ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಮಧು ಬಂಗಾರಪ್ಪ

Spread the love

ಹುಬ್ಬಳ್ಳಿ : ಮಾಜಿ ಶಾಸಕ ಮಧು ಬಂಗಾರಪ್ಪ ಜೆಡಿಎಸ್​ ತೊರೆದು ಇಂದು ಅಧಿಕೃತವಾಗಿ ಕಾಂಗ್ರೆಸ್​​ ಸೇರ್ಪಡೆಯಾಗಿದ್ದಾರೆ.

ಹುಬ್ಬಳ್ಳಿಯ ಗೋಕುಲ್ ಗಾರ್ಡನ್​​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್​ ಹಿರಿಯ ಮುಖಂಡರು ಪಕ್ಷದ ಬಾವುಟ ನೀಡುವ ಮೂಲಕ ಮಧು ಬಂಗಾರಪ್ಪ ಅವರನ್ನು ಸ್ವಾಗತಿಸಿಕೊಂಡರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್​ ನಾಯಕರು ಉಪಸ್ಥಿತರಿದ್ದರು.

ಇನ್ನು ಮಧು ಬಂಗಾರಪ್ಪ ಅವರ ಜೊತೆ ಹಲವು ಜೆಡಿಎಸ್​ ಕಾರ್ಯಕರ್ತರು ಕೂಡ ಕಾಂಗ್ರೆಸ್​ ಸೇರಿದ್ದಾರೆ.