ಎನ್.ಆರ್.ಎಲ್.ಎಂ. ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚರ್ಚೆ

Spread the love

ಮುಂಡಗೋಡ : ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಗಾ ಅವರು ತಾಲೂಕಿನ ಸಾಲಗಾಂವ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಎನ್‍ಆರ್‍ಎಲ್‍ಎಂ, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಮತ್ತು ಸ್ವ ಸಹಾಯ ಸಂಘದ ಸದಸ್ಯರೊಂದಿಗೆ ಚರ್ಚೆ ನಡೆಸಿ ಸೂಕ್ತ ಸಲಹೆ ಸೂಚನೆ ನೀಡಿದರು.

   ಈ ಸಂದರ್ಭದಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪ್ರವೀಣ ಕಟ್ಟಿ, ಸಹಾಯಕ ನಿರ್ದೇಶಕರಾದ ದಾಸನಕೊಪ್ಪ, ಸಂಜೀವಿನಿ ಜಿಲ್ಲಾ ಅಭಿಯಾನ ಘಟಕದ ಡಿ.ಪಿ.ಎಂ. ನಾಗರಾಜ ಕಲ್ಮನೆ, ಪಿ.ಡಿ.ಒ. ಸೋಮಲಿಂಗಪ್ಪ ಛಬ್ಬಿ, ತಾ.ಪಂ. ಸಂಜೀವಿನಿ ವಲಯ ಮೇಲ್ವಿಚಾರಕರಾದ ಶ್ಯಾಮಲಾ ನಾಯ್ಕ, ಒಕ್ಕೂಟದ ಅಧ್ಯಕ್ಷರಾದ ಕುಸುಮಾ ಹಾನಗಲ್ ಮತ್ತು ಸದಸ್ಯರು ಹಾಜರಿದ್ದರು.