Headlines

ನಾವು ವೆಸ್ಟೆಂಡ್ ಹೋಟೆಲ್ ನಲ್ಲಿ ಕುಳಿತು ಸರ್ಕಾರ ನಡೆಸುತ್ತಿಲ್ಲ : H.D ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ಟಾಂಗ್

Spread the love

ಬೆಂಗಳೂರು : ನಾವು ವೆಸ್ಟೆಂಡ್ ಹೋಟೆಲ್ ನಲ್ಲಿ ಕುಳಿತು ಸರ್ಕಾರ ನಡೆಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಪರೋಕ್ಷವಾಗಿಟಾಂಗ್ ನೀಡಿದ್ದಾರೆ.

ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ ನಾವು ವೆಸ್ಟಂಡ್ ಹೋಟೆಲ್ ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ, ಜನರ ನಡುವೆ ಇದ್ದು ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ.

ಮಳೆ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕನಿಷ್ಠ ಮಟ್ಟಕ್ಕೆ ಕುಸಿದಿದೆ, ಇದರಿಂದಾಗಿ ಜಲವಿದ್ಯುತ್ ಉತ್ಪಾದಕ ಘಟಕಗಳು ತಮ್ಮ ಸಾಮರ್ಥ್ಯಕ್ಕೆ ಸಮನಾಗಿ ವಿದ್ಯುತ್ ಉತ್ಪಾದಿಸಲು ಸಾಧ್ಯವಿಲ್ಲದಂತಾಗಿದೆ ಎಂದು ಸಿಎಂ ಹೇಳಿದರು.

ರಾಜ್ಯದಲ್ಲಿ ಉತ್ಪಾದನೆ ಕಡಿಮೆಯಿದ್ದು, ಬೇಡಿಕೆ ಹೆಚ್ಚಿರುವುದರಿಂದ ಅನಿವಾರ್ಯವಾಗಿ ತಾತ್ಕಾಲಿಕ ಒಡಂಬಡಿಕೆಯ ಮೇರೆಗೆ ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಗೆ ನಾವು ಮುಂದಾಗಿದ್ದೇವೆ. ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ನವೀಕರಿಸಬಹುದಾದ ಇಂಧನ ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ಕಡೆಗೂ ಗಮನ ಹರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.