ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ರೂಲ್ಸ್ ಜಾರಿ : ಸಚಿವ ಡಾ. ಅಶ್ವತ್ಥ್ ನಾರಾಯಣ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಯಾರೂ ಭಯ ಪಡಬೇಕಾದ ವಾತಾವರಣ ಇಲ್ಲ ಎಂದು ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ರಾಜ್ಯ ಸರ್ಕಾರವು ಕಠಿಣ ರೂಲ್ಸ್ ತಂದು ಕೊರೊನಾ ನಿಯಂತ್ರಣ ಮಾಡುತ್ತಿದೆ. ಬಿಬಿಎಂಪಿ ಡೋರ್ ಟೂ ಡೋರ್ ಸರ್ವೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಲಸಿಕೆ ವಿತರಣೆ ಹೆಚ್ಚಳ ಮಾಡುತ್ತೇವೆ ಎಂದರು. ಇನ್ನು ರಾಜ್ಯದಲ್ಲಿ ವರಮಹಾಲಕ್ಷ್ಮೀ ಹಬ್ಬ ಇರುವ ಹಿನ್ನೆಲೆ ರಾಜ್ಯಾದ್ಯಂತ ಸಂಭ್ರಮ ಮನೆ…