ರಾಗಿಹೊಸಳ್ಳಿ ಬಳಿ ಗುಡ್ಡ ಕುಸಿತ ಸಂಚಾರ ಬಂದ್ : ಪರ್ಯಾಯ ಮಾರ್ಗದ ಮೂಲಕ ಸಂಚಾರ…..

Spread the love

ಶಿರಸಿ : ದಿ.15ರಂದು ಸುರಿದ ಭಾರೀ ಮಳೆಯಿಂದ ಶಿರಸಿ- ಕುಮಟಾ ರಾಷ್ಟ್ರೀಯ ಹೆದ್ದಾರಿಯ ದೇವಿಮನೆ ಮತ್ತು ರಾಗಿಹೊಸಳ್ಳಿ ಮಧ್ಯೆ ಭೂಕುಸಿತವಾಗಿದೆ. ಇದರಿಂದಾಗಿ ಸಂಚಾರ ವ್ಯವಸ್ಥೆ ಸಂಪೂರ್ಣ ಬಂದ್ ಆಗಿದೆ.

ರಸ್ತೆಯ ಮೇಲೆ ಬಿದ್ದಿರುವ ಮಣ್ಣು ಹಾಗೂ ಮರಗಿಡಗಳನ್ನು ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದ್ದು, ನಾಳೆಯವರೆಗೂ ಸಹ ಕಾರ್ಯಾಚರಣೆಯನ್ನು ಮುಂದುವರಿಸಬೇಕಾಗಿರುತ್ತದೆ. ಕಾರಣ ಸಾರ್ವಜನಿಕರು,

  1. ಶಿರಸಿ-ಯಲ್ಲಾಪುರ ಮಾರ್ಗವಾಗಿ ಕುಮಟಾ- ಅಂಕೋಲಾ-ಕಾರವಾರಕ್ಕೆ ಸಂಚರಿಸಬೇಕು.
  2. ಶಿರಸಿ-ಶಿವಳ್ಳಿ-ಹೆಗಡೆಕಟ್ಟಾ-ಯಾಣ ಮಾರ್ಗವಾಗಿ ಕುಮಟಾ-ಅಂಕೋಲಾ-ಕಾರವಾರಕ್ಕೆ ಸಂಚರಿಸಬೇಕು.
  3. ಶಿರಸಿಯಿಂದ ಸಿದ್ದಾಪುರ ಮಾರ್ಗವಾಗಿ ಕುಮಟಾ ಬಡಾಳ ಮಾರ್ಗವಾಗಿ ಸಂಚರಿಸುವಂತೆ ಶಿರಸಿ ಉಪವಿಭಾಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.