ನಾಳೆ ದಿ.9ರಂದು ವಾಲ್ಮೀಕಿ ಜಯಂತಿ

Spread the love

ಮುಂಡಗೋಡ : ತಾಲೂಕಾಡಳಿತ, ತಾಲೂಕಾ ಪಂಚಾಯತ,ಪಟ್ಟಣ ಪಂಚಾಯತ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ ನಾಳೆ ದಿ.9ರಂದು ಶ್ರೀಮಹರ್ಷಿ ವಾಲ್ಮೀಕಿ ಅವರ ಜಯಂತಿ ಕಾರ್ಯಕ್ರಮ ನಡೆಯಲಿದೆ. ದಿ.9ರಂದು ಬೆಳಿಗ್ಗೆ 9-30 ಗಂಟೆಗೆ ಪಟ್ಟಣದ ನಿರೀಕ್ಷಣಾ ಮಂದಿರ (ಐ.ಬಿ.) ಯಿಂದ ಮೆರವಣಿಗೆ ಪ್ರಾರಂಭಿಸಿ ಶಿವಾಜಿ ಸರ್ಕಲ್ ಹಾಗೂ ಬಂಕಾಪುರ ರಸ್ತೆ ಮೂಲಕ ನ್ಯಾಸರ್ಗಿ ರಸ್ತೆಗೆ ಹೊಂದಿಕೊಂಡಿರುವ ಶ್ರೀ ಮಹರ್ಷಿ ವಾಲ್ಮೀಕಿ ಗದ್ದುಗೆಗೆ ಬಂದು ತಲುಪಲಿದೆ.

ಬೆಳಿಗ್ಗೆ 11ಗಂಟೆಗೆ ಶ್ರೀಮಹರ್ಷಿ ವಾಲ್ಮೀಕಿ ಗದ್ದುಗೆ ಹತ್ತಿರ ಸಭಾ ಕಾರ್ಯಕ್ರಮ ನಡೆಯಲಿದೆ. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ ಅಧ್ಯಕ್ಷತೆ ವಹಿಸಲಿದ್ದಾರೆ. ಸರಕಾರಿ ಜ್ಯೂನಿಯರ ಕಾಲೇಜಿನ ಶಿಕ್ಷಕರಾದ ಗಂಗಾಧರ ನಾಯ್ಕ ಉಪನ್ಯಾಸ ನೀಡಲಿದ್ದಾರೆ.

********************