ಅಫ್ಘಾನ್ ನಿಂದ ಕನ್ನಡಿಗರನ್ನು ಕರೆತರಲು ಪ್ರಯತ್ನ ನಡೆಯುತ್ತಿದೆ: ಸಿಎಂ ಬೊಮ್ಮಾಯಿ
ಬೆಂಗಳೂರು: ಆಫ್ಘಾನಿಸ್ಥಾನದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರದಿಂದ ಎಲ್ಲಾ ಪ್ರಯತ್ನಗನ್ನು ಮಾಡಲಾಗುತ್ತಿದೆ. ಭಾರತ ರಾಯಭಾರ ಕಚೇರಿ ಜತೆ ಸರ್ಕಾರ ನಿರಂತರ ಸಂಪರ್ಕದಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಕನ್ನಡಿಗರನ್ನು ಕರೆತರಲಾಗಿದೆ. ಆ ದೇಶದಲ್ಲಿ ದೂರ ದೂರದಲ್ಲಿರುವ ಕನ್ನಡಿಗರ ಸಂಪರ್ಕ ಮಾಡಲಾಗುತ್ತಿದೆ. ಎಷ್ಟು ಜನ ಕನ್ನಡಿಗರಿದ್ದಾರೆ ಎನ್ನುವ ಮಾಹಿತಿ ಕಲೆಹಾಕುತ್ತಿದ್ದೇವೆ. ಆ ಬಗ್ಗೆ ನಿಖರ ಮಾಹಿತಿ ಇಲ್ಲ ಎಂದರು. ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ. ಕನ್ನಡಿಗರಿಗೆ ಪ್ರಾಣ ಹಾನಿ ಆಗಿರುವ ಬಗ್ಗೆ ಮಾಹಿತಿ…