ಶೀಘ್ರವೇ ಬಿಜೆಪಿ ಅವಧಿಯಲ್ಲಿ ಅಕ್ರಮ ನಿವೇಶನ ಹಂಚಿಕೊಂಡಿರುವ ಪಟ್ಟಿ ರಿಲೀಸ್: ಡಿ.ಕೆ.ಶಿವಕುಮಾರ್

ಬೆಂಗಳೂರು : “ಬಿಜೆಪಿ ಕಾಲದಲ್ಲಿ ಅಕ್ರಮವಾಗಿ ಮುಡಾ ಸೈಟು ಹಂಚಿಕೆ ಮಾಡಲಾಗಿದ್ದು, ಈ ನಿವೇಶನಗಳನ್ನು ಬಿಜೆಪಿಯವರೇ ಹಂಚಿಕೆ ಮಾಡಿಕೊಂಡಿದ್ದಾರೆ. ಶೀಘ್ರದಲ್ಲೇ ಆ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು “ಎರಡು ವರ್ಷಗಳ ಹಿಂದೆಯೇ ಬಿಜೆಪಿ ಆಡಳಿತಾವಧಿಯಲ್ಲಿ ಮುಡಾ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬಿಜೆಪಿಯವರು ಸದನ ಪ್ರಾರಂಭದ ದಿನವೇ ಈ ವಿಚಾರ ಪ್ರಸ್ತಾಪ ಮಾಡಬಹುದಿತ್ತಲ್ಲವೇ? ಅವರ ಹಗರಣಗಳು ಈಗ ಹೊರಗೆ…

Read More

‘ನಟ ದರ್ಶನ್’ಗೆ ಜೈಲೂಟ ಫಿಕ್ಸ್: ‘ಮನೆ ಊಟ’ ಕೋರಿದ್ದ ರಿಟ್ ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವಂತ ನಟ ದರ್ಶನ್, ಜೈಲೂಟ ಬೇಡ. ಮನೆಯೂಟಕ್ಕೆ ಅವಕಾಶ ನೀಡುವಂತೆ ಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನಡೆಸಿದಂತ ಕೋರ್ಟ್, ಮನೆಯೂಟಕ್ಕೆ ನಿರಾಕರಿಸಿದೆ. ಅಲ್ಲದೇ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ನಟ ದರ್ಶನ್ ಗೆ ಜೈಲೂಟವೇ ಫಿಕ್ಸ್ ಆದಂತೆ ಆಗಿದೆ.  ನಟ ದರ್ಶನ್ ಅವರು ಮನೆಯೂಟ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಈ ಹಿಂದೆ ಕೋರ್ಟ್ ನಡೆಸಿತ್ತು. ಅಲ್ಲದೇ ತೀರ್ಪನ್ನು ಜುಲೈ.25ರ ಇಂದಿಗೆ ಕಾಯ್ದಿರಿಸಿತ್ತು….

Read More

ಶಿರೂರ ಗುಡ್ಡ ಕುಸಿತ : ಕಾರ್ಯಾಚರಣೆ ಆರಂಭಿಸಿದ ಹೈಟೆಕ್ ಡ್ರೋನ್…..

ಕಾರವಾರ : ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ಪ್ರದೇಶದಲ್ಲಿ ಡ್ರೋನ್ ಕಾರ್ಯಾಚರಣೆ ಆರಂಭವಾಗಿದೆ. ಅಡ್ವಾನ್ಸ್ಡ್ ಡ್ರೋನ್ ಬೆಸ್ಟ್ ಇಂಟೆಲಿಜೆಂಟ್ ಅಂಡರ್ ಗ್ರೌಂಡ್ಡ್ ಬರ್ಡ್ ಆಬ್ಜೆಕ್ಟ್ ಡಿಟೆಕ್ಟರ್ ಎಂಬ ಡ್ರೋನ್ ಕಾರ್ಯಾಚರಣೆ ನಡೆಸುತ್ತಿದೆ.  ಗುರುವಾರ ಮಧ್ಯಾಹ್ನ ಪ್ರಾರಂಭವಾದ ಡ್ರೋನ್ ಕಾರ್ಯಾಚರಣೆ ಬಹುತೇಕ ನಾಪತ್ತೆಯಾಗಿರುವ ಮೃತದೇಹವನ್ನು ಶೋಧ ಮಾಡುವ ಸಾಮರ್ಥ್ಯ ಹೊಂದಿದೆ.ನೌಕಾದಳ ಹಾಗೂ ಭಾರತೀಯ ಭೂಸೇನೆ ಜಂಟಿಯಾಗಿ ಕಾರ್ಯಾಚರಣೆಯಲ್ಲಿ ತೊಡಗಿದ್ದು,ದೆಹಲಿಯಿಂದ ರೈಲಿನ ಮೂಲಕ ಡ್ರೋನ್ ತರಿಸಿಕೊಂಡಿದ್ದು, ಇದು 2.4 ಕಿ.ಮೀ ಎತ್ತರದಲ್ಲಿ ಹಾರಾಡಬಲ್ಲ, ಮಣ್ಣಿನಲ್ಲಿ 20 ಮೀಟರ್ ಮತ್ತು ನೀರಿನಲ್ಲಿ…

Read More

ರಾಜ್ಯಸಭೆಯಲ್ಲಿ ಅಂಕೋಲಾ ಗುಡ್ಡ ಕುಸಿತ ಪ್ರಸ್ತಾಪಿಸಿದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ

ನವದೆಹಲಿ : ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ರಾಜ್ಯಸಭೆಯಲ್ಲಿ ಅಂಕೋಲಾ ಗುಡ್ಡ ಕುಸಿತದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ದುರಂತ ಸಂಭವಿಸಿ ಆರು ದಿನಗಳು ಕಳೆದರೂ ರಾಜ್ಯ ಸರ್ಕಾರದಿಂದ ಯಾರೊಬ್ಬರೂ ಭೇಟಿ ನೀಡಿರಲಿಲ್ಲ. ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ನೀಡಿದ ಬಳಿಕವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ದೂರಿದ್ದಾರೆ.  ಇದು ಕರ್ನಾಟಕ ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಎಂಬುದಕ್ಕೆ ನಿದರ್ಶನ ಎಂದರು. ಕರ್ನಾಟಕ ಸರ್ಕಾರ ರಾಜ್ಯದ ಪರಿಸ್ಥಿತಿ ಬಗ್ಗೆ ನಿರಾಸಕ್ತಿ ತೋರುತ್ತಿದೆ….

Read More

ಧರ್ಮ ಜಲಾಶಯದಲ್ಲಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಮುಂಡಗೋಡ : ತಾಲೂಕಿನ ಧರ್ಮಾ ಜಲಾಶಯದಲ್ಲಿ ನಿನ್ನೆ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಇಂದು ಪತ್ತೆಯಾಗಿದೆ.  ತಾಲೂಕಿನ ಮುಡಸಾಲಿ ಗ್ರಾಮದ ಶ್ರೀನಾಥ ಹರಿಜನ ಎಂಬಾತನೇ ಮೃತ ಯುವಕನಾಗಿದ್ದಾನೆ.ತಾಲೂಕಿನ ಮಳಗಿ ಬಳಿಯ ಧರ್ಮಾ ಜಲಾಶಯದಲ್ಲಿ ನಿನ್ನೆ ಮುಡಸಾಲಿಯ ಶ್ರೀನಾಥ ಹರಿಜನ ಎಂಬ ಯುವಕ  ನೀರಿನಲ್ಲಿ ಮುಳುಗಿ ನಾಪತ್ತೆಯಾದರೆ ಮತ್ತೊಬ್ಬನನ್ನು ರಕ್ಷಿಸಿದ ಘಟನೆ ನಡೆದಿತ್ತು.ನಾಪತ್ತೆಯಾದ  ಶ್ರೀನಾಥನಿಗಾಗಿ ತೀವ್ರ ಹುಡುಕಾಟ ನಿನ್ನೆ ನಡೆಸಲಾಗಿತ್ತು. ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಶ್ರೀನಾಥ ಎಂಬ ಯುವಕನ ಶೋಧಕಾಗಿ ಪಿಎಸ್ಐ ಪರಶುರಾಮ್ ಹಾಗೂ ಪೊಲೀಸರು ತೀವ್ರ…

Read More

ಮುಂಡಗೋಡ : ನಿರಂತರ ಮಳೆಯಿಂದ 34 ಶಾಲೆಗಳಿಗೆ ಹಾನಿ

ಮುಂಡಗೋಡ : ನಿರಂತರ ಮಳೆಯಿಂದಾಗಿ ಮುಂದಗೋಡ್ ತಾಲೂಕಿನ 34 ಶಾಲೆಗಳಿಗೆ ಹಾನಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಗಣಾಚಾರಿ ತಿಳಿಸಿದ್ದಾರೆ.  ತಾಲೂಕಿನ 34 ಶಾಲೆಗಳಲ್ಲಿ ಸೋರುವಿಕೆ, ಚಿಕ್ಕ ಪುಟ್ಟ ಬಿರುಕು ಉಂಟಾಗಿದೆ ಮತ್ತು ಕರವಳ್ಳಿ ಶಾಲೆಯಲ್ಲಿ ಚಿಕ್ಕ ಗೋಡೆ ಬಿದ್ದಿದೆ ಎಂದು ಅವರು ತಿಳಿಸಿದರು.  ತಾಲೂಕಿನ ಶಾಲಾ ಕೊಠಡಿಯ ಸುರಕ್ಷತೆ, ಶಿಕ್ಷಕರ ಸುರಕ್ಷತೆ ಮತ್ತು ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ತೀವ್ರ ಗಮನ ಹರಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ. 

Read More

ದೆಹಲಿ ಸಿಎಂ ಕೇಜ್ರಿವಾಲ್ ಗೆ ಜೈಲೇ ಗತಿ : ಆಗಸ್ಟ್ 8ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್

ನವದೆಹಲಿ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ಆಗಸ್ಟ್​ 8ರವರೆಗೆ ವಿಸ್ತರಿಸಲಾಗಿದೆ. ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಮಾರ್ಚ್ 21 ರಿಂದ ಜೈಲಿನಲ್ಲಿದ್ದಾರೆ ಮತ್ತು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ. ಮೇ 10 ರಂದು, ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಅವರಿಗೆ 21 ದಿನಗಳ ಮಧ್ಯಂತರ ಜಾಮೀನು ನೀಡಿತು….

Read More

ಮುಂಡಗೋಡ ತಾಲೂಕಿನಲ್ಲಿ ಶೇ.44 ರಷ್ಟು ರೈತರು ಮಾತ್ರ ಆರ್.ಟಿ.ಸಿ.ಗೆ ಆಧಾರ್ ಲಿಂಕ್ ಮಾಡಿದ್ದಾರೆ : ತಹಶೀಲದಾರ ಶಂಕರ ಗೌಡಿ

ಮುಂಡಗೋಡ : ತಾಲೂಕಿನಲ್ಲಿ ಇಲ್ಲಿಯವರೆಗೆ ಕೇವಲ ಶೇ.44 ರಷ್ಟು ರೈತರು ಮಾತ್ರ ತಮ್ಮ ಜಮೀನುಗಳ ಪಹಣಿ ಪತ್ರಿಕೆ ( ಆರ್.ಟಿ.ಸಿ) ಗೆ ಆಧಾರ್ ಲಿಂಕ್ ಮಾಡಿಕೊಂಡಿದ್ದಾರೆ. ಇದು ಅತ್ಯಂತ ಕಡಿಮೆ ಸಂಖ್ಯೆ ಆಗಿದೆ ಎಂದು ತಹಶೀಲದಾರ ಶಂಕರ ಗೌಡಿ ತಿಳಿಸಿದ್ದಾರೆ. ಇನ್ನು ಮುಂದೆ ತಮ್ಮ ಜಮೀನಿನ ದಾಖಲೆಗಳನ್ನು ಸುರಕ್ಷಿತವಾಗಿ ಇಡಲು, ವಿವಿಧ ಸೌಲಭ್ಯಗಳನ್ನು ಪಡೆಯಲು, ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಭೂಮಿಯ ಹಕ್ಕು ಬದಲಾವಣೆ ಮಾಡಿಕೊಳ್ಳಲು ನಿಮ್ಮ ಪಹಣಿ ಪತ್ರಿಕೆಗೆ ಕಡ್ಡಾಯವಾಗಿ ಆಧಾರ್ ಸಂಖ್ಯೆ ಲಿಂಕ್ ಆಗಿರಬೇಕು. ಇಲ್ಲದಿದ್ದಲ್ಲಿ…

Read More

ಈ ದಿನ ಒಟ್ಟಿಗೆ 2 ತಿಂಗಳ ʻಗೃಹಲಕ್ಷ್ಮಿʼ ಹಣ ಖಾತೆಗೆ ಜಮಾ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅಧಿಕೃತ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರವು ಯಜಮಾನಿಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೃಹ ಲಕ್ಷ್ಮಿ ಯೋಜನೆಯ 2 ತಿಂಗಳ ಬಾಕಿ ಹಣ 10 ದಿನಗಳ ಒಳಗಾಗಿ ಫಲಾನುಭವಿಗಳ ಖಾತೆಗೆ ಹಾಕಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಹಣ ಮೂರ್ನಾಲ್ಕು ತಿಂಗಳಿನಿಂದ ಬರುತ್ತಿಲ್ಲ ಎನ್ನುವುದು ತಪ್ಪು, ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಹಾಕಿದ್ದೇವೆ. ಜೂನ್‌, ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಹಾಕಲು ತಾಂತ್ರಿಕ ದೋಷವಾಗಿದ್ದು, ಈಗಾಗಲೇ ಡಿಬಿಟಿ ಪುಶ್‌ ಮಾಡುತ್ತಿದ್ದೇವೆ. 8-10 ದಿನದೊಳಗೆ…

Read More

ಶಿರೂರು ಗುಡ್ಡ ಕುಸಿತ: ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ

ಕಾರವಾರ : ಭಾರೀ ಮಳೆಯಿಂದಾಗಿ ಶಿರೂರ ಬಳಿ ಸಂಭವಿಸಿದ್ದ ಗುಡ್ಡ ಕುಸಿತ ದುರಂತದಲ್ಲಿ ಒಟ್ಟು ಹತ್ತು ಜನರು ಮೃತಪಟ್ಟಿದ್ದು, ಈ ಪೈಕಿ  ಕಾರ್ಯಾಚರಣೆ ಮೂಲಕ ಈವರೆಗೆ ಎಂಟು ಜನರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಇನ್ನು ಈ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಈಗ ಗುಡ್ಡದ ಮುಂಭಾಗದಲ್ಲಿರುವ ಗಂಗಾವಳಿಯಲ್ಲಿರುವುದು ಪತ್ತೆಯಾಗಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ದುರಂತ ಸಂಭವಿಸಿದ ಎಂಟು ದಿನಗಳು ಕಳೆದ ಬಳಿಕ ಟ್ರಕ್ ಪತ್ತೆಯಾಗಿದ್ದು, ಕಾರ್ಯಚರಣೆ ತೀವ್ರಗೊಂಡಿದೆ. ಆದ್ರೆ, ಚಾಲಕ…

Read More