ಜಿ.ಪಂ-ತಾ.ಪಂ ಮೀಸಲು: ಹೈಕೋರ್ಟ್‌ಗೆ ಮತ್ತೆ ಕಾಲಾವಕಾಶ ಕೋರಿಕೆ

ಬೆಂಗಳೂರು: ರಾಜ್ಯದ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರ ಪುನಃ ಮೂರು ವಾರಗಳ ಕಾಲಾವಕಾಶ ನೀಡುವಂತೆ ಹೈಕೋರ್ಟ್‌ಗೆ ಮನವಿ ಮಾಡಿದೆ.   ಈ ಸಂಬಂಧದ ಎರಡು ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ನ್ಯಾಯಮೂರ್ತಿ ವಿ.ಕಾಮೇಶ್ವರ್ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವಕೇಟ್ ಜನರಲ್ ಪ್ರತಿಮಾ ಹೊನ್ನಾಪುರ, ‘ಎಲ್ಲಾ 31 ಜಿಲ್ಲೆಗಳಲ್ಲಿ ಜಿ.ಪಂ ಹಾಗೂ ತಾ.ಪಂ ಕ್ಷೇತ್ರಗಳ ಪುನರ್‌ವಿಂಗಡಣೆ ಕಾರ್ಯ ಮುಗಿದಿದೆ….

Read More

ಮಹಾದಾಯಿ ಸರ್ವಪಕ್ಷ ಸಭೆ, ದೆಹಲಿಗೆ ನಿಯೋಗ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಾಧ್ಯತೆ

ಬೆಂಗಳೂರು: ರಾಷ್ಟ್ರೀಯ ವನ್ಯ ಜೀವಿ ಮಂಡಳಿಯ ಸಭೆಯಲ್ಲಿ ಮಹಾದಾಯಿ ಯೋಜನೆಯ ಅರಣ್ಯ ಭೂಮಿ ವರ್ಗಾವಣೆಯ ವಿಷಯವನ್ನು ಮುಂದೂಡಿರುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆ ತೀವ್ರ  ಕಳವಳ ವ್ಯಕ್ತಪಡಿಸಿತು ಮತ್ತು ಈ ಕುರಿತು ಸರ್ವಪಕ್ಷಗಳ ಸಭೆಯನ್ನು ನಡೆಸಲು ಹಾಗೂ ದೆಹಲಿಗೆ ಪ್ರಧಾನ ಮಂತ್ರಿಯವರ ಬಳಿಗೆ ಸರ್ವ ಪಕ್ಷಗಳ ನಿಯೋಗ ಕೊಂಡೊಯ್ಯಲು  ತೀರ್ಮಾನಿಸಲಾಯಿತು. ರಾಜ್ಯ ಸಂಪುಟವು ವನ್ಯ ಜೀವಿ ಮಂಡಳಿಯ ನಿರ್ಣಯದ ಬಗ್ಗೆ ಅಸಮಾದಾನ ಮತ್ತು ಕಳವಳ ವ್ಯಕ್ತಪಡಿಸಿ, ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವುದಕ್ಕೆ ಪರಿಶೀಲಿಸಲು ಕಾನೂನು ಇಲಾಖೆಗೆ ಸೂಚಿಸಿದೆ…

Read More

ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡಿಲ್ಲ, ಅವರ ಒಳ್ಳೆಯತನವನ್ನು ‘ಹೊಗಳು’ ಭಟ್ಟರು ಹಾಳು ಮಾಡಿದ್ದಾರೆ : ಸಿಎಂ ಇಬ್ರಾಹಿಂ

ಹುಬ್ಬಳ್ಳಿ : ಟಗರು ಟಗರು ಅಂತರಲ್ಲ ಅದು ಸಿಎಂ ಸಿದ್ದರಾಮಯ್ಯರ ಮೇಲೆ ಪ್ರೀತಿ ಅಲ್ಲ. ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡಿಲ್ಲ ಅವರ ಒಳ್ಳೆಯತನವನ್ನು ಹೊಗಳುಭಟ್ಟರು ಹಾಳು ಮಾಡಿದ್ದಾರೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒಳ್ಳೆಯ ಮನುಷ್ಯ. ಭ್ರಷ್ಟಾಚಾರ ಮಾಡಿದವನಲ್ಲ. ದುಡ್ಡು ಮಾಡಬೇಕಿದ್ದರೇ ಈ ಹಿಂದೆ ಅಧಿಕಾರದ ಅವಧಿಯಲ್ಲಿಯೇ ಸಾಕಷ್ಟು ಮಾಡ್ತಿದ್ದರು. ಆದರೆ, ಅಂತಹ ಕಾರ್ಯಕ್ಕೆ ಕೈ ಹಾಕಿಲ್ಲ ಅವರ ಒಳ್ಳೆಯತನವನ್ನು ಹೊಗಳುಭಟ್ಟರು ಹಾಳು ಮಾಡಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್…

Read More

ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ!

ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಇದೀಗ ಆದೇಶ ಹೊರಡಿಸಿದೆ. ಇಂದು ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಅತ್ಯಾಚಾರ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣ ಜಾಮೀನು…

Read More

ನಾಳೆಯ ರಾಜ್ಯ ಸಚಿವ ಸಂಪುಟ ಸಭೆಯ ಸಮಯ ಬದಲು: 4 ಗಂಟೆ ಬದಲಿಗೆ 3ಕ್ಕೆ ನಿಗದಿ

ಬೆಂಗಳೂರು: ಸೆಪ್ಟೆಂಬರ್.5ರ ಶಿಕ್ಷಕರ ದಿನಾಚರಣಯಂದೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಸರ್ಕಾರದ ಜಂಟಿ ಕಾರ್ಯದರ್ಶಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ದಿನಾಂಕ 05-09-2024ರ ನಾಳೆ ಸಂಜೆ 4 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿಪಡಿಸಲಾಗಿತ್ತು ಎಂದಿದ್ದಾರೆ. ಸೆ.5ರ ನಾಳೆ ಸಂಜೆ 4 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದಂತ ರಾಜ್ಯ ಸಚಿವ ಸಂಪುಟ ಸಭೆಯ ಸಮಯವನ್ನು ಬದಲಾವಣೆ ಮಾಡಲಾಗಿದೆ. 4 ಗಂಟೆಯ ಬದಲಾಗಿ…

Read More

ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸುವ ಪ್ರಕರಣ :ಕಾನೂನು ಸಚಿವರಿರೊಂದಿಗೆ ಚರ್ಚೆ

ಶಿರಸಿ : ಅರಣ್ಯವಾಸಿಗಳ ಪರ ರಾಜ್ಯ ಸರ್ಕಾರ ಈ ಹಿಂದೆ ಪ್ರಕಟಿಸಿದ ನಿಲುವುನೊಂದಿಗೆ ಅರಣ್ಯವಾಸಿಗಳ ಪರವಾಗಿ ಸುಪ್ರೀಂ ಕೋರ್ಟನಲ್ಲಿ ತಿದ್ದುಪಡಿ ಪ್ರಮಾಣ ಪತ್ರವನ್ನ ಸಲ್ಲಿಸಬೇಕೆಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ರಾಜ್ಯ ಸರ್ಕಾರದ ಕಾನೂನು ಸಚಿವರಾದ ಎಚ್.ಕೆ. ಪಾಟೀಲ್ ಅವರಿಗೆ  ಚರ್ಚಿಸಿ ಮನವಿ ನೀಡಿದರು.  ಅವರು ಇಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರನ್ನು ಬೆಂಗಳೂರಿನ ಗೃಹ ಕಛೇರಿಯಲ್ಲಿ ಭೇಟಿಯಾಗಿ ಮೇಲಿನಂತೆ ಮನವಿ ನೀಡಿದರು. ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತೀರಸ್ಕಾರವಾಗಿರುವ…

Read More

ಅನುದಾನಿತ ವಿಕಲಚೇತನರ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಧ್ಯಾಹ್ನದ ಬಿಸಿಯೂಟ ಯೋಜನೆ ವಿಸ್ತರಣೆ

ಶಿವಮೊಗ್ಗ: ಸಮಾಜದಲ್ಲಿ ಎಲ್ಲಾ ವರ್ಗದ ಜನರಿಗೂ ಸಮಾನತೆಯನ್ನು ನೀಡುವ ಕೆಲಸ ಸರ್ಕಾರದ ಯೋಜನೆಗಳಿಂದ ಆಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಮಂಗಳವಾರ ಶ್ರೀ ಶಾರದಾದೇವಿ ಅಂಧರ ವಿಕಾಸ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ 53 ಜನ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದರು. ಸಮಾಜದಲ್ಲಿ ಇತರರಿಗಿಂತ ನಾವು ಭಿನ್ನವಾಗಿದ್ದೇವೆ ಎನ್ನುವ ಮನೋಭಾವ…

Read More

ರಾಜ್ಯ ಗ್ಯಾರಂಟಿ ಯೋಜನೆಗಳ ಮುಂಡಗೋಡ ತಾಲೂಕಾ ಸಮಿತಿ ಕಚೇರಿ ಉದ್ಘಾಟನೆ

ಮುಂಡಗೋಡ : ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ತಾಲೂಕಾ ಸಮಿತಿಯ ಮುಂಡಗೋಡ ಕಚೇರಿಯನ್ನು ಮೀನುಗಾರಿಕೆ ಮತ್ತು ಬಂದರು ಒಳನಾಡು ಜಲಸಾರಿಗೆ ಸಚಿವರೂ, ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳು ವೈದ್ಯ ಇಂದು ಉದ್ಘಾಟಿಸಿದರು. ಶಾಸಕರಾದ ಶಿವರಾಮ ಹೆಬ್ಬಾರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕರಾದ ವಿ.ಎಸ್.ಪಾಟೀಲ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಉತ್ತರಕನ್ನಡದ ಜಿಲ್ಲಾ ಅಧ್ಯಕ್ಷರಾದ ಸತೀಶ ನಾಯ್ಕ, ತಾಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ಹಿರೇಮಠ, ತಹಶೀಲದಾರ ಶಂಕರ ಗೌಡಿ, ತಾ.ಪಂ.ಕಾರ್ಯನಿರ್ವಾಹಕ…

Read More

ಮುಂಡಗೋಡ : ಅಶ್ವಿನಿ ಹೆಗಡೆ, ಸಿದ್ದಲಿಂಗಪ್ಪ ಹೊಸಮನಿ, ಪೂರ್ಣಿಮಾ ಗೌಡ ಅವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಮುಂಡಗೋಡ : ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ತಾಲೂಕಿನ ಶಿಕ್ಷಕಿ ಅಶ್ವಿನಿ ಹೆಗಡೆ, ಶಿಕ್ಷಕ ಸಿದ್ದಲಿಂಗಪ್ಪ ಹೊಸ್ಮನಿ ಹಾಗೂ ಶಿಕ್ಷಕಿ ಪೂರ್ಣಿಮಾ ಗೌಡ ಅವರಿಗೆ ಲಭಿಸಿದೆ.  ಶಿರಸಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಮಟ್ಟದ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಮುಂಡಗೋಡ ತಾಲೂಕಿನ ಕಲಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಅಶ್ವಿನಿ ಹೆಗಡೆ, ನ್ಯಾಸರ್ಗಿಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಿದ್ದಲಿಂಗಪ್ಪ ಹೊಸ್ಮನಿ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಮಳಗಿಯ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕಿ ಪೂರ್ಣಿಮಾ ಗೌಡರಿಗೆ…

Read More

ರೇಣುಕಾಸ್ವಾಮಿ ಹತ್ಯೆ ಕೇಸ್ : ಕೋರ್ಟ್ ಗೆ ದರ್ಶನ್ & ಗ್ಯಾಂಗ್ ವಿರುದ್ಧ4,500 ಪುಟಗಳ `ಚಾರ್ಜ್ ಶೀಟ್’ ಸಲ್ಲಿಕೆ!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ ಇದೀಗ ಪೊಲೀಸರು 4500 ಪುಟಗಳಷ್ಟು ಚಾರ್ಜ್‌ಶೀಟ್ ಕೋರ್ಟ್ ಗೆ ಪೊಲೀಸರು ಸಲ್ಲಿಸಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೆ ಸೆಪ್ಟೆಂಬರ್ 9 ಕ್ಕೆ 3 ತಿಂಗಳು ತುಂಬಲಿವೆ. ಈಗಾಗಲೇ 4500 ಪುಟಗಳ ಚಾರ್ಜ್‌ಶೀಟ್ ಮುಕ್ತಾಯಗೊಂಡಿದ್ದು, ಎಸಿಪಿ ಕಚೇರಿಯಿಂದ ದೊಡ್ಡ ಬಾಕ್ಸ್ ಗಳಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಪ್ರಕರಣ ದಾಖಲಾದ ಬಳಿಕ 90…

Read More