‘ನನ್ನ ಜೊತೆಗಿದ್ದ ಹುಡುಗರಿಂದ ನಾನು ಹಾಳಾದೆ’: ಪೊಲೀಸರ ಮುಂದೆ ನಟ ದರ್ಶನ್‌ ಪಶ್ಚಾತಾಪ

Spread the love

ಬೆಂಗಳೂರು: ನನ್ನ ಜೊತೆಗಿದ್ದ ಹುಡುಗರಿಂದ ನಾನು ಹಾಳಾದೆ ಅಂಥ ತನಿಖೆ ವೇಳೆ ಪೊಲೀಸರ ಮುಂದೆ ನಟ ದರ್ಶನ್‌ ಪಶ್ಚಾತಾಪದ ಮಾತುಗಳನ್ನು ಹೇಳಿದ್ದಾರೆ ಎನ್ನಲಾಗಿದೆ.

ಸದ್ಯ ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್‌ ಪರಪ್ಪನ ಅಗ್ರಹಾರದಲ್ಲಿರುವ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ. ಇತ್ತ ನಟ ದರ್ಶನ್‌ ಪ್ರೇಯಸಿ ಕೂಡ ಈಗ ಉಲ್ಟಾ ಹೊಡೆಯುತ್ತಿದ್ದಾಳೆ ಎನ್ನಲಾಗಿದ್ದು, ಕೋರ್ಟಿನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವುದು ಈಗ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ದರ್ಶನ್‌ ಗೆಳತಿ ಪವಿತ್ರಗೌಡಳಿಂದಲೇ ಪ್ರಕರಣ ಈ ಹಂತಕ್ಕೆ ಬಂದು ನಿಂತಿದೆ ಅಂತ ಜನತೆ ಮಾತನಾಡಿಕೊಳ್ಳುತ್ತಿದ್ದು, ಆಕೆಯಿಂದಲೇ ಇಂದು ನಟ ದರ್ಶನ್‌ ಜೀವನ ಹಾಳಾಗಿದೆ ಎನ್ನಲಾಗಿದೆ. ಈ ನಡುವೆ ಬೆಂಗಳೂರಿನ ಪಟ್ಟಣಗೆರೆ ಶೆಡ್, ದರ್ಶನ್, ಪವಿತ್ರಾ ಮನೆ, ಸ್ಟೂನಿ ಬ್ರೂಕ್ ಹೋಟೆಲ್, ಮೈಸೂರಿನ ಹೋಟೆಲ್, ಚಿತ್ರದುರ್ಗದಲ್ಲಿ ರೇಣುಕಾ ಸ್ವಾಮಿ ಮನೆ, ಆರೋಪಿಗಳ ಮನೆ ಇನ್ನಿತರೆ ಕಡೆಗಳಲ್ಲಿ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಆರೋಪ ಪಟ್ಟಿಯನ್ನು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ.