ತಿಳಿಗೇಡಿ ಯುವಕನಿಂದ ಪಠ್ಯ ಪರಿಷ್ಕರಣೆ ರಾಜ್ಯಕ್ಕೆ ಮಾಡಿದ ಅವಮಾನ: ಸಿದ್ದರಾಮಯ್ಯ

Spread the love

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಸುತ್ತಿನ ಕೆಸರೆರಚಾಟಕ್ಕೆ ಕಾರಣವಾಗಿರೋ ಪಠ್ಯಪರಿಷ್ಕರಣೆಗೆ ಸಂಬಂಧಪಟ್ಟಂತೆ ಮಾಜಿ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್‌ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದಲ್ಲಿ ರಾಷ್ಟ್ರ – ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೌರವಕ್ಕೆ ಪಾತ್ರವಾಗಿರೋ ಚಿಂತಕರು, ಸಾಹಿತಿಗಳು, ಶಿಕ್ಷಣ ತಜ್ಞರು ಇರುವಾಗ ತಿಳಿಗೇಡಿ ಯುವಕನಿಂದ ಪಠ್ಯ ಪರಿಷ್ಕರಣೆ ಮಾಡಿಸಿರೋದು ರಾಜ್ಯದ ಜನತೆಗೆ ಮಾಡಿರೋ ಅವಮಾನ ಅಂತ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ವಿರುದ್ದ ಕಿಡಿಕಾರಿದ್ದಾರೆ.