ಶಿಂಗನಳ್ಳಿಯಲ್ಲಿ ಮನೆ ಕುಸಿದು ಹಾನಿ

ಮುಂಡಗೋಡ : ತಾಲೂಕಿನ ಕಾತೂರ ಗ್ರಾಮ ಪಂಚಾಯತ ವ್ಯಾಪ್ತಿಯ ಶಿಂಗನಳ್ಳಿ ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದು ಹಾನಿ ಸಂಭವಿಸಿದ ಘಟನೆ ಬುಧವಾರ ರಾತ್ರಿ ಜರುಗಿದೆ.    ಶಿಂಗನಳ್ಳಿ ಗ್ರಾಮದ ರವಿ ಸಹದೇವಪ್ಪ ಪಾಟೀಲ ಎಂಬವರ ಮನೆಯೆ ಮಳೆಗೆ ಕುಸಿದು ಬಿದ್ದಿದೆ. ಕಳೆದ 3-4 ದಿನಗಳಿಂದ ತಾಲೂಕಿನಲ್ಲಿ ಮಳೆ ಸುರಿದ ಕಾರಣ ಈ ಮನೆ ಕುಸಿದು ಬಿದ್ದಿದೆ. ತುಂಬಾ ಹಳೆಯ ಮನೆಯಾಗಿದ್ದ ಕಾರಣ ನಿರಂತರ ಮಳೆಗೆ ಕುಸಿದು ಬಿದ್ದಿದೆ ಎನ್ನಲಾಗಿದೆ.

Read More

ನಕ್ಕು ಬಿಡಿ…..!

ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ಕೋಟಿರೂಪಾಯಿ ಅಂತಾರೆ ಅಂದ ಮೇಲೆ ಮನೆಯಲ್ಲಿ ಎರಡು ಕೋಟಿ ರೂಪಾಯಿ ಇರಲಿ ಅಂತ ಆಸೆ ಪಡುವುದರಲ್ಲಿ ತಪ್ಪೇನು…..? ~ ಮಂಜುನಾಥ ಹರಮಲಕರ, ಉಪಾಧ್ಯಕ್ಷರು ಪ.ಪಂ. ಮುಂಡಗೋಡ

Read More

ಬಸ್ ನಿಲ್ದಾಣದಲ್ಲಿ ಶೌಚಾಲಯ ತೆರವು : ಪ್ರಯಾಣಿಕರ ಪರದಾಟ

ಮುಂಡಗೋಡ : ನೂತನವಾಗಿ ನಿರ್ಮಾಣವಾಗುತ್ತಿರುವ ಬಸ್ ನಿಲ್ದಾಣದ ಹಿಂಬದಿಯಲ್ಲಿದ್ದ ತಾತ್ಕಾಲಿಕ ಶೌಚಾಲಯ ತೆರವುಗೊಳಿಸದ ಪರಿಣಾಮ ಬಸ್ ನಿಲ್ದಾಣದಲ್ಲಿ ಶೌಚಾಲಯವಿಲ್ಲದೆ ಪ್ರಯಾಣಿಕರು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಪಟ್ಟಣದಲ್ಲಿ ಮೂರುಕೋಟಿರೂ. ಅನುದಾನದಲ್ಲಿ ಹೈಟೇಕ್ ಬಸ್ ನಿಲ್ದಾಣ ನಿರ್ಮಿಸ ಲಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ಕಾಮಗಾರಿ ನಡೆಯುತ್ತಿದ್ದು ಆದರೆ ಕೋವಿಡ್ ನಿಂದ ಸರಕಾರ ಲಾಕ್‌ಡೌನ್ ಜಾರಿ ಮಾಡಿದ ಪರಿಣಾಮ ಕಾಮಗಾರಿ ಆಮೆಗತಿಯಲ್ಲಿ ಸಾಗಿದ್ದು ಇದೀಗ ಮುಕ್ತಾಯ ಹಂತ ತಲುಪಿದೆ. ಕೆಲವೆ ತಿಂಗಳಲ್ಲಿ ಹೈಟೆಕ್ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಸಿಗಲಿದೆ….

Read More

ಎಸ್.ಪಿ. ಶಿವಪ್ರಕಾಶ ದೇವರಾಜ್ ವರ್ಗಾವಣೆ

ಕಾರವಾರ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ್ ವರ್ಗಾವಣೆಯಾಗಿದೆ. ನೂತನ ಪೊಲೀಸ್ ವರಿಷ್ಠಾಧಿಕಾರಿ ಯಾಗಿ ವರ್ತಿಕಾ ಕಟಿಯಾರ್ ನೇಮಕ ಮಾಡಲಾಗಿದೆ. ವರ್ತಿಕಾ ಕಟಿಯಾರ್ ಅವರು ಇದೇ ಮೊದಲ ಬಾರಿಗೆ ಜಿಲ್ಲೆಗೆ ಬರುತ್ತಿರುವ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಾರೆ. ರಾಜ್ಯ ಅಪರಾಧ ವಿಭಾಗದಲ್ಲಿ ಕಾರ್ಯನಿರ್ವಸುತ್ತಿದ್ದ ವರ್ತಿಕಾ ಕಟಿಯಾರ ಅವರನ್ನು ಉತ್ತರಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಯಾಗಿ ರಾಜ್ಯ ಸರಕಾರ ನೇಮಕ ಮಾಡಿದೆ. ಕಳೆದ ಎರಡು ವರ್ಷಗಳಿಂದ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದ ಶಿವಪ್ರಕಾಶ ದೇವರಾಜ ದಿಢೀರ್ ವರ್ಗಾವಣೆ ಎಲ್ಲರನ್ನೂ ಚಕಿತಗೊಳಿಸಿದೆ.

Read More

ರೋಟರಿ ಕ್ಲಬ್ ಮುಂಡಗೋಡ : ನೂತನ ಪದಾಧಿಕಾರಿಗಳ ಆಯ್ಕೆ

ಮುಂಡಗೋಡ : ರೋಟರಿ ಕ್ಲಬ್ ಮುಂಡಗೋಡ ನೂತನ ಅಧ್ಯಕ್ಷರಾಗಿ ಶಾಜಿ ಥಾಮಸ್ ಆಯ್ಕೆಯಾಗಿದ್ದಾರೆ.      ಕಾರ್ಯದರ್ಶಿಯಾಗಿ ಬೈಜು ವಿ.ಜೆ., ಖಜಾಂಚಿಯಾಗಿ ವಸಂತ ಕೊಣಸಾಲಿ ಆಯ್ಕೆಯಾಗಿದ್ದಾರೆ. ಪತ್ರಿಕಾಗೋಷ್ಟಿ : ತಮ್ಮ ಅವಧಿಯಲ್ಲಿ ರೋಟರಿ ಕ್ಲಬ್ ನಿಂದ ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಎಲ್ಲರೂ ಸಹಕಾರ ನೀಡಬೇಕೆಂದು ರೋಟರಿ ಕ್ಲಬ್ ನೂತನ ಅಧ್ಯಕ್ಷರಾದ ಶಾಜಿ ಥಾಮಸ್ ಇಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.    ಪತ್ರಕರ್ತರು ಸಮಾಜದ ಓರೆಕೋರೆಗಳನ್ನು ತಿದ್ದುವವರು, ಪತ್ರಕರ್ತರು ಸೈನಿಕರಿದ್ದಂತೆ ಹಾಗೂ ಕೊರೊನಾ ವಾರಿಯರ್ಸ ಎಂದು ಅವರು ನುಡಿದರು….

Read More

ಗೋಡೆ ಕುಸಿದು ಮೃತಳಾದವಳ ಕುಟುಂಬಕ್ಕೆ 16 ಗಂಟೆಯೊಳಗೆ ಪರಿಹಾರದ ಚೆಕ್ ನೀಡಿದ ಸಚಿವ ಹೆಬ್ಬಾರ

ಶಿರಸಿ : ತಾಲೂಕಿನ ಉಂಚಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಂಡಿಗೆಹಳ್ಳ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಯಶೋದಾ ಬಂಗಾರ ಗೌಡ ಎಂಬ ಮಹಿಳೆ ಮೃತಪಟ್ಟ ಅಹಿತಕರ ಘಟನೆ ಮಂಗಳವಾರ ನಡೆದಿದ್ದು,ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಮೃತರ ಮನೆಗೆ ಭೇಟಿ ನೀಡಿ ಮುಂದಿನ 48 ಗಂಟೆಗಳ ಒಳಗಾಗಿ ಪರಿಹಾರ ಧನವನ್ನು ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಸಚಿವ ಶಿವರಾಮ ಹೆಬ್ಬಾರ್ ಘಟನೆ ನಡೆದ 16 ಗಂಟೆಗಳ ಒಳಗಾಗಿ ಖುದ್ದು ತಾವೇ ಮೃತರ ಮನೆಗೆ ಭೇಟಿ ನೀಡಿ ಐದು…

Read More

ಬಾಚಣಕಿ ಜಲಾಶಯದಲ್ಲಿ ಶೇ.80ರಷ್ಟು ನೀರು ಸಂಗ್ರಹ

ಮುಂಡಗೋಡ : ಕಳೆದ 3-4 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಮುಂಡಗೋಡ ತಾಲೂಕಿನ 5 ಜಲಾಶಯಗಳಲ್ಲಿ ನೀರು ಸಂಗ್ರಹವಾಗುತ್ತಿದೆ.    ಬಾಚಣಕಿ ಜಲಾಶಯದಲ್ಲಿ ಶೇ.80ರಷ್ಟು ನೀರು ಸಂಗ್ರಹವಾಗಿದೆ. ಅತ್ತಿವೇರಿ ಜಲಾಶಯದಲ್ಲಿ ಶೇ.60ರಷ್ಟು, ರಾಮಾಪುರ ಜಲಾಶಯದಲ್ಲಿ ಶೇ.55ರಷ್ಟು, ನ್ಯಾಸರ್ಗಿ ಜಲಾಶಯದಲ್ಲಿ ಶೇ.65ರಷ್ಟು, ಸನವಳ್ಳಿ ಜಲಾಶಯದಲ್ಲಿ ಶೇ.75ರಷ್ಟು ನೀರು ಸಂಗ್ರಹವಾಗಿದೆ.    ಇನ್ನು ತಾಲೂಕಿನಲ್ಲಿ 28 ಕೆರೆಗಳಿದ್ದು, ಅವುಗಳಲ್ಲಿ ಅಮ್ಮಾಜಿ ಕೆರೆ ತುಂಬಿದೆ.    ಸಾಲಗಾಂವ ಕೆರೆ ಶೇ.95ರಷ್ಟು, ಅರಶಿಣಗೇರಿ ಕೆರೆ ಮತ್ತು ಆಲಳ್ಳಿ ಅಯ್ಯನಕೆರೆಯಲ್ಲಿ ಶೇ.75ರಷ್ಟು ನೀರು ಸಂಗ್ರಹವಾಗಿದೆ.  …

Read More