ಮುಂಡಗೋಡ : ಶಾಸಕ ಶಿವರಾಮ ಹೆಬ್ಬಾರ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಮುಂಡಗೋಡನಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸಿದ್ದಪ್ಪ ಹಡಪದ, ತಾಲೂಕಾ ಯುವ ಮೋರ್ಚಾ ಅಧ್ಯಕ್ಷ ಗಣೇಶ ಶಿರಾಲಿ, ಭರತರಾಜ ಹದಳಗಿ, ಪ್ರಶಾಂತ ಲಮಾಣಿ, ರಾಮಣ್ಣ ಲಮಾಣಿ, ಯಲ್ಲಪ್ಪ ಮಜ್ಜಿಗೇರಿ, ಅಶೋಕ ಹಸರಂಬಿ ಮುಂತಾದವರಿದ್ದರು.