ಮಂಡ್ಯ : ಮುಡಾ ಹಗರಣದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಆಗಿ ಸಂಕಷ್ಟ ಎದುರಾಗಿದ್ದು ಕಾನೂನಿನ ಮೂಲಕ ಅವರು ಹೋರಾಟ ನಡೆಸುತ್ತಿದ್ದಾರೆ ಇದರ ಮಧ್ಯ ವಿಪಕ್ಷ ನಾಯಕ ಆರ್ ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸಿ ಒಕ್ಕಲಿಗ ಸಮುದಾಯದವರನ್ನು ಸಿಎಂ ಮಾಡಿ ಎಂದು ಆಗ್ರಹಿಸಿದ್ದಾರೆ.
ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಚ್ ಡಿ ದೇವೇಗೌಡ ಕುಟುಂಬ ಮುಗಿಸಲು ಕಾಂಗ್ರೆಸ್ಸಿಗರು ಹೊರಟಿದ್ದರು. ಆಗ ಯಾಕೆ ಕಾಂಗ್ರೆಸ್ ವಿರುದ್ಧ ಒಕ್ಕಲಿಗರು ಹೋರಾಟ ಮಾಡಲಿಲ್ಲ? ಆಗ ಒಕ್ಕಲಿಗತನ ಯಾಕೆ ಪ್ರದರ್ಶನ ಮಾಡಲಿಲ್ಲ? ಎಂದು ಪ್ರಶ್ನಿಸಿದರು.ಹಾಗಾಗಿ ಸಿದ್ದರಾಮಯ್ಯರನ್ನು ಬದಲಾಯಿಸಿ ಒಕ್ಕಲಿಗರನ್ನು ಸಿಎಂ ಮಾಡಿ ಎಂದು ಆಗ್ರಹಿಸಿದರು.