Headlines

ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ಸೂಕ್ತ ಭದ್ರತೆ ; ಸಚಿವ ರಾಮಲಿಂಗಾ ರೆಡ್ಡಿ

Spread the love

ದಾವಣಗೆರೆ : ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲೂ ಸೂಕ್ತ ಭದ್ರತೆ ವಹಿಸುತ್ತೇವೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ದೇವಸ್ಥಾನಗಳಿಗೆ ಬೆದರಿಕೆ ಇ ಮೇಲೆ ಕಳಿಸುತ್ತಾರೆ, ಪೊಲೀಸರು ಎಚ್ಚರಿಕೆ ವಹಿಸುತ್ತಾರೆ . ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲೂ ಸೂಕ್ತ ಭದ್ರತೆ ವಹಿಸುತ್ತೇವೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಬಿಜೆಪಿ ಅವಧಿಯಲ್ಲಿ ಬಾಂಬ್ ಬ್ಲಾಸ್ಟ್ ಆಗಿಲ್ವಾ..? 6 ಕಡೆ ಆಗಿದೆಪ್ರಪಂಚದಲ್ಲಿ ಅಂದಿನಿಂದಲೂ ಇಂದಿನವರೆಗೂ ಇಂತಹ ಘಟನೆಗಳು ನಡೆಯುತ್ತಿದೆ, ಹಲವು ಕಡೆ ಬೆದರಿಕೆ ಕರೆ-ಇಮೇಲ್ ಬರುತ್ತಿದೆ ಎಂದರು.

ಬೆಳಗಾವಿ ಜಿಲ್ಲೆಯಲ್ಲಿರುವ ನಿಪ್ಪಾಣಿ ರಾಮಮಂದಿರವನ್ನು ಸ್ಪೋಟಿಸುವುದಾಗಿ ಬೆದರಿಕೆ ಪತ್ರ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿರುವ ನಿಪ್ಪಾಣಿ ರಾಮಮಂದಿರಕ್ಕೆ ಬೆದರಿಕೆ ಪತ್ರ ಬಂದಿದ್ದು, ಅಲ್ಲಾಹು ಅಕ್ಬರ್ ಹೆಸರಿನಲ್ಲಿ ಬೆದರಿಕೆಯೊಡ್ಡಲಾಗಿದೆ. ರಾಮಮಂದಿರವನ್ನು ಸ್ಪೋಟಿಸುವುದಾಗಿ ಬೆದರಿಕೆಯೊಡ್ಡಲಾಗಿದೆ.