ತವರಿನಿಂದ ಬಾರದ ಪತ್ನಿ : ಪತಿ ಸಾವು

Spread the love

ಮುಂಡಗೋಡ : ಕಳೆದ ವರ್ಷ ದೀಪಾವಳಿ ಹಬ್ಬದ ಸಮಯದಲ್ಲಿ ತವರು ಮನೆಗೆ ಹೋಗಿದ್ದ ಪತ್ನಿ, ಮರಳಿ ಬಾರದಿರುವುದರಿಂದ, ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಕ್ರಿಮಿನಾಶಕ ಸೇವಿಸಿದ್ದ ವ್ಯಕ್ತಿ ಮೃತಪಟ್ಟ ಘಟನೆ ತಾಲೂಕಿನ ಚವಡಳ್ಳಿ ಗ್ರಾಮದಲ್ಲಿ ಇಂದು ಜರುಗಿದೆ.  

ಬಸವರಾಜ ಭರಮಣ್ಣ ಕುರಿಯವರ(36) ಎಂಬಾತನೇ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಪತ್ನಿಯ ವಿಷಯವನ್ನೇ ಮನಸ್ಸಿಗೆ ಹಚ್ಚಿಕೊಂಡು ಕೊರಗುತ್ತಿದ್ದ ಈತ,  ಜುಲೈ1ರಂದು ರಾತ್ರಿ ಸಮಯದಲ್ಲಿ ಯಾವುದೋ ಕ್ರಿಮಿನಾಶಕ ಔಷಧಿ ಕುಡಿದು ತೀವ್ರವಾಗಿ ಅಸ್ವಸ್ಥಗೊಂಡಿದ್ದನು. ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾನೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.