ಸ್ಥಗಿತಗೊಂಡಿದ್ದ ಅಪೌಷ್ಟಿಕ ಮಕ್ಕಳ ಪುನಶ್ಚೇತನ ಕೇಂದ್ರ ಡಿ.7ರಂದು ಪುನಃ ಆರಂಭ : ಡಾ.ನರೇಂದ್ರ ಪವಾರ

Spread the love

ಮುಂಡಗೋಡ : ಸ್ಥಗಿತಗೊಂಡಿದ್ದ ಅಪೌಷ್ಟಿಕ ಮಕ್ಕಳ ಪುನಶ್ಚೇತನ ಕೇಂದ್ರವನ್ನು ಡಿ.7ರಿಂದ ಪುನಃ ಆರಂಭಗೊಳ್ಳಲಿದೆ ಎಂದು ಮುಂಡಗೋಡ ತಾಲೂಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ನರೇಂದ್ರ ಪವಾರ ತಿಳಿಸಿದ್ದಾರೆ.

ತಾಲೂಕ ಆಸ್ಪತ್ರೆ ಮುಂಡಗೋಡನಲ್ಲಿ ಅಪೌಷ್ಟಿಕ ಮಕ್ಕಳ ಪುನಶ್ಚೇತನ ಕೇಂದ್ರ(ಎನ್.ಆರ್.ಸಿ.) ಸ್ಥಗಿತಗೊಂಡಿತ್ತು. ಮುಂಡಗೋಡ ತಾಲೂಕಿನ ಪೌಷ್ಠಿಕ ಮಕ್ಕಳು, ಪಾಲಕರು ಕಾರವಾರದ ಜಿಲ್ಲಾ ಆಸ್ಪತ್ರೆ ಎನ್.ಆರ್.ಸಿ. ಕೇಂದ್ರದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯಲು ಕಷ್ಟ ಸಾಧ್ಯವಾಗಿರುವುದರಿಂದ ಸಾರ್ವಜನಿಕರ ಹಾಗೂ ಅಪೌಷ್ಟಿಕ ಮಕ್ಕಳ ಹಿತ ದೃಷ್ಟಿಯಿಂದ ಡಿಸೆಂಬರ್ 7ರಂದು ತಾಲೂಕ ಆಸ್ಪತ್ರೆಯಲ್ಲಿ ಅಪೌಷ್ಟಿಕ ಮಕ್ಕಳ ಪುನಶ್ಚೇತನ ಕೇಂದ್ರವನ್ನು ಪುನರಾರಂಭಗೊಳಿಸುತ್ತಿದೆ ಎಂದು ಅವರು ಹೇಳಿದ್ದಾರೆ.