ಒಳ್ಳೆಯ ಕೆಲಸ ಮಾಡಿದ್ದಾರೆ BSY : ಸಿದ್ಧರಾಮಯ್ಯ ಶ್ಲಾಘನೆ

Spread the love

ಬೆಂಗಳೂರು : ಸಚಿವ ಸಂಪುಟ ದರ್ಜೆ ಸೌಲಭ್ಯವನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಾಪಸ್ ನೀಡಿದ್ದಾರೆ. ಯಡಿಯೂರಪ್ಪ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ನಾನೇ ಯಡಿಯೂರಪ್ಪನವರಿಗೆ ಹೇಳೋಣ ಅಂದುಕೊಂಡಿದ್ದೆ. ನಾನು ಹೇಳುವ ಮೊದಲೇ ಯಡಿಯೂರಪ್ಪ ವಾಪಸ್ ಮಾಡಿದ್ದಾರೆ. ಅದು ಒಳ್ಳೆಯ ನಿರ್ಧಾರವಾಗಿದೆ. ಸಂಪುಟ ದರ್ಜೆ ಸ್ಥಾನಮಾನವನ್ನೊಪ್ಪದೇ ಯಡಿಯೂರಪ್ಪ ಒಳ್ಳೆಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಮೂಲಕ ಯಡಿಯೂರಪ್ಪ ಸಂಪುಟ ದರ್ಜೆ ಸ್ಥಾನವನ್ನು ನಿರಾಕರಿಸಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರು ಒಳ್ಳೆಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಯಡಿಯೂರಪ್ಪ ನಿರ್ಧಾರವನ್ನು ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.