ಭಾರತ್ ಬಂದ್ ಮಾಡಿದ್ದು ರೈತರಲ್ಲ, ಮಧ್ಯವರ್ತಿಗಳು : ಸಚಿವ ನಾರಾಯಣಗೌಡ

Spread the love

ಬೆಂಗಳೂರು : ಭಾರತ್ ಬಂದ್ ನಡೆಸುತ್ತಿರುವುದು ರೈತರಲ್ಲ, ರೈತರ ಹೆಸರಿನಲ್ಲಿ ಮಧ್ಯವರ್ತಿಗಳು ಬಂದ್‍ಗೆ ಮುಂದಾಗಿದ್ದಾರೆ ಎಂದು ಕ್ರೀಡಾ ಹಾಗು ರೇಷ್ಮೆ ಸಚಿವ ನಾರಾಯಣಗೌಡ ತಿಳಿಸಿದರು.

ಶಿವಮೊಗ್ಗದ ಕಾಚಿನಕಟ್ಟೆಯಲ್ಲಿ ರೇಷ್ಮೆ ಬೆಳೆಗಾರರ ಜೊತೆ ಸಂವಾದ ನಡೆಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು. ಭಾರತ್ ಬಂದ್ ನಡೆಸುತ್ತಿರುವುದು ರೈತರಲ್ಲ, ರೈತರ ಹೆಸರಿನಲ್ಲಿ ಮಧ್ಯವರ್ತಿಗಳು ಬಂದ್‍ಗೆ ಮುಂದಾಗಿದ್ದಾರೆಹೊಸ ಕೃಷಿ ಕಾಯ್ದೆ, ಎಪಿಎಂಸಿ ಕಾಯ್ದೆಯಿಂದ ರೈತರಿಗೆ ಅನುಕೂಲವೇ ಹೊರತು, ನಷ್ಟವಿಲ್ಲ ಎಂದರು.

ಈ ನೂತನ ಎಪಿಎಂಸಿ ಕಾಯ್ದೆಯಿಂದ ಎಪಿಎಂಸಿ ಮಾರುಕಟ್ಟೆಯಲ್ಲಿ ಸುಧಾರಣೆ ಆಗಿದೆ. ಎಪಿಎಂಸಿ ಕಾಯ್ದೆಯಿಂದ ಮಧ್ಯವರ್ತಿಗಳಿಗೆ ತೊಂದರೆ ಆಗುತ್ತಿದ್ದು, ಆದರೆ ರೈತರಿಗೆ ಲಾಭವಾಗುತ್ತಿದೆ. ಈ ಮೊದಲು ರೈತರು ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಯಲ್ಲಿ ಮಾತ್ರ ಮಾರಾಟ ಮಾಡಬೇಕಿತ್ತು. ಆದರೆ ಈ ಹೊಸ ಕಾಯ್ದೆಯಿಂದ ರೈತರು ತಾವು ಬೆಳೆದ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದಾಗಿದೆ ಎಂದು ಹೇಳಿದರು.