ಮುಂಡಗೋಡ : ಮುಂಡಗೋಡನ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ನೀಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯರಿಗೆ ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕರಾದ ಚಿದಾನಂದ ಹರಿಜನ ಮನವಿಯೊಂದನ್ನು ಅರ್ಪಿಸಿದ್ದಾರೆ.
ಕೆಲವು ಫೈನಾನ್ಸ್ ನವರು ಮುಂಡಗೋಡ ತಾಲೂಕು ಮತ್ತು ನಗರದಲ್ಲಿ ಸಾಲ ವಸೂಲಾತಿಯಿಂದ ಮಹಿಳೆಯರಿಗೆ ತೊಂದರೆಯಾಗುತ್ತಿದೆ.ಮುಂಡಗೋಡ ತಾಲೂಕು ಮತ್ತು ನಗರದಲ್ಲಿ ಮೀಟರ ಬಡ್ಡಿ ವ್ಯವಹಾರದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬರಗಾಲದಿಂದ ಬೆಳೆ ಹಾನಿಗೆ ಇದುವರೆಗೂ ಪರಿಹಾರ ನೀಡಿಲ್ಲ. ಆದ್ದರಿಂದ ಕೂಡಲೇ ಪರಿಹಾರವನ್ನು ನೀಡಬೇಕು ಮತ್ತು ರೈತರ ಎಲ್ಲಾ ರೀತಿಯ ಸಾಲವನ್ನು ಮನ್ನಾ ಮಾಡಬೇಕು. ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಅರಣ್ಯ ಅತಿಕ್ರಮಣದಾರರಿಗೆ ಕೂಡಲೇ ಕಂದಾಯ ಇಲಾಖೆಯಿಂದ ಹಕ್ಕು ಪತ್ರ ಉತಾರ ನೀಡಲು ಕ್ರಮ ಕೈಗೊಳ್ಳಬೇಕು. ಈ ಹಿಂದೆ ಕಂದಾಯ ಇಲಾಖೆಯಿಂದ ನೀಡಿದ ಉತಾರದಲ್ಲಿ ಹಕ್ಕು ಫಾರೆಸ್ಟ್ ಅಂತ ಇದ್ದು ಇದನ್ನು ತೆಗೆದು ಹಾಕಬೇಕು. ಈ ಎಲ್ಲಾ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರದಲ್ಲಿ ವಿನಂತಿಸಿಕೊಳ್ಳಲಾಗಿದೆ.