ಕಣಜ ಮುಂಡಗೋಡ ವತಿಯಿಂದ ಸಂಗ್ರಹಿಸಿದ ಆಹಾರ ಕಿಟ್ ಎಂ.ಎಲ್.ಸಿ. ಶಾಂತಾರಾಮ ಸಿದ್ದಿಯಿಂದ ವಿತರಣೆ

Spread the love

ಮುಂಡಗೋಡ : ಎಂ.ಎಲ್.ಸಿ. ಶಾಂತಾರಾಮ ಸಿದ್ದಿ ಅವರು ಕಣಜಮುಂಡಗೋಡ ವತಿಯಿಂದ ಸಂಗ್ರಹಿಸಿದ ಆಹಾರ ಕಿಟಗಳನ್ನು ಮುಂಡಗೋಡ ತಾಲೂಕಿನ ಜೋಗೇಶ್ವರ ಹಳ್ಳ, ಜೇನುಮುರಿ, ಸಿರಿಗೇರಿ, ಚವಡಳ್ಳಿ, ಬ್ಯಾನಳ್ಳಿ ಭಾಗದಲ್ಲಿ ಕಡುಬಡವರಿಗೆ ಹಾಗೂ ಕೋವಿಡ್ ಸೋಂಕಿನಿಂದ ಬಳಲಿದವರಿಗೆ ವಿತರಿಸಿದರು.

    ಈ ಸಂದರ್ಭದಲ್ಲಿ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾದ ವಿ.ಎಸ್.ಪಾಟೀಲ ಹಾಗೂ ಬಿ.ಜೆ.ಪಿ. ಮುಖಂಡರು ಇದ್ದರು.