ಬೆಂಗಳೂರು: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಇಂದು ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ನಡೆಸಲಾಗುವುದು ಎಂದು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಹರೀಶ್ ಅವರು ತಿಳಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ಬಿಜೆಪಿಯ 3 ಜಿಲ್ಲೆಗಳೂ ಸೇರಿ ಈ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದೇವೆ ಎಂದು ವಿವರಿಸಿದರು. ಜಾಥಾದ ಬಳಿಕ ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.