ಪ್ರಬಲ ಮುಸ್ಲಿಂ ನಾಯಕರಿಗೆ ಕಿರುಕುಳ ನೀಡುವ ಪ್ರಯತ್ನ: ನಾನು ಮನೆ ಕಟ್ಟಿಸಿದ್ದೆ ದೊಡ್ಡ ಅಪರಾಧವೇ?

ಬೆಂಗಳೂರು : ದೇಶದ ವಿವಿಧ ರಾಜ್ಯಗಳ ಪ್ರಬಲ ಮುಸ್ಲಿಂ ನಾಯಕರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಅವರಿಗೆ ಕಿರುಕುಳ ನೀಡುವ ಪ್ರಯತ್ನ ನಡೆಯುತ್ತಿದೆ. ಇಂತಹ ಷಡ್ಯಂತ್ರದ ಭಾಗವಾಗಿ ನನ್ನ ಮೇಲೂ ಹಲವು ರೀತಿ ದಾಳಿಗಳಾಗುತ್ತಿವೆ. ಆದರೆ ಇದ್ಯಾವುದಕ್ಕೂ ನಾನು ಹೆದರುವುದಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಜಮೀರ್ ಅಹ್ಮದ್ ಖಾನ್, ನನ್ನ ಆಸ್ತಿಯೆಂದರೆ ನನ್ನ ಜನ. ನಾನು ರಾಜಕೀಯ ಜೀವನದಲ್ಲಿರುವವರೆಗೆ ನನ್ನ ಜನ ತಲೆತಗ್ಗಿಸುವಂತ ಯಾವ ಕೆಲಸವನ್ನೂ ಮಾಡುವುದಿಲ್ಲ. ನನ್ನ ಆಸ್ತಿಯೂ ಅವರೇ.ಇ.ಡಿ…

Read More

ಪತ್ನಿಯನ್ನು ಕೊಲೆ ಮಾಡಿ ಪಕ್ಕದ ಮನೆಯವರ ಜಮೀನಿನಲ್ಲಿ ಹೂತು ಹಾಕಿದ ಪತಿ!

ಮಂಡ್ಯ: ಮಳವಳ್ಳಿ ತಾಲ್ಲೂಕಿನ ಕಲ್ಲುವೀರನಹಳ್ಳಿ ಗ್ರಾಮದಲ್ಲಿ ಗಂಡನೇ ಹೆಂಡತಿಯನ್ನು ಕೊಲೆ ಮಾಡಿ ಶವವನ್ನು ಬೇರೆಯವರ ಜಮೀನಿನಲ್ಲಿ ಹೊತು ಹಾಕಿ ಪರಾರಿಯಾಗಿರುವ ಘಟನೆ ನಡೆದಿದೆ. ಕಲ್ಲುವೀರನಹಳ್ಳಿ ಗ್ರಾಮದ ಶಿವರಾಜು ಎಂಬುವವರು ಪತ್ನಿ ರಾಣಿ (30 ವ)ಯನ್ನು ಮನೆಯಲ್ಲಿ‌ ಶುಕ್ರವಾರ ಸಂಜೆ ಕೊಲೆ ಮಾಡಿ ಶವವನ್ನು ಮನೆಯ ರೂಮಿನಲ್ಲಿ ಇಟ್ಟು ನಂತರ ಮಧ್ಯೆ ರಾತ್ರಿ ವೇಳೆ ಶಿವರಾಜು ಪಕ್ಕದ ಸತೀಶ್ ಎಂಬುವವರ ಜಮೀನಿಗೆ ಶವವನ್ನು ಎಳೆದುಕೊಂಡು ತಂದು ಹೊತು ಹಾಕಿದ್ದಾನೆ ಎನ್ನಲಾಗಿದೆ. ಶನಿವಾರ ಬೆಳಿಗ್ಗೆ ಶಿವರಾಜು ಧರಿಸಿದ್ದ ಬಟ್ಟೆಗಳು ರಕ್ತಸಿಕವಾಗಿತ್ತು…

Read More

ಆಫ್ಘನ್ ನಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ದಬ್ಬಾಳಿಕೆ; ಭಾರತದಂತಹ ಶಾಂತಿಪ್ರಿಯ ದೇಶ ಎಲ್ಲೂ ಇಲ್ಲ; ಈಶ್ವರಪ್ಪ

ಶಿವಮೊಗ್ಗ : ಆಫ್ಘಾನಿಸ್ತಾನದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ದಬ್ಬಾಳಿಕೆ ನಡೆಯುತ್ತಿದೆ. ಪ್ರಪಂಚದಲ್ಲಿ ಮಾನವೀಯತೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮನುಷ್ಯತ್ವ ಇಲ್ಲದ ಚಟುವಟಿಕೆಗಳು ಆಫ್ಘಾನಿಸ್ತಾನದಲ್ಲಿ ನಡೆಯುತ್ತಿವೆ. ಇದನ್ನೆಲ್ಲ ನೋಡಿ ನಮ್ಮ ದೇಶದ ಜನರು ಕಲಿಯಬೇಕಿದೆ. ಯಾವುದು ಒಳ್ಳೆಯದು ಎಂಬುದು ಜನ ತಿಳಿದುಕೊಳ್ಳಬೇಕು ಎಂದು ಈಶ್ವರಪ್ಪ ವಿಚಾರವಾದಿಗಳಿಗೆ ಸಲಹೆ ನೀಡಿದ್ದಾರೆ. ನಮ್ಮ ದೇಶದಲ್ಲಿರುವಷ್ಟು ಶಾಂತಿಪ್ರಿಯತೆ, ಧರ್ಮ-ಧರ್ಮಗಳ ನಡುವಿನ ಸಹಿಷ್ಣುತೆ ಎಲ್ಲಿಯೂ ಇಲ್ಲ. ತಾಲಿಬಾನ್ ಉಗ್ರರ ದುಷ್ಕೃತ್ಯವನ್ನು ಎಲ್ಲರೂ ಖಂಡಿಸಬೇಕು ಎಂದು…

Read More

ಬಾಗಲಕೋಟೆ: ತಾಲಿಬಾನ್ ಪರವಾಗಿ ಪೋಸ್ಟ್ ಹಾಕಿದ್ದ ಯುವಕ ಅರೆಸ್ಟ್

ಬಾಗಲಕೋಟೆ : ಐ ಲವ್ ತಾಲಿಬಾನ್ ಎಂದು ಪೋಸ್ಟ್ ಹಾಕಿದ್ದ ಯುವಕನನ್ನು ಜಮಖಂಡಿ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಜಮಖಂಡಿಯ ಆಸೀಫ್ ಗಲಗಲಿ ಬಂಧಿತ ಯುವಕ ಎಂದು ಹೇಳಲಾಗಿದೆ. ಆಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದು ಹಿಂಸಾಚಾರ ನಡೆಸುತ್ತಿದ್ದಾರೆ. ಅಂತಹ ತಾಲಿಬಾನ್ ಪರವಾಗಿ ಫೇಸ್ಬುಕ್ ನ ಪೋಸ್ಟ್ ಮಾಡಿದ್ದಾನೆ. ಆಸೀಫ್, ಐ ಲವ್ ತಾಲಿಬಾನ್ ಎಂದು ಮಾಡಿದ್ದ ಪೋಸ್ಟ್ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆತನ ವಿರುದ್ಧ ಸ್ಥಳೀಯರು ಕ್ರಮಕ್ಕೆ ಆಗ್ರಹಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆನ್ನಲಾಗಿದೆ.

Read More

ಭಾರತ ಸಂಪೂರ್ಣ ಹುರುಪಿನಿಂದ ಕೊರೊನಾ ವಿರುದ್ಧ ಹೋರಾಡುತ್ತಿದೆ; ಮೋದಿ ಶ್ಲಾಘನೆ

ನವದೆಹಲಿ : ಭಾರತದಲ್ಲಿ ದೇಶೀಯವಾಗಿ ಅಭಿವೃದ್ಧಿಪಡಿಸಿದ ಡಿಎನ್‌ಎ ಆಧಾರಿತ ಕೊರೊನಾ ಲಸಿಕೆ ಝೈಕೋವ್ ಡಿ ತುರ್ತು ಬಳಕೆಗೆ ಶುಕ್ರವಾರ ಭಾರತೀಯ ಔಷಧ ನಿಯಂತ್ರಕ ಅನುಮೋದನೆ ನೀಡಿದ್ದು, ಪ್ರಧಾನಿ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಲಸಿಕೆ ಅಭಿವೃದ್ಧಿಪಡಿಸಿದ ವಿಜ್ಞಾನಿಗಳ ಶ್ರಮವನ್ನು ಮೋದಿ ಶ್ಲಾಘಿಸಿದ್ದು, ಮೊದಲ ಡಿಎನ್‌ಎ ಆಧಾರಿತ ಝೈಕೋವ್ ಡಿ ಲಸಿಕೆ ಭಾರತದ ವಿಜ್ಞಾನಿಗಳ ಉತ್ಸಾಹಕ್ಕೆ ಸಾಕ್ಷಿಯಾಗಿದೆ. ಇದೊಂದು ಮಹತ್ವದ ಸಾಧನೆ ಎಂದು ಟ್ವೀಟ್ ಮಾಡಿದ್ದಾರೆ. ‘ಭಾರತ ಸಂಪೂರ್ಣ ಹುರುಪಿನಿಂದ ಕೊರೊನಾ ಸೋಂಕಿನ ವಿರುದ್ಧ ಹೋರಾಡುತ್ತಿದೆ’ ಎಂದು ಲಸಿಕೆಗೆ ಅನುಮೋದನೆ ಬೆನ್ನಲ್ಲೇ…

Read More

ಮೂಲಸೌಕರ್ಯ ಕೊರತೆ: 6 ಎಂಜಿನಿಯರಿಂಗ್‌ ಕಾಲೇಜುಗಳನ್ನು ಮುಚ್ಚಲು ವಿಟಿಯು ಆದೇಶ

ಬೆಳಗಾವಿ : ಮೂಲಸೌಕರ್ಯ ಕೊರತೆ ಹಿನ್ನೆಲೆಯಲ್ಲಿ ರಾಜ್ಯದ 6 ಎಂಜಿನಿಯರಿಂಗ್‌ ಕಾಲೇಜುಗಳನ್ನು ಮುಚ್ಚಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಆದೇಶಿಸಿದೆ. ಇತ್ತೀಚೆಗೆ ನಡೆದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕಾಲೇಜುಗಳನ್ನು ಮುಚ್ಚುವ ಆದೇಶವು ಅನ್ವಯಿಸುತ್ತದೆ ಎಂದು ವಿಶ್ವವಿದ್ಯಾಲಯವು ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸಿದೆ. 2021-22ರ ಶೈಕ್ಷಣಿಕ ವರ್ಷದಿಂದ ಈ ಕಾಲೇಜುಗಳಿಗೆ ಪ್ರವೇಶ ಪಡೆಯದಂತೆ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಎಚ್ಚರಿಕೆಯನ್ನೂ ವಿಶ್ವವಿದ್ಯಾಲಯ ನೀಡಿದೆ. ‘ಮೂಲಸೌಕರ್ಯಗಳ ಕೊರತೆ, ಸೀಟುಗಳನ್ನು ತುಂಬುವಲ್ಲಿ ತೊಂದರೆ, ಕಳಪೆ ಗುಣಮಟ್ಟದ ಬೋಧನೆಯ…

Read More

ಹಬ್ಬದ ದಿನವೇ ದಂಪತಿಯ ಬರ್ಬರ ಹತ್ಯೆ, ಹಾಡಹಗಲೇ ನಡೆಯಿತು ಜೋಡಿಕೊಲೆ

ಬೆಂಗಳೂರು: ಎಲ್ಲರೂ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಇರುವಾಗ ಇಲ್ಲೊಂದು ಮನೆಯಲ್ಲಿ ಶೋಕದ ವಾತಾವರಣ ಉಂಟಾಗಿದೆ. ಹಬ್ಬದ ದಿನದಂದೇ ದುಷ್ಕರ್ಮಿಗಳು ಲಾಂಗು ಝಳಪಿಸಿದ್ದು, ಎರಡು ಜೀವಗಳು ಬಲಿಯಾಗಿವೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್​ನ ಕಾಶಿನಗರದ ಶಾಂತರಾಜು ಹಾಗೂ ಪ್ರೇಮಲತಾ ದಂಪತಿ ಕೊಲೆಯಾದವರು. ಹಾಡಹಗಲೇ ದಾಳಿ ಇಟ್ಟ ದುಷ್ಕರ್ಮಿಗಳು ಈ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕುಮಾರಸ್ವಾಮಿ ಬಡಾವಣೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಯಾಕೆ ಯಾರು ಈ ಕೃತ್ಯವೆಸಗಿದ್ದಾರೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಆರೋಪಿಗಳ…

Read More

ಇನ್ನೂ ಬಾರದ ಜಾಮೀನು ಆದೇಶ ಪ್ರತಿ: ಇನ್ನೊಂದು ದಿನ ಜೈಲಲ್ಲೇ ವಿನಯ ವಾಸ್ತವ್ಯ

ಬೆಳಗಾವಿ : ಜಿಪಂ ಸದಸ್ಯನ ಕೊಲೆ‌ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಶುಕ್ರವಾರವೂ ಬಿಡುಗಡೆ ಭಾಗ್ಯ ಸಿಗಲಿಲ್ಲ. ಜಾಮಿನು ಸಿಕ್ಕರೂ ಆದೇಶ ಪ್ರತಿ ಬಾರದ್ದಕ್ಕೆ ಇನ್ನೊಂದು ದಿನ‌ ಜೈಲಿನಲ್ಲಿ ಉಳಿಯಬೇಕಾದ ಅನಿವಾರ್ಯತೆ ಒದಗಿ ಬಂದಿದೆ. ಸುಪ್ರೀಂ ಕೋರ್ಟ್ ಮತ್ತು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ವಿನಯ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದ್ದರೂ ಇನ್ನೊಂದು ದಿನ ಜೈಲಿನಲ್ಲಿ ಉಳಿಯಬೇಕಾಗಿದೆ.‌ ವರ ಮಹಾಲಕ್ಷ್ಮೀ ಹಬ್ಬದಂದು ಶುಕ್ರವಾರ ಬಿಡುಗಡೆ ಆಗಲಿಲ್ಲ. ಹಿಂಡಲಗಾ ಜೈಲಿನಿಂದ ಬಿಡುಗಡೆ ಬಳಿಕ ಅದ್ಧೂರಿಯಾಗಿ ಸ್ವಾಗತಿಸಲು ವಿನಯ ಅಭಿಮಾನಿಗಳು…

Read More

ರಾಜೀವ ಗಾಂಧಿ, ಅರಸ ಜಯಂತಿ ಆಚರಣೆ

ಮುಂಡಗೋಡ : ತಾಲೂಕಾ ಬ್ಲಾಕ ಕಾಂಗ್ರೆಸ ಕಚೇರಿಯಲ್ಲಿ ಇಂದು ಮಾಜಿ ಪ್ರಧಾನಿ ದಿ.ರಾಜೀವ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ ಅರಸ ಅವರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕಾ ಬ್ಲಾಕ ಕಾಂಗ್ರೆಸ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಹಂಚಿನಮನಿ, ರಾಜು ಭೋವಿ, ವಾದಿರಾಜ ರಾವ್, ಮಲ್ಲಿಕಾರ್ಜುನ ಗೌಳಿ ಮುಂತಾದವರಿದ್ದರು.    

Read More

24 ಗಂಟೆಯಲ್ಲಿ ಮತ್ತೆ 36,571 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; ಕೋವಿಡ್ ಸಾವಿನ ಸಂಖ್ಯೆಯಲ್ಲೂ ಏರಿಕೆ

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 36,571 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 540 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 433589ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 363605 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 36555 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31561635 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್ ರಿಕವರಿ…

Read More