ಕಾಬುಲ್ನಿಂದ ಸುರಕ್ಷಿತವಾಗಿ ದೆಹಲಿ ತಲುಪಿದ 107 ಭಾರತೀಯರು; ಮುಂದುವರಿದ ತೆರವು ಕಾರ್ಯಾಚರಣೆ
ನವದೆಹಲಿ: ಭಾರತೀಯ ವಾಯುಪಡೆಯ ವಿಶೇಷ ವಿಮಾನವೊಂದು ಇಂದು ಬೆಳಿಗ್ಗೆ 107 ಭಾರತೀಯರೂ ಸೇರಿದಂತೆ 168 ಜನರನ್ನು ಅಫ್ಘಾನಿಸ್ತಾನದಿಂದ ಹೊತ್ತುತಂದಿದ್ದು, ದೆಹಲಿ ಬಳಿಯ ಹಿಂದೋನ್ ಏರ್ ಬೇಸ್ನಲ್ಲಿ ಇಳಿದಿದೆ. ಹೀಗೆ ಆಗಮಿಸಿರುವ ಯಾತ್ರಿಗಳಿಗೆ ಕರೊನಾದ ಆರ್ಟಿಪಿಸಿಆರ್ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇದರೊಂದಿಗೆ ಏರ್ ಇಂಡಿಯ, ಇಂಡಿಗೋ ಮತ್ತು ವಿಸ್ತಾರ ಏರ್ಲೈನ್ಗಳ ಮೂರು ಇತರ ವಿಮಾನಗಳೂ ಕಾಬುಲ್ನಿಂದ ತೆರವುಗೊಳಿಸಲ್ಪಟ್ಟ ಭಾರತೀಯರನ್ನು ತಜಿಕಿಸ್ತಾನದ ರಾಜಧಾನಿ ದುಶಾನ್ಬೆ ಮತ್ತು ಖತಾರ್ನ ದೋಹಾದಿಂದ ಹೊತ್ತುತಂದಿದೆ.