Headlines

ಕಲಬರುಗಿಯಲ್ಲಿ ಸೆ. 17 ರಂದು `ರಾಜ್ಯ ಸಚಿವ ಸಂಪುಟ’ ನಿಗದಿ : ರಾಜ್ಯ ಸರ್ಕಾರದಿಂದ ಸೂಚನಾ ಪತ್ರ

Spread the love

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಹಾಗೂ ಕೈಗೊಳ್ಳಬೇಕಿರುವ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ‌ ಸಚಿವ ಸಂಪುಟ ಸಭೆಯನ್ನು ಕಲಬುರಗಿ ಯಲ್ಲಿ ನಡೆಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಈ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಉದ್ದೇಶದಿಂದ ಸಿಎಂ ಅವರಿಗೆ ಕಲಬುರಗಿ ಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಹಾಗೂ ಸಚಿವರು ಸಭೆ ನಡೆಸಲು ಒಪ್ಪಿಗೆ ಸೂಚಿಸಿದೆ ಎಂದು‌ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದರು. ಇದೀಗ ಸೆಪ್ಟೆಂಬರ್ 17 ರ ಸಂಜೆ 4 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.

ಈ ಕುರಿತು ರಾಜ್ಯ ಸರ್ಕಾರವು ಸೂಚನಾ ಪತ್ರ ಹೊರಡಿಸಿದ್ದು, ದಿನಾಂಕ 17-09-2024 ರ ಮಂಗಳವಾರ ಸಂಜೆ 4 ಗಂಟೆಗೆ 2024 ನೇ ಸಾಲಿನ 19 ನೇ ಸಚಿವ ಸಂಪುಟ ಸಭೆಯನ್ನು ಕಲಬುರಗಿಯ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣ, ಮಿನಿ ವಿಧಾನಸೌಧದಲ್ಲಿ ಕರೆಯಲಾಗಿದೆ.