ಸೈಬರ್ ಕ್ರೈಂ; 89 ಸಾವಿರ ಕಳೆದುಕೊಂಡ ಶಂಕರ ಬಿದರಿ

ಬೆಂಗಳೂರು : ಸೈಬರ್ ಕ್ರೈಂ ಜಾಲಕ್ಕೆ ಸಿಲುಕಿದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ 89 ಸಾವಿರ ರೂ. ಕಳೆದುಕೊಂಡಿದ್ದಾರೆ. ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವ ಕಳ್ಳರು 89 ಸಾವಿರ ರೂ. ದೋಚಿದ್ದಾರೆ. ಕರೆ ಮಾಡಿದ್ದ ವ್ಯಕ್ತಿಗೆ ಒಟಿಪಿ ಹೇಳಿದ್ದ ಶಂಕರ ಬಿದರಿ ಕೆಲವೇ ನಿಮಿಷಗಳಲ್ಲಿ ಹಣ ಕಳೆದುಕೊಂಡಿದ್ದಾರೆ. ಪಾನ್ ಕಾರ್ಡ್‌ ಮತ್ತು ಬ್ಯಾಂಕ್ ಖಾತೆ ಲಿಂಕ್ ಮಾಡಬೇಕು ಎಂದು ವ್ಯಕ್ತಿಯೊಬ್ಬರು…

Read More

ಮುಂದಿನ 2 ದಿನ ರಾಜ್ಯದ 16 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಮುಂದಿನ 2 ದಿನಗಳ ಕಾಲ ರಾಜ್ಯದ 16 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿಯಲ್ಲಿ ಮಳೆಯ ಬರುವ ಸಾಧ್ಯತೆ ಇದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ. ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ…

Read More

ದೇಶದಲ್ಲಿ ನಿನ್ನೆಗಿಂತ ಇಂದು ಇಳಿಕೆ ಕಂಡ ಕೊರೋನಾ : 15,981 ಜನರಿಗೆ ಕೋವಿಡ್ ದೃಢ, 166 ಸೋಂಕಿತರು ಸಾವು

ನವದೆಹಲಿ: ದೇಶದಲ್ಲಿ ನಿನ್ನೆಗೆ ಹೋಲಿಸಿದ್ರೇ.. ಇಂದು ಶೇ.5.22ರಷ್ಟು ಕೊರೋನಾ ಸೋಂಕಿನ ಪ್ರಕರಣ ಕಡಿಮೆ ವರದಿಯಾಗಿದೆ. ಇಂದು 15,981 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿನಿಂದ 122 ಜನರು ಸಾವನ್ನಪ್ಪಿರೋದಾಗಿ ವರದಿಯಿಂದ ತಿಳಿದು ಬಂದಿದೆ. ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯವು ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 15,981 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 3,40,53,573ಕ್ಕೆ ಏರಿಕೆಯಾಗಿದೆ. ಇದುವರೆಗೆ 3,33,99,961 ಸೋಂಕಿತರು ಗುಣಮುಖರಾದ ಕಾರಣ ದೇಶದಲ್ಲಿ 2,01,632 ಸಕ್ರೀಯ ಸೋಂಕಿತರು ಇರುವುದಾಗಿ…

Read More

ಜಂಬೂ ಸವಾರಿ ಸಂಪನ್ನದ ಬೆನ್ನಲ್ಲೆ ಮೈಸೂರಿನಲ್ಲಿ ಭಾರೀ ಮಳೆ : ಮನೆಗಳಿಗೆ ನುಗ್ಗಿದ ನೀರು

ಮೈಸೂರು : ವಿಶ್ವ ವಿಖ್ಯಾತ ದಸರಾ ಜಂಬೂ ಸವಾರಿ ಮುಗಿದ ತಕ್ಷಣವೇ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರುಣನ ಅರ್ಭಟ ಜೋರಾಗಿದೆ. ಜಂಬೂಸವಾರಿ ಮೆರವಣಿಗೆ ಮುಗಿಯುತ್ತಿದ್ದಂತೆ ಶುರುವಾದ ಭಾರೀ ಮಳೆ ನಗರದಲ್ಲಿ ಅವಾಂತರ ಸೃಷ್ಟಿಸಿದೆ. ಮೈಸೂರಿನ ಮಧುವನ ಬಳಿ ರಸ್ತೆಗಳಲ್ಲಿ ನೀರು ತುಂಬಿಕೊಂಡು ವಾಹನ ಸವಾರರು ಪರದಾಡುವಂತಾಗಿದೆ. ಮನೆಗಳಿಗೆ ಮಳೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ವಾಹಗಳು ಮಳೆ ನೀರಿನಲ್ಲಿ ಭಾಗಶಃ ಮುಳುಗಿದೆ. ಇಂದು ವಿಜಯ ದಶಮಿ ಹಬ್ಬದ ಸಂಭ್ರಮದಲ್ಲಿದ್ದ ಮೈಸೂರು ಜಂಬೂ ಸವಾರಿಗೆ ವರುಣ ಸಾಥ್…

Read More

ಶ್ರೀರಾಮ ಸೇನೆಯಿಂದ ವಿಶೇಷ ಪೂಜೆ, ಪ್ರಸಾದ ವಿತರಣೆ

ಮುಂಡಗೋಡ : ವಿಜಯದಶಮಿ ಅಂಗವಾಗಿ ಇಂದು ಬನ್ನಿ ಮಹಾಕಾಳಿ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯವರು ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ಶ್ರೀರಾಮ ಸೇನೆ ಅಧ್ಯಕ್ಷರಾದ ಮಂಜುನಾಥ ಹರಿಜನ, ಮಲ್ಲಿಕಾರ್ಜುನ ಗೌಳಿ, ಪಿ.ಎಸ್.ಐ. ಎನ್.ಡಿ.ಜಕ್ಕಣ್ಣವರ್, ರವಿ ಹಾವೇರಿ, ಮಂಜು ಗೌಳಿ, ರವಿ ತಳವಾರ, ಕಿರಣ ತಲವಾರ, ಪ್ರಕಾಶ ಬಡಿಗೇರ, ಸಂಜು, ಕುಮಾರ ತಲವಾರ, ಷಣ್ಮುಖ ಕೊಳೂರ ಮುಂತಾದವರಿದ್ದರು. ನಾಳೆ ದಿ.16ರಂದು ವಿದ್ಯುತ್ ಗ್ರಾಹಕರ ಸಭೆ ಮುಂಡಗೋಡ : ನಾಳೆ ದಿ.16ರಂದು ಮಧ್ಯಾಹ್ನ 3 ಗಂಟೆಗೆ ಹೆಸ್ಕಾಂ…

Read More

ರಾಜ್ಯದ ದೇವಾಲಯಗಳ ಆಧ್ಯಾತ್ಮಿಕ ವಾತಾವರಣ ಸುಧಾರಣೆಗೆ ಕ್ರಮ- ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯದ ಎಲ್ಲ ದೇವಾಲಯಗಳಲ್ಲಿ ಶ್ರದ್ಧಾಳು ಭಕ್ತ ಸಮೂಹಕ್ಕೆ ಅತ್ಯುತ್ತಮ ಸೌಕರ್ಯ ಒದಗಿಸಲಾಗುತ್ತದೆ. ಉತ್ತಮ ಆಧ್ಯಾತ್ಮಿಕ ವಾತಾವರಣ ನಿರ್ಮಾಣವಾಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ತಾವು ಸಚಿವರಾದ ನಂತರ ಇಲಾಖೆಗೆ ಸಂಬಂಧಿಸಿದಂತೆ ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ದೇವಾಲಯಗಳ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವುದು, ಮತ್ತು ತ್ವರಿತಗತಿಯಲ್ಲಿ ದೇವಾಲಯಗಳ ಸೇವೆ ದೊರೆಯುವಂತೆ ಮಾಡಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಶಿಕಲಾ ಜೊಲ್ಲೆಯವರು ಹೇಳಿದರು. ದುಷ್ಟ ಶಕ್ತಿಗಳ ಸಂಹಾರದ ಪ್ರತೀಕವಾಗಿ ಆಚರಿಸುವ ವಿಜಯದಶಮಿಯ ಸುಸಂಧರ್ಭದಲ್ಲಿ , ಕೋವಿಡ್ ಸೋಂಕಿನಿಂದ ನಮ್ಮ ನಾಡಿನ ಜನತೆಗೆ…

Read More

ಬೆಳಗಾವಿಯಿಂದಲೇ ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧೆ: ಸತೀಶ್ ಜಾರಕಿಹೊಳಿ

ಬೆಳಗಾವಿ: ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಘೋಷಿಸಿದ್ದಾರೆ. ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮದಲ್ಲಿ ಪುತ್ರ ರಾಹುಲ್ ಅವರ ಹುಟ್ಟು ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸತೀಶ್, ಲೋಕಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆದಿದೆ ಎಂದು ಹೇಳಿದರು. ನನ್ನ ಪುತ್ರ ರಾಹುಲ್ ಹಾಗೂ ಪುತ್ರಿ ಪ್ರಿಯಾಂಕಾ ಸಮಾಜಸೇವೆಯಲ್ಲಿ ನಿರತರಾಗಿದ್ದಾರೆ. ಯಮಕನಮರಡಿ ಕ್ಷೇತ್ರದಿಂದ ಯಾರನ್ನು ಕಣಕ್ಕಿಸಬೇಕು ಎಂದು ಪಕ್ಷ ತೀರ್ಮಾನ ಮಾಡುತ್ತದೆ ಎಂದು ಸತೀಶ್ ಹೇಳಿದರು.

Read More

ಕಣಕ್ಕಿಳಿಯದ ಯಡಿಯೂರಪ್ಪ: ಅಭ್ಯರ್ಥಿಗಳಲ್ಲಿ ಆತಂಕ

ಬೆಂಗಳೂರು : ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯ ಮತದಾನಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ಇದುವರೆಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಣಕ್ಕೆ ಧುಮುಕದಿರುವುದು ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಚುನಾವಣಾ ಪ್ರಚಾರಗಳು ಎಂದರೆ ಯಡಿಯೂರಪ್ಪ ಅವರನ್ನು ಹೊರತುಪಡಿಸಿ ಕಲ್ಪಿಸಿಕೊಳ್ಳುವುದಕ್ಕೆ ರಾಜ್ಯ ಬಿಜೆಪಿಗೆ ಇನ್ನೂ ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಬಿಜೆಪಿಯದ್ದೇ ಸರ್ಕಾರ ಇದೆ ಎಂದರೂ ಸಹ ರಾಜ್ಯ ನಾಯಕರು ಮತ್ತು ಪಕ್ಷದ ಅಭ್ಯರ್ಥಿಗಳು ಯಡಿಯೂರಪ್ಪ ಅವರ ಭಾಗವಹಿಸುವಿಕೆಯನ್ನು ಎದುರು ನೋಡುತ್ತಾರೆ. ಬಿಜೆಪಿ ಪಾಲಿಗೆ ಇಂತಹ ಶಕ್ತಿ ಗಳಿಸಿಕೊಂಡಿರುವ ಯಡಿಯೂರಪ್ಪ…

Read More

ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಆರೋಗ್ಯ ಸ್ಥಿರ: ಚೇತರಿಕೆ- ಏಮ್ಸ್

ನವದೆಹಲಿ: ಅನಾರೋಗ್ಯದಿಂದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ -ಏಮ್ಸ್ ಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿರುವುದಾಗಿ ಆಸ್ಪತ್ರೆ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಬುಧವಾರ ಏಮ್ಸ್ ಗೆ ದಾಖಲಾಗಿದ್ದ ಡಾ. ಮನ್ ಮೋಹನ್ ಸಿಂಗ್ ವೈದ್ಯಕೀಯ ನಿಗಾವಣೆಯಲ್ಲಿದ್ದಾರೆ. ಸುಸ್ತಿನ ಕಾರಣದಿಂದ 89 ವರ್ಷದ ಕಾಂಗ್ರೆಸ್ ಹಿರಿಯ ಮುಖಂಡರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯಕೀಯ ನಿಗಾವಣೆಯಲ್ಲಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ. ಇಂದು ಬೆಳಗ್ಗೆ ಕೇಂದ್ರ ಆರೋಗ್ಯ…

Read More

ಅ.17ರಿಂದ ಸಿಎಂ ಬಸವರಾಜ ಬೊಮ್ಮಾಯಿ ‘ಹಾನಗಲ್ ಉಪ ಚುನಾವಣೆ’ ಪ್ರಚಾರ

ಬೆಂಗಳೂರು : ಉಪಚುನಾವಣೆ ಪ್ರಯುಕ್ತ ಅಕ್ಟೋಬರ್ 17 ರಿಂದ ಹಾನಗಲ್ ತೆರಳಿ ಪ್ರಚಾರ ಕೈಗೊಳ್ಳಲಾಗುವುದು ನಂತರ ಸಿಂಧಗಿಯಲ್ಲಿ2 ದಿನಗಳ ಪ್ರಚಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಕಾವೇರಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು 21 ರ ನಂತರ ಹಾನಗಲ್ ಮತ್ತು ಸಿಂಧಗಿಯಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ ಎಂದರು. ಮಾಸಾಲಾ ಜಯರಾಂ ಅವರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಅವರು ಒಳ್ಳೆಯ ಸ್ನೇಹಿತರು ಎಂದರು….

Read More