ಮಾಜಿ ಶಾಸಕ ವಿ.ಎಸ್.ಪಾಟೀಲರಿದ್ದ ಕಾರು ಅಪಘಾತ

Spread the love

ಮುಂಡಗೋಡ : ಮಾಜಿ ಶಾಸಕ ವಿ.ಎಸ್. ಪಾಟೀಲ್ ಇದ್ದ ಕಾರು ಅಪಘಾತಕ್ಕೀಡಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹಾರುವಳ್ಳಿ‌‌ ಗ್ರಾಮದ ಬಳಿ ಅಪಘಾತ ನಡೆದಿದೆ.
ಬನವಾಸಿಯಿಂದ ಪಾಳಾ- ರಾಮಾಪುರ ಮಾರ್ಗವಾಗಿ ತಮ್ಮ ಗ್ರಾಮ ಅಂದಲಗಿಗೆ ತೆರಳುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆದರೆ ಡಿಕ್ಕಿ ರಭಸಕ್ಕೆ ಚಾಲಕ ಆನಂದ ಆಲೂರನಿಗೆ ಕಣ್ಣಿಗೆ ಹಾಗೂ ವಿ.ಎಸ್. ಪಾಟೀಲರ ಎದೆಗೆ ಪೆಟ್ಟಾಗಿದೆ. ಗಾಯಗೊಂಡಿದ್ದ ಇಬ್ಬರನ್ನು ಸ್ಥಳೀಯ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.