Headlines

ಕಾರವಾರಕ್ಕೆ ನಾಳೆ ಸಿಎಂ ಬೊಮ್ಮಾಯಿ

Spread the love

ಬೆಂಗಳೂರು : ಉತ್ತರಕನ್ನಡ ಜಿಲ್ಲೆಯಲ್ಲಿ ಉಂಟಾಗಿದ್ದ ಪ್ರವಾಹ ಪೀಡಿತ ಪ್ರದೇಶವನ್ನು ವೀಕ್ಷಣೆ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಅವರು ನಾಳೆ ಕಾರವಾರಕ್ಕೆ ಆಗಮಿಸಲಿದ್ದಾರೆ.

ನೆರೆಯಿಂದಾಗಿ ಹಾನಿಯಾಗಿರುವ ಶಿರೂರು, ಕದ್ರಾ, ಕಳಚೆ ಸೇರಿದಂತೆ ನೆರೆ ಪೀಡಿತ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.