ಸಿಲಿಂಡರ್ ಸ್ಪೋಟಗೊಂಡು ಘೋರ ದುರಂತ : ಬೆಳಗಾವಿಯಲ್ಲಿ ಓರ್ವ ಸಾವು, ಇಬ್ಬರು ಮಕ್ಳಳು ಸೇರಿ ಮೂವರಿಗೆ ಗಾಯ!

Spread the love

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಸಿಲಿಂಡರ್ ಸ್ಪೋಟಗೊಂಡು ಒರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಸೇರಿ ಮೂವರು ಗಾಯಗೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾದಲ್ಲಿ ಈ ಘಟನೆ  ನಡೆದಿದ್ದು, ಅವಘಡದಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದರೆ. ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್ ಸ್ಪೊಟದಿಂದಾಗಿ ಗೋಡೆ ಕುಸಿದು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.

ದುರಂತದಲ್ಲಿ ಮಹಾರಾಷ್ಟ್ರದ ಬಿಡ್ ಮೂಲದ ಸೂರ್ಯಕಾಂತ ಸೆಳಕೆ (55) ಮೃತಪಟ್ಟಿದ್ದಾರೆ. ಗಾಯಾಳು ಜ್ಞಾನೋದಯನಿಗೆ ಚಿಕ್ಕೋಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಸದಲಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.