ನಿರಂತರ ಮಳೆಯಿಂದಾಗಿ ಯಲ್ಲಾಪುರ ರಸ್ತೆಯ ಮೇಲೆ ನೀರು : ಪರದಾಡುತ್ತಿರುವ ಜನರು, ವಾಹನ ಸವಾರರು..!

Spread the love

ಮುಂಡಗೋಡ : ನಿರಂತರ ಮಳೆ ಹಿನ್ನೆಲೆಯಲ್ಲಿ ಮುಂಡಗೋಡ ಪಟ್ಟಣದ ಹೊರವಲಯದಲ್ಲಿರುವ ಅಮ್ಮಾಜಿ ಕೆರೆ ತುಂಬಿ ಹೆಚ್ಚುವರಿ ನೀರು ಯಲ್ಲಾಪುರ ರಸ್ತೆಯಲ್ಲಿ ಹರಿಯುತ್ತಿದೆ. ಯಲ್ಲಾಪುರ ರಸ್ತೆಯ ಮೇಲೆ ನೀರು ಹರಿಯುತ್ತಿರುವ ಕಾರಣ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಗಿದೆ. 

ಪ್ರತಿ ವರ್ಷ ಮಳೆ ಹೆಚ್ಚಾದಾಗಲೆಲ್ಲ ಇದೇ ರೀತಿಯ ನೀರು ಈ ರಸ್ತೆಯ ಮೇಲೆ ಹರಿಯುವುದು ಸಾಮಾನ್ಯವಾಗಿದೆ. ಆದರೆ ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಶಾಶ್ವತ ಪರಿಹಾರ ಕ್ರಮ ಕೈಗೊಳ್ಳದಿರುವುದು ನಿಜಕ್ಕೂ ದುರ್ದೈವದ ಸಂಗತಿಯಾಗಿದೆ. ಜನಪ್ರತಿನಿಧಿಗಳು ಇದೇ ರಸ್ತೆಯಲ್ಲಿ ಓಡಾಡಿದರೂ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಜನರು, ವಾಹನ ಸವಾರರು ಹಿಡಿ ಶಾಪ ಹಾಕುತ್ತಿದ್ದಾರೆ.

ಕಿರು ಸೇತುವೆ ಮೇಲೆ ನೀರು :
ಯಲ್ಲಾಪುರ ರಸ್ತೆಯಿಂದ ತೇಗಿನಕೊಪ್ಪಕ್ಕೆ ಹೋಗುವ ಮಾರ್ಗದಲ್ಲಿರುವ ಕಿರು ಸೇತುವೆ ಮೇಲೆ ಕೂಡ ನೀರು ಹರಿದು ಹೋಗುತ್ತಿದೆ. ಇದರಿಂದಾಗಿ ಸಾರ್ವಜನಿಕರು, ವಾಹನ ಸವಾರಿಗೆ ತೀವ್ರ ತೊಂದರೆ ಉಂಟಾಗಿದೆ. ವಾಹನ ಸವಾರರು ಇಲ್ಲಿ ಸ್ವಲ್ಪ ಎಚ್ಚರತಪ್ಪಿದರೂ ಅಪಾಯ ಕಟ್ಟಿಟ್ಟಬುತ್ತಿ..!