ಬಾಲಕಿ ಮನೆಬಿಟ್ಟು ಬಂದಿರುವುದು ಜನರಿಗೆ ಶಾಕ್ ನೀಡಿತ್ತು….!

Spread the love
ಬಾಲಕಿಯನ್ನು ಸಮಾಧಾನ ಮಾಡುತ್ತಿರುವ ಪೊಲೀಸರು

ಮುಂಡಗೋಡ : ಗ್ರಾಮೀಣ ಭಾಗದ ಬಾಲಕಿಯೊಬ್ಬಳು ಮನೆಬಿಟ್ಟು ಮುಂಡಗೋಡಿಗೆ ಬಂದು ತನಗೊಂದು ಬಾಡಿಗೆ ಮನೆ ಕೊಡಿಸಿ ಎಂದು ಜನರಲ್ಲಿ ಮನವಿ ಮಾಡಿಕೊಂಡ ಘಟನೆ ಇಂದು ನಡೆದಿದೆ.

    ಗ್ರಾಮೀಣ ಭಾಗದ ಅಪ್ರಾಪ್ತ ಬಾಲಕಿಯೊಬ್ಬಳು ತನಗೆ ಮನೆಯಲ್ಲಿ ಹೊಡೆಯುತ್ತಾರೆ, ಬಡಿಯುತ್ತಾರೆಂದು ಬ್ಯಾಗ್‍ಗಳಲ್ಲಿ ಬಟ್ಟೆಯನ್ನು ತುಂಬಿಕೊಂಡು ಪಟ್ಟಣದ ಮಾರ್ಕೆಟಿಂಗ್ ಸೊಸೈಟಿ ಆವರಣದಲ್ಲಿ ಕುಳಿತಿದ್ದಳು. ಸೊಸೈಟಿ ಸಿಬ್ಬಂದಿಗಳಿಗೆ ಮನೆಯಲ್ಲಿ ತೊಂದರೆ ಕೊಡುತ್ತಿರುವುದರಿಂದ ಮನೆ ಬಿಟ್ಟು ಬಂದಿದ್ಧೇನೆ. ನನಗೆ ಬಾಡಿಗೆ ಮನೆ ಕೊಡಿಸಿ ಪ್ರತ್ಯೇಕವಾಗಿ ಜೀವನ ನಡೆಸುತ್ತೇನೆ ಎಂದು ಹೇಳಿದಳೆಂದು ತಿಳಿದುಬಂದಿದೆ.

   ಸಣ್ಣ ವಯಸ್ಸಿನಲ್ಲಿ ಈ ಬಾಲಕಿ ಮನೆಬಿಟ್ಟು ಬಂದಿರುವುದು ಜನರಿಗೆ ಶಾಕ್ ನೀಡಿತ್ತು. ಈ ಬಾಲಕಿ ಯಾವ ಊರಿನವವಳೆಂದು ಉತ್ತರ ನೀಡುತ್ತಿರಲಿಲ್ಲ. ಬದಲಿಗೆ ತಮ್ಮ ಹೆಸರನ್ನು ಮಾತ್ರ ಹೇಳುತ್ತಿದ್ದಳು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ತಿಳಿದ ತಕ್ಷಣ ಪಿ.ಎಸ್.ಐ. ಬಸವರಾಜ್ ಮಬನುರ, ಪೊರೊಬಶನರಿ ಪಿ.ಎಸ್.ಐ. ಕಸ್ತೂರಿ ಕುಂಕೂರ ಹಾಗೂ ಸಿಬ್ಬಂದಿಗಳು ಬಂದು ವಿಚಾರಿಸಿ, ಠಾಣೆಗೆ ಕರೆದುಕೊಂಡು ಹೋದರು. ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳನ್ನು ಕರೆಸಿ ಬಾಲಕಿಯ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು. ಬಾಲಕಿ ಗ್ರಾಮೀಣ ಭಾಗದವಳೆಂದು ಎಂದು ಗೊತ್ತಾಗಿ ಕುಟುಂಬಸ್ಥರನ್ನು ಕರೆಸಿ ಬಾಲಕಿಯನ್ನು ಕುಟುಂಬಸ್ಥರೊಂದಿಗೆ ಮನೆಗೆ ಕಳುಹಿಸಿಕೊಡಲಾಯಿತು.