ಬಾಡಿಗೆದಾರರಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Spread the love

ಮುಂಡಗೋಡ: ಪಟ್ಟಣ ಪಂಚಾಯತ ವಾಣಿಜ್ಯ ಮಳಿಗೆಗಳ ಮೂರು ತಿಂಗಳ ಬಾಡಿಗೆ ಹಣವನ್ನು ವಿನಾಯತಿ ನೀಡುವಂತೆ ವಾಣಿಜ್ಯ ಮಳಿಗೆ ಬಾಡಿಗೆದಾರರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ನಾವುಗಳು ಪಟ್ಟಣ ಪಂಚಾಯತಕ್ಕೆ ಸೇರಿದ ವಾಣಿಜ್ಯ ಮಳಿಗೆಗಳನ್ನು ಬಾಡಿಗೆ ಪಡೆದುಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದು, ಆದರೆ ಕೋವಿಡ್ ಎರಡನೆ ಅಲೆ ಆರಂಭವಾದ ನಂತರ ನಾವು ನಮ್ಮ ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡಿಕೊಂಡು ಮನೆಯಲ್ಲಿ ಉಳಿದುಕೊಂಡಿದ್ದೆವು. ಇದೀಗ ಲಾಕ್‍ಡೌನ್ ತೆರವುಗೊಳಿಸಿದ ಪರಿಣಾಮ ನಮ್ಮ ಅಂಗಡಿಗಳನ್ನು ಆರಂಭಿಸಿದ್ದೇವೆ. ಆದರೆ ಸರಿಯಾದ ವ್ಯಾಪಾರ ನಡೆಯುತ್ತಿಲ್ಲ. ಆದ್ದರಿಂದ ವಾಣಿಜ್ಯ ಮಳಿಗೆಗಳ ಮೂರು ತಿಂಗಳ ಬಾಡಿಗೆಯನ್ನು ಪಡೆಯದೆ ನಮಗೆ ರಿಯಾಯತಿ ನೀಡಬೇಕು ಎಂದು ವಾಣಿಜ್ಯ ಮಳಿಗೆ ಬಾಡಿಗೆದಾರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.