ಅಷ್ಟೊತ್ತಿನಲ್ಲಿ ಯುವತಿ ನಿರ್ಜನ ಪ್ರದೇಶಕ್ಕೆ ಹೋಗಬಾರದಿತ್ತು ಎಂದ ಗೃಹ ಸಚಿವರ ಹೇಳಿಕೆ ಹಿಂಪಡೆಯುವಂತೆ ಕೆಲ ಸಂಘಟನೆಗಳ ಒತ್ತಾಯ
ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಹೇಯ ಕೃತ್ಯವೆಸಗಿದ ಕಾಮುಕರನ್ನು ಬಂಧಿಸಿ ನಡುರಸ್ತೆಯಲ್ಲಿ ಗುಂಡಿಕ್ಕಿ ಕೊಲ್ಲಬೇಕು. ಸಂತ್ರಸ್ತೆಗೆ ನ್ಯಾಯ ಕೊಡಿಸಬೇಕು ಎಂದು ಸಾವಿರಾರು ವಿದ್ಯಾರ್ಥಿಗಳು ರಾಜ್ಯಾದ್ಯಂತ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಈ ಪಕರಣ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ, ‘ಸಂತ್ರಸ್ತ ಯುವತಿ ನಿರ್ಜನಪ್ರದೇಶಕ್ಕೆ ಹೋಗಬಾರದಿತ್ತು…’ ಎನ್ನುವ ಮೂಲಕ ಮಹಿಳೆಯರು ಸೇರಿದಂತೆ ವಿವಿಧ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಬಂಧೀಖಾನೆಇಲಾಖೆಯಹಿರಿಯ…