ಗಾಂಧಿ ಜಯಂತಿ ಅಂಗವಾಗಿ ಅವಧೂತ ಶ್ರೀ ವಿನಯ್ ಗುರೂಜಿ ನೇತೃತ್ವದಲ್ಲಿ ಪರಿಸರ ಕಾಳಜಿ ಕಾರ್ಯಕ್ರಮ

Spread the love

ಬೆಂಗಳೂರು : ನಾಳೆ ಮಹಾತ್ಮ ಗಾಂಧಿ ಜಯಂತಿ (Gandhi Jayanti) ಅಂಗವಾಗಿ ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗುತ್ತಿದೆ. ಅಂತೆಯೇ ಅವಧೂತ ಶ್ರೀ ವಿನಯ್ ಗುರೂಜಿ (Avadhootha Sri Vinay Guruji)ಅವರ ನೇತೃತ್ವದಲ್ಲಿ ಪರಿಸರ ಕಾಳಜಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅವಧೂತ ಶ್ರೀ ವಿನಯ್ ಗುರೂಜಿ ಅವರ ಸಾರಥ್ಯದಲ್ಲಿ ಶನಿವಾರದಂದು ಸಾರ್ವಜನಿಕರಲ್ಲಿ ಪರಿಸರ ಕಾಳಜಿಯನ್ನು ಮೂಡಿಸುವ ಕಾರ್ಯಕ್ರಮ(Environmental Concerns Program)ಗಳನ್ನು ನಗರದ ವಿವಿಧೆಡೆ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ ಜರುಗಲಿರುವ ಎರಡು ಕಾರ್ಯಕ್ರಮಗಲ್ಲಿ ಗುರೂಜಿ ಭಾಗವಹಿಸಲಿದ್ದಾರೆ

ಕ್ಲೀನಥಾನ್ ಜಾಥ
ಮಹಾತ್ಮಾ ಗಾಂಧಿ ಸೇವಾ ಟ್ರಸ್ಟ್ ಮತ್ತು ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ ಸಂಘದ ಆಶ್ರಯದಲ್ಲಿ, ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಕ್ಯಾಂಪಸ್ ನಲ್ಲಿರುವ ಬಯೋಪಾರ್ಕ್ ನಲ್ಲಿ ಸ್ವಚ್ಛತಾ ಕಾರ್ಯಕ್ರಮ ಮತ್ತು ಕ್ಲೀನಥಾನ್ ಜಾಥವನ್ನು ಬೆಳಗ್ಗೆ 6 ಗಂಟೆಗೆ ಆಯೋಜಿಸಲಾಗಿದೆ.

ಸ್ಮಶಾನ ಸ್ವಚ್ಛತಾ ಕಾರ್ಯ
ಉತ್ತರಹಳ್ಳಿ ಸ್ಮಶಾನದಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸಸಿ ನೆಡುವುದು. ಉತ್ತರಹಳ್ಳಿ ವಾರ್ಡ್ ನ ಭಾರತ್ ಹೌಸಿಂಗ್ ಕೊ ಅಪರೇಟಿವ್ ಸೊಸೈಟಿ, ಪಾದುಕಾ ಮಂದಿರದ ಹತ್ತಿರ ಗಿಡ ನೆಡುವ ಕಾರ್ಯಕ್ರಮ ಬೆಳಗ್ಗೆ 8 ಗಂಟೆಗೆ ಗುರೂಜಿ ಅವರ ನೇತೃತ್ವದಲ್ಲಿ ನಡೆಯಲಿದೆ.

ಇದನ್ನು : ಲಸಿಕೆ ಪಡೆದ 15 ಸಾವಿರ ಮಂದಿಯಲ್ಲಿ ಕೊರೋನಾ ಸೋಂಕು ದೃಢ

ಈ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ಕಾರ್ಯದರ್ಶಿಗಳು, ಗುರೂಜಿ ಅನುಯಾಯಿಗಳು, ಯುನಿವರ್ಸಿಟಿ ವಿದ್ಯಾರ್ಥಿಗಳು, ಸ್ಥಳೀಯ ರಾಜಕೀಯ ಮುಖಂಡರುಗಳು ಹಾಗೂ ಪರಿಸರ ಪ್ರೇಮಿಗಳು ಸೇರಿದಂತೆ ನೂರಾರು ಜನ ಭಾಗಿಯಾಗಲಿದ್ದಾರೆ.

ಇದನ್ನು : ಈ ರೀತಿಯ 8 ಕನಸುಗಳು ಬೀಳುತ್ತಿವೆಯಾ? ಹಾಗಾದ್ರೆ ನಿರ್ಲಕ್ಷ್ಯ ಮಾಡಬೇಡಿ

ವಿವಿಧ ಕಾರ್ಯಕ್ರಮ ಆಯೋಜನೆ

ಇದರ ಜತೆ ಬೆಂಗಳೂರು ನಗರ (Bengaluru) ಸೇರಿದಂತೆ ರಾಜ್ಯಾದ್ಯಂತ ಅನೇಕ ಕಡೆಗಳಲ್ಲಿ ಗುರೂಜಿ ಅನುಯಾಯಿಗಳು ಮತ್ತು ಭಕ್ತರು ಸ್ವಚ್ಚತಾ ಕಾರ್ಯಕ್ರಮ, ಗಿಡ ನೆಡುವ ಕಾರ್ಯಕ್ರಮ, ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ (Health Camp) ಸೇರಿದಂತೆ ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಎಲ್ಲ ಕಾರ್ಯಕ್ರಮಗಳಲ್ಲಿಯೂ ಅವಧೂತ ಶ್ರೀ ವಿನಯ್ ಗುರೂಜಿ ಅವರು ವೈಯಕ್ತಿಕವಾಗಿ ಭಾಗವಹಿಸಲು ಸಾಧ್ಯವಿಲ್ಲದ ಕಾರಣ ಗುರುಗಳ ಆಶೀರ್ವಾದದಲ್ಲಿ ಕಾರ್ಯಕ್ರಮಗಳು ಜರುಗಲಿದೆ.

ಎಲ್ಲಿ ಕಾರ್ಯಕ್ರಮ

ಸಿಂಗಸಂದ್ರ ವಾರ್ಡ್ ನ ಕೆಂಪೇಗೌಡ ವೃತ್ತ (ಹೊಸರೋಡ್)ದ ಬಳಿ ಉಚಿತ ಕನ್ನಡ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಬೆಳಗ್ಗೆ 9.30ರಿಂದ ಮಧ್ಯಾಹ್ನ 1.30ರವರೆಗೆ ಕಾರ್ಯಕ್ರಮ ನಡೆಯಲಿದೆ.