ಉದ್ಯೋಗ ಖಾತ್ರಿ ಯೋಜನೆಯಲ್ಲಿ ಜೆಸಿಬಿ ಬಳಸಿ ಕೆಲಸ ಮಾಡಿದರೆ ಕ್ರಮ : ಒಂಬುಡ್ಸಮನ್ ಆರ್.ಜಿ.ನಾಯಕ
ಮುಂಡಗೋಡ : ಉದ್ಯೋಗ ಖಾತ್ರಿ ಯೋಜನೆಯಲ್ಲಿ ಜೆಸಿಬಿ ಬಳಸಿ ಕೆಲಸ ಮಾಡುವುದಾಗಲಿ ಇಲ್ಲವೇ ಇದಕ್ಕೆ ಸಂಬಂಧಿಸಿದ ಯಾವುದೇ ದೂರು ನೀಡಿದರೆ ಅದನ್ನು ಸಮಗ್ರವಾಗಿ ಪರಿಶೀಲಿಸಿ ತಪ್ಪಿತಸ್ಥರ ಮೇಲೆ ಖಂಡಿತವಾಗಿಯೂ ಕ್ರಮ ಕೈಗೊಳ್ಳುತ್ತೇನೆ ಎಂದು ಒಂಬುಡ್ಸಮನ್ ಆರ್.ಜಿ.ನಾಯಕ ತಿಳಿಸಿದರು. ಇಂದು ನಾಗನೂರು, ಕೋಡಂಬಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡುವುದಕ್ಕೂ ಮೊದಲು ಅವರು ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು. ಯಂತ್ರಗಳನ್ನು ಬಳಸಿ ಕೆಲಸ ಮಾಡಲಾಗಿದೆ ಎಂಬ ದೂರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಎರಡೂ ಪಂಚಾಯತಿಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ….