Headlines

ರಾಜ್ಯ ಗ್ಯಾರಂಟಿ ಯೋಜನೆಗಳ ಮುಂಡಗೋಡ ತಾಲೂಕಾ ಸಮಿತಿ ಕಚೇರಿ ಉದ್ಘಾಟನೆ

Spread the love

ಮುಂಡಗೋಡ : ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ತಾಲೂಕಾ ಸಮಿತಿಯ ಮುಂಡಗೋಡ ಕಚೇರಿಯನ್ನು ಮೀನುಗಾರಿಕೆ ಮತ್ತು ಬಂದರು ಒಳನಾಡು ಜಲಸಾರಿಗೆ ಸಚಿವರೂ, ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳು ವೈದ್ಯ ಇಂದು ಉದ್ಘಾಟಿಸಿದರು.

ಶಾಸಕರಾದ ಶಿವರಾಮ ಹೆಬ್ಬಾರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕರಾದ ವಿ.ಎಸ್.ಪಾಟೀಲ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಉತ್ತರಕನ್ನಡದ ಜಿಲ್ಲಾ ಅಧ್ಯಕ್ಷರಾದ ಸತೀಶ ನಾಯ್ಕ, ತಾಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ಹಿರೇಮಠ, ತಹಶೀಲದಾರ ಶಂಕರ ಗೌಡಿ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಟಿ.ವೈ.ದಾಸನಕೊಪ್ಪ, ಅಧಿಕಾರಿಗಳು, ಮುಖಂಡರು, ಜನಪ್ರತಿನಿಧಿಗಳು ಇದ್ದರು.