಧರ ಮುಂದಲಮನಿ ಅವರಿಗೆ ಮನವಿ ಸಲ್ಲಿಸಿದರು.

Read More

ಯಲ್ಲಾಪುರ ರಸ್ತೆ : ಸಂಪೂರ್ಣ ಜಲಾವೃತ

ಮುಂಡಗೋಡ : ಮುಂಡಗೋಡ ಪಟ್ಟಣದ ಅಮ್ಮಾಜಿ ಕೆರೆ ಭರ್ತಿಯಾಗಿ ಕೋಡಿ ಹರಿದಿದೆ. ಕೋಡಿ ಹರಿದ ನೀರು ಚಿಕ್ಕ ನೀರಾವರಿ ಇಲಾಖೆಯ ಅವೈಜ್ಞಾನಿಕ ಕಾಮಗಾರಿಯಿಂದ ಯಲ್ಲಾಪುರ ರಸ್ತೆ ಸಂಪೂರ್ಣ ಜಲಾವೃತಗೊಂಡು ಪಕ್ಕದ ರೈತರ ಜಮೀನಿಗೆ ನೀರು ನುಗ್ಗಿ ಹಾನಿ ಉಂಟಾದ ಘಟನೆ ನಡೆದಿದೆ.      ಯಲ್ಲಾಪುರ ರಸ್ತೆಯಲ್ಲಿ ನೀರು ನಿಂತಿದ್ದು ಇಡೀ ರಸ್ತೆ ಹಳ್ಳದಂತಾಗಿದೆ. ವಾಹನ ಮತ್ತು ಬೈಕ್ ಸವಾರರು ವಾಹನ ಚಲಾಯಿಸಲು ಹರಸಾಹಸ ಪಡುತ್ತಿದ್ದಾರೆ.

Read More

Raj News Line

Raj News Line is Digital Daily News Paper Publishing from Mundgod (Uttar Kannada Dist.). Providing Mundgod Local News, Karnataka News & Updates including Politics, Crime, Education, Events and All about Mundgod Latest News today in Karnataka. Publisher and Editor : Rajshekhar N.Naik Email : rajshekarnaik2008@gmail.com       rajnewsline007@gmail.com Mobile : 9880111140, 6360567736

Read More

ಕಬ್ಬಿನ ಹೊಲಕ್ಕೆ ಹಾಕಿದ್ದ ವಿದ್ಯುತ್ ತಂತಿ ತಾಗಿ ವ್ಯಕ್ತಿ ಸಾವು

ಮುಂಡಗೋಡ : ಕಬ್ಬಿನ ಹೊಲಕ್ಕೆ ಅಳವಡಿಸಿದ ವಿದ್ಯುತ್ ತಂತಿ ತಾಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆಯೊಂದು ತಾಲೂಕಿನ ಉಗ್ಗಿನಕೇರಿಯಲ್ಲಿ ಕಳೆದ ರಾತ್ರಿ ನಡೆದಿದೆ. ತಾಲೂಕಿನ ಉಗ್ಗಿನಕೇರಿ ಗ್ರಾಮದ ಪ್ರದೀಪ ಜೂಜೆ ಸಿದ್ದಿ(34) ಎಂಬಾತನೇ ವಿದ್ಯುತ್ ತಂತಿ ತಾಗಿ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಪರಶುರಾಮ ಪುರದವರ್ ಇವರು ತಮ್ಮ ಕಬ್ಬಿನ ಹೊಲದ ಬೇಲಿಗೆ ವಿದ್ಯುತ್ ಹರಿಸಿದ್ದಲ್ಲಿ ಪ್ರಾಣಿಗಳು ಹಾಗೂ ಮನುಷ್ಯರು ಬೇಲಿಯನ್ನು ಮುಟ್ಟಿದರೆ ಪ್ರಾಣಾಪಾಯ ಆಗುತ್ತದೆ ಎನ್ನುವ ಬಗ್ಗೆ ತಿಳಿದಿದ್ದರೂ ಸಹ ನಿರ್ಲಕ್ಷ್ಯತನದಿಂದ ತಮ್ಮ ಕಬ್ಬಿನ ಹೊಲಕ್ಕೆ ಅಳವಡಿಸಿದ ತಂತಿಗೆ ಬೋರಿನ…

Read More

ಪದ್ಮಾಂಬಾ ಪುಟ್ಟಣ್ಣ ವಿಧಿವಶ

ಮುಂಡಗೋಡ : ತಾಲೂಕಿನಲ್ಲಿ ಪದ್ಮಾಂಬಾ ಪುಟ್ಟಣ್ಣ ಎಂದೇ ಖ್ಯಾತಿ ಪಡೆದಿದ್ದ ವೃಷಭರಾಜ ಅಂಗಡಿ(54) ವಿಧಿವಶರಾಗಿದ್ದಾರೆ.      ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಪುಟ್ಟಣ್ಣ, ಹುಬ್ಬಳ್ಳಿ ಕಿಮ್ಸನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಸಂಜೆ ಮೃತಪಟ್ಟಿದ್ದಾರೆ.      ಮುಂಡಗೋಡಿನ ಪದ್ಮಾಂಬಾ ಬುಕ್ ಸ್ಟಾಲ್ ಮಾಲೀಕರಾಗಿದ್ದ ಪುಟ್ಟಣ್ಣ ಅವರು, ತಾಲೂಕಿನ ಬಿ.ಜೆ.ಪಿ. ಸಕ್ರಿಯ ಕಾರ್ಯಕರ್ತರಾಗಿ ಜನಾನುರಾಗಿಯಾಗಿದ್ದರು. ಮೃತರು ಪತ್ನಿ, ಪುತ್ರಿ, ಪುತ್ರರನ್ನು ಬಿಟ್ಟು ಅಗಲಿದ್ದಾರೆ. ಇವರ ನಿಧನಕ್ಕೆ ವರ್ತಕರ ಸಂಘದವರು, ಗಣ್ಯರು, ಸ್ನೇಹಿತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Read More