Headlines

ರೇಣುಕಾಸ್ವಾಮಿ ಹತ್ಯೆ ಕೇಸ್ : ಕೋರ್ಟ್ ಗೆ ದರ್ಶನ್ & ಗ್ಯಾಂಗ್ ವಿರುದ್ಧ4,500 ಪುಟಗಳ `ಚಾರ್ಜ್ ಶೀಟ್’ ಸಲ್ಲಿಕೆ!

Spread the love

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ ಇದೀಗ ಪೊಲೀಸರು 4500 ಪುಟಗಳಷ್ಟು ಚಾರ್ಜ್‌ಶೀಟ್ ಕೋರ್ಟ್ ಗೆ ಪೊಲೀಸರು ಸಲ್ಲಿಸಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೆ ಸೆಪ್ಟೆಂಬರ್ 9 ಕ್ಕೆ 3 ತಿಂಗಳು ತುಂಬಲಿವೆ. ಈಗಾಗಲೇ 4500 ಪುಟಗಳ ಚಾರ್ಜ್‌ಶೀಟ್ ಮುಕ್ತಾಯಗೊಂಡಿದ್ದು, ಎಸಿಪಿ ಕಚೇರಿಯಿಂದ ದೊಡ್ಡ ಬಾಕ್ಸ್ ಗಳಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ಪ್ರಕರಣ ದಾಖಲಾದ ಬಳಿಕ 90 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವುದು ನಿಯಮ. ಹಾಗಾಗಿ ಸೆಪ್ಟೆಂಬರ್ 9ಕ್ಕೆ 3 ತಿಂಗಳು ಅಂದರೆ ಸಂಪೂರ್ಣವಾಗಿ 90 ದಿನಗಳು ಮುಗಿಯಲಿವೆ. ಹಾಗಾಗಿ 200 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ. ಈಗಾಗಲೇ ಕಾನೂನು ತಜ್ಞರಿಂದ ಪೊಲೀಸ್ ಇಲಾಖೆ ಸಲಹೆಯನ್ನೂ ಪಡೆದಿದೆ. ಎರಡ್ಮೂರು ಬಾರಿ ಪರಿಶೀಲನೆಯನ್ನೂ ಮಾಡಲಾಗಿದೆ. ಅಪರಾಧಿಗಳು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಬಾರದು ಎಂದು ಖಾಕಿ ಪಡೆ ಭಾರೀ ಎಚ್ಚರಿಕೆ ವಹಿಸಿದೆ.