ಸಿಎಂ ಬೊಮ್ಮಾಯಿ ಭೇಟಿಯಾಗಲು ಬಂದು ನಿರಾಸೆಯಿಂದ ತೆರಳಿದ ಆರ್.ಶಂಕರ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಲು ಅವರ ನಿವಾಸಕ್ಕೆ ಬಂದ ಮಾಜಿ ಸಚಿವ ಆರ್.ಶಂಕರ್ ನಿರಾಸೆಯಿಂದ ಹಿಂದೆ ತೆರಳಬೇಕಾಯಿತು. ಸಿಎಂ ಬೊಮ್ಮಾಯಿ ಅವರ ಆರ್. ಟಿ ನಗರ ನಿವಾಸಕ್ಕೆ ಆರ್. ಶಂಕರ್ ಆಗಮಿಸಿದ್ದರು. ಆದರೆ ಆ ವೇಳೆ ಸಿಎಂ ಅಲ್ಲಿರಲಿಲ್ಲ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಶಂಕರ್, ರಾಜಕಾರಣಿ ಆಗಿ ಸಿಎಂ ಭೇಟಿ ಮಾಡುವ ಅವಶ್ಯಕತೆ ಇರುತ್ತದೆ. ನಾನು ಈಗಾಗಲೇ ಸಿಎಂ ಭೇಟಿ ಮಾಡಿದ್ದೇನೆ. ಸಂಪುಟ ರಚನೆ ಇರುವುದರಿಂದ ಏನಾದರೂ ಕೇಳೋದು ಮಾಡೋದು ಇರುತ್ತದೆ ಎಂದರು. ಸಚಿವ…

Read More

ಮೂಲ ಬಿಜೆಪಿಗರು ಹಾಲಿದ್ದಂತೆ, ಹೊರಗಿನಿಂದ ಬಂದವರು ಜೇನಿದ್ದಂತೆ : ಕೆ ಎಸ್ ಈಶ್ವರಪ್ಪ

ಬಾಗಲಕೋಟೆ: ರಾಜ್ಯದ ಬಿಜೆಪಿ ನಾಯಕರಲ್ಲಿ ಅಸಮಾಧಾನ ಎಂಬ ಪ್ರಶ್ನೆಯೇ ಇಲ್ಲ, ಇನ್ನೆರಡು ಮೂರು ದಿನಗಳಲ್ಲಿ ಕೇಂದ್ರದ ನಾಯಕರು ರಾಜ್ಯಕ್ಕೆ ಬಂದು ಅಸಮಾಧಾನ ಏನೇನಿದೆ ಎಂದು ತಿಳಿದುಕೊಂಡು ನಾಯಕರನ್ನು ಕರೆದು ಕೂರಿಸಿ ಚರ್ಚೆ ಮಾಡಿ ಬಗೆಹರಿಸುತ್ತಾರೆ. ಇಲ್ಲಿ ವಲಸಿಗರು, ಮೂಲದಿಂದಲೇ ಇರುವವರು ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹಿರಿಯ ನಾಯಕ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಬಾಗಲಕೋಟೆಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಹಾಲಿದ್ದಂತೆ.ಹೊಸಬರು ಬಂದು ಸೇರ್ಪಡೆಗೊಂಡವರು ಜೇನಿದ್ದಂತೆ. ಹಾಲು-ಜೇನು ಸೇರಿದರೆ…

Read More

ಪರಸ್ಪರ ಏಕವಚನದಲ್ಲಿ ಕಿತ್ತಾಡಿಕೊಂಡ ಬೆಂಗಳೂರಿನ ಬಿಜೆಪಿಯ ಹಿರಿಯ ಶಾಸಕರು

ಬೆಂಗಳೂರು : ಮಹಾನಗರ ಬೆಂಗಳೂರಿನ ಹಿರಿಯ ಬಿಜೆಪಿ ಶಾಸಕರಾದ ಆರ್. ಅಶೋಕ್ ಮತ್ತು ವಿ.ಸೋಮಣ್ಣ ಪರಸ್ಪರ ಏಕವಚನದಲ್ಲಿ ಕಿತ್ತಾಡಿಕೊಂಡಿರುವ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮೊಬೈಲ್ ನಲ್ಲಿ ಸಂಭಾಷಣೆ ವೇಳೆ ಪರಸ್ಪರ ಏಕವಚನ ಮತ್ತು ಕೆಟ್ಟ ಪದಗಳನ್ನು ಬಳಸಿ ಜಗಳವಾಡಿಕೊಂಡಿದ್ದಾರೆ. ಆಡಿಯೋ ತುಣುಕು ಕೆಲವರಿಗೆ ಲಭ್ಯವಾಗಿದ್ದು, ಪಕ್ಷದೊಳಗೆ ಈ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ತಮ್ಮನ್ನು ಕರೆಯದೇ ದೆಹಲಿಗೆ ಹೋಗಿದ್ದ ಅಶೋಕ್, ಸಂಪುಟಕ್ಕೆ ತಮ್ಮನ್ನು ಸೇರಿಸದಂತೆ ವರಿಷ್ಠರಿಗೆ ದೂರು ನೀಡಿರಬಹುದೆಂದು ಸೋಮಣ್ಣ ಅನುಮಾನ ವ್ಯಕ್ತಪಡಿಸಿದ್ದಾರೆ….

Read More

ದೇವೇಗೌಡರ ನಿವಾಸಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಬೆಂಗಳೂರು : ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಕೆಲಕಾಲ ಜೆಡಿಎಸ್​ ವರಿಷ್ಠರ ಜತೆ ಮಾತುಕತೆ ನಡೆಸಿದರು. ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ಸಿಎಂ, ದೇವೇಗೌಡರ ಜತೆ ಅನೌಪಚಾರಿಕವಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗೆ ಮಾಜಿ ಪ್ರಧಾನಿ ಶುಭ ಕೋರಿದರು. ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಿದರು. ಜನತಾ ಪರಿವಾರದ ಹಳೆಯ ನೆನಪುಗಳನ್ನೂ ಮೆಲುಕು ಹಾಕಿದರು. ಮಾಜಿ ಸಚಿವರಾದ ವಿ.ಸೋಮಣ್ಣ, ಎಚ್.ಡಿ. ರೇವಣ್ಣ ಉಪಸ್ಥಿತರಿದ್ದರು.

Read More

ಲಸಿಕೆ ಪಡೆದರೂ ನೆಗೆಟಿವ್ ವರದಿ ಕಡ್ಡಾಯ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಆತಂಕ ಎದುರಾಗಿದೆ. ಆರೋಗ್ಯ ಇಲಾಖೆಯಿಂದ ನಿಯಮಗಳನ್ನು ಬದಲಾವಣೆ ಮಾಡಲಾಗಿದೆ. ಕೇರಳ, ಮಹಾರಾಷ್ಟ್ರ ಪ್ರಯಾಣಿಕರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. 72 ಗಂಟೆಯೊಳಗಿನ ನೆಗೆಟಿವ್ RTPCR ವರದಿ ಪಡೆದುಕೊಂಡಿರಬೇಕಿದೆ. ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದೆ. ಹಿಂದೆ ಲಸಿಕೆ ಪಡೆದವರಿಗೆ ವಿನಾಯಿತಿ ನೀಡಲಾಗಿತ್ತು. ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿಯಮ ಬದಲಾವಣೆ ಮಾಡಲಾಗಿದೆ. ಕೇರಳದಲ್ಲಿ ಮೂರನೇ ಅಲೆ ಆತಂಕವನ್ನುಂಟು ಮಾಡಿದೆ. ಪ್ರತಿ ದಿನ 20 ಸಾವಿರಕ್ಕಿಂತ ಅಧಿಕ ಹೊಸ ಪ್ರಕರಣ ವರದಿಯಾಗುತ್ತಿದ್ದು, ಇದರ ಪರಿಣಾಮ…

Read More

ತನ್ನ ವಿರುದ್ಧವೇ ತನಿಖೆ ನಡೆಸಲು ಲೋಕಾಯುಕ್ತರಿಗೆ ಪತ್ರ ಬರೆದ ಕೋಟಾ ಶ್ರೀನಿವಾಸ ಪೂಜಾರಿ

ಉಡುಪಿ : ಸರಳ ಸಜ್ಜನಿಕೆಯಿಂದ ರಾಜ್ಯದ ಜನರ ಗಮನ ಸೆಳೆದಿರುವ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ಮೇಲೆ ಆದಾಯಕ್ಕಿಂತ ಹೆಚ್ಚು ಗಳಿಕೆಯ ಟೀಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಮಾಡಲಾಗುತ್ತಿದೆ. ಕೋಟಾ ಶ್ರೀನಿವಾಸ ಪೂಜಾರಿಯವರು 6 ಕೋಟಿ ಮೌಲ್ಯದ ಮನೆಯನ್ನು ಕಟ್ಟಿಸುತ್ತಿದ್ದು, ಇದು ಸಾಮಾನ್ಯ ರಾಜಕಾರಣಿಯ ಲಕ್ಷಣ ಎಂದು ಕೆಲ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೋಟಾ ಶ್ರೀನಿವಾಸ ಪೂಜಾರಿಯವರ ಅರು ಕೋಟಿಯ ಮನೆ ಅಂತಾ ಸುದ್ದಿ ಹರಡಲಾಗುತ್ತಿದ್ದು, ಈಗ ಈ ಎಲ್ಲಾ ವಿಚಾರಗಳಿಗೆ…

Read More

ಮುಂದಿನ ಒಂದು ವಾರದೊಳಗೆ ಸಂಪುಟ ವಿಸ್ತರಣೆ: ಸಿಎಂ ಬೊಮ್ಮಾಯಿ

ನವದೆಹಲಿ : ರಾಜ್ಯದಲ್ಲಿ ಪ್ರವಾಹ ಮತ್ತು ಕೊರೊನಾ ತೃತೀಯ ಅಲೆಯ ಆತಂಕ ಇರುವುದರಿಂದ ಮುಂದಿನ ಒಂದು ವಾರದೊಳಗೆ ಸಚಿವ ಸಂಪುಟವನ್ನು ವಿಸ್ತರಿಸಲಾಗುವುದು ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಇಲ್ಲಿಗೆ ಬಂದಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ತ್ವರಿತವಾಗಿ ಸಂಪುಟ ವಿಸ್ತರಣೆ ಮಾಡಬೇಕೆಂದು ಸಂಕ್ಷಿಪ್ತವಾಗಿ…

Read More