ಕುಮಾರಸ್ವಾಮಿ ಸಿಎಂ ಆಗಿದ್ದಾಗ ತಾಜ್ ವೆಸ್ಟೆಂಡ್​​ನಲ್ಲಿ ಏತಕ್ಕಾಗಿ ಇದ್ದರು : ಸಿಎಂ ಸಿದ್ದರಾಮಯ್ಯ ಪ್ರಶ್ನೆ

Spread the love

ಬೆಂಗಳೂರು : ಕುಮಾರಸ್ವಾಮಿ ಸಿಎಂ ಆಗಿದ್ದಾಗ ಎಲ್ಲಿದ್ರು ಅಂತಾ ಗೊತ್ತಿದೆಯಲ್ಲ.?. ಇವರು ಇದ್ದದ್ದು ಎಲ್ಲಿ?. ಏತಕ್ಕಾಗಿ ಅಲ್ಲಿದ್ದರು ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಟೌನ್ ಹಾಲ್ ಬಳಿಯ ಕಿತ್ತೂರು ರಾಣಿ ಚೆನ್ನಮ್ಮ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ತಾಜ್​ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಇದ್ರಲ್ವಾ ಯಾಕೆ ಇದ್ರು?. ಇವರು ಇದ್ದದ್ದು ಎಲ್ಲಿ?.

ಏತಕ್ಕೋಸ್ಕರ ಇದ್ರು ಎಂದು ಪ್ರಶ್ನಿಸಿದರು.

ಕಾವೇರಿ ನಿವಾಸ ಬಿಟ್ಟು ಕೊಡದ ವಿಚಾರವಾಗಿ ಪ್ರತಿಕ್ರಿಯಿಸಿ, ಕೇಳಿದ್ರೆ ಬಿಟ್ಟು ಕೊಡ್ತಿದ್ದೆ. ಆಗ ಯಡಿಯೂರಪ್ಪ ಇದ್ರಲ್ಲವಾ ಅದಕ್ಕೆ ಏನು ಹೇಳ್ತಾರೆ?. ಕೊನೆಯವರೆಗೂ ಯಡಿಯೂರಪ್ಪ ಅದೇ ಮನೆಯಲ್ಲಿ ಇದ್ರಲ್ಲವಾ?. ಒಂದು ವರ್ಷ 10 ತಿಂಗಳು ಯಡಿಯೂರಪ್ಪ ಅಲ್ಲೇ ಇದ್ರಲ್ಲಾ ಅದಕ್ಕೆ ಏನ್ ಹೇಳ್ತಾರೆ..?. ಜಾರ್ಜ್​ಗೆ ಆ ಮನೆಯನ್ನು ನೀಡಲಾಗಿತ್ತು. ಜಾರ್ಜ್ ಬಳಿಕ ನನಗೆ ಕೊಟ್ಟಿದ್ದರು. ಕಾವೇರಿ ನಿವಾಸ ಅದು delegated ಕ್ವಾಟರ್ಸ್ ಅಲ್ಲ. ಕಾವೇರಿ ನಿವಾಸದಲ್ಲಿ ಯಾರು ಬೇಕಾದರೂ ಇರಬಹುದು ಎಂದು ಸಮರ್ಥಿಸಿಕೊಂಡರು.