ಬನವಾಸಿ ಭಾಗದಲ್ಲಿ ಹೆಬ್ಬಾರ ರೇಶನ್ ಕಿಟ್ ವಿತರಣೆ

ಶಿರಸಿ : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ ಉಂಚಳ್ಳಿ, ಭಾಶಿ ಹಾಗೂ ಬನವಾಸಿ  ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳಲ್ಲಿ ” ಹೆಬ್ಬಾರ್ ರೇಷನ್ ಕಿಟ್ ” ಅನ್ನು ಸಾಂಕೇತಿಕವಾಗಿ ವಿತರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.   ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾದ ವೆಂಕಟೇಶ ನಾಯಕ, ಗ್ರಾಮೀಣ ಮಂಡಲಾಧ್ಯಕ್ಷರಾದ ಎನ್.ವಿ.ಹೆಗಡೆ, ಯುವ ನಾಯಕರಾದ ವಿವೇಕ್ ಹೆಬ್ಬಾರ್ ಪ್ರಮುಖರಾದ ದ್ಯಾಮಣ್ಣ   ದೊಡ್ಮನಿ ಹಾಗೂ ಗ್ರಾಮ‌ ಪಂಚಾಯತ…

Read More

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಿ : ಬಿ.ಎಸ್.ವೈ.

ಬೆಂಗಳೂರು : ಎತ್ತಿನಹೊಳೆ, ಭದ್ರಾ ಮೇಲ್ದಂಡೆ ಯೋಜನೆಗಳ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಸಿ.ಎಂ. ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.       ಮಂಗಳವಾರ ಇವೆರಡು ಯೋಜನೆಗಳ ಕುರಿತಾಗಿ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ ಬಿ.ಎಸ್.ಯಡಿಯೂರಪ್ಪ ಎತ್ತಿನಹೊಳೆ ಯೋಜನೆಯಲ್ಲಿ ಈವರೆಗೆ 9003.86 ಕೋಟಿರೂ. ವೆಚ್ಚವಾಗಿದ್ದು, ಮೊದಲ ಹಂತದಲ್ಲಿ ಜುಲೈ ಅಂತ್ಯದೊಳಗೆ ವೇದಾವತಿ ವ್ಯಾಲಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

Read More

ಅಂತಿಮ ಮತದಾರರ ಪಟ್ಟಿ

ಮುಂಡಗೋಡ : 2021ರ ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ತಾಲೂಕಿನ ಅಂತಿಮ ಮತದಾರರ ಪಟ್ಟಿಯನ್ನು ತಹಶೀಲದಾರ ಕಾರ್ಯಾಲಯ ಹಾಗೂ ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಸಾವ‍್ಜನಿಕರ ತಿಳುವಳಿಕೆಗಾಗಿ ಪ್ರಕಟಿಸಲಾಗಿದೆ ಎಂದು ಮುಂಡಗೋಡ ತಹಸೀಲದಾರ ಶ್ರೀಧರ ಮುಂದಲಮನಿ ತಿಳಿಸಿದ್ದಾರೆ.

Read More

ಎನ್.ಆರ್.ಎಲ್.ಎಂ. ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚರ್ಚೆ

ಮುಂಡಗೋಡ : ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಗಾ ಅವರು ತಾಲೂಕಿನ ಸಾಲಗಾಂವ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಎನ್‍ಆರ್‍ಎಲ್‍ಎಂ, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಮತ್ತು ಸ್ವ ಸಹಾಯ ಸಂಘದ ಸದಸ್ಯರೊಂದಿಗೆ ಚರ್ಚೆ ನಡೆಸಿ ಸೂಕ್ತ ಸಲಹೆ ಸೂಚನೆ ನೀಡಿದರು.    ಈ ಸಂದರ್ಭದಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪ್ರವೀಣ ಕಟ್ಟಿ, ಸಹಾಯಕ ನಿರ್ದೇಶಕರಾದ ದಾಸನಕೊಪ್ಪ, ಸಂಜೀವಿನಿ ಜಿಲ್ಲಾ ಅಭಿಯಾನ ಘಟಕದ ಡಿ.ಪಿ.ಎಂ. ನಾಗರಾಜ ಕಲ್ಮನೆ, ಪಿ.ಡಿ.ಒ. ಸೋಮಲಿಂಗಪ್ಪ ಛಬ್ಬಿ, ತಾ.ಪಂ. ಸಂಜೀವಿನಿ ವಲಯ ಮೇಲ್ವಿಚಾರಕರಾದ ಶ್ಯಾಮಲಾ ನಾಯ್ಕ, ಒಕ್ಕೂಟದ ಅಧ್ಯಕ್ಷರಾದ…

Read More

ಕಳ್ಳತನ ಪ್ರಕರಣ : 8 ಆರೋಪಿಗಳ ಬಂಧನ, 19ಲಕ್ಷರೂ. ಚಿನ್ನಾಭರಣ ವಶ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ, ಅಂಕೋಲಾ ಮತ್ತು ಕಾರವಾರ ತಾಲೂಕಿನಲ್ಲಿ ರಾತ್ರಿ ವೇಳೆಯಲ್ಲಿ ಮನೆಗೆ ಕನ್ನ ಹಾಕಿ ಕಳ್ಳತನ ಮಾಡುತ್ತಿದ್ದ 7 ಜನ ಆರೋಪಿತರನ್ನು ಹಾಗೂ ಒಬ್ಬ ಕಳುವಿನ ಮಾಲನ್ನು ಸ್ವೀಕರಿಸುವ ವ್ಯಕ್ತಿ ಸೇರಿದಂತೆ 8 ಜನರನ್ನು ಗೋಕರ್ಣ ಪೊಲೀಸರು ಬಂಧಿಸಿದ್ದಾರೆ.    ಗೋಕರ್ಣ ಪೊಲೀಸ್ ಠಾಣೆಯ 5 ಪ್ರಕರಣಗಳು,ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯ 11 ಪ್ರಕರಣಗಳು ಹಾಗೂ ಕಾರವಾರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ 2 ಪ್ರಕರಣಗಳು ಸೇರಿದಂತೆ ಒಟ್ಟೂ 18 ಕಳ್ಳತನ…

Read More

ವಿದ್ಯುತ್ ಕಂಬಕ್ಕೆ ಡಿಕ್ಕಿ : ಬೈಕ್ ಸವಾರ ಸಾವು

  ಕುಮಟಾ : ಬೈಕ್ ಸ್ಕಿಡ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆಯೊಂದು ಕುಮಟಾ ತಾಲೂಕಿನ ಭಾವಿಕೊಡ್ಲ ಗ್ರಾಮದ ಬಳಿ ನಡೆದಿದೆ.     ಮೃತ ವ್ಯಕ್ತಿಯನ್ನು ಅಂಕೋಲಾ ತಾಲೂಕಿನ ಬೆಳಂಬಾರ ಗ್ರಾಮದ ಮುಡ್ರಾಣಿಯ ನಿವಾಸಿ ಪ್ರಸನ್ನ ದೇವುಗೌಡ ಎಂದು ಗುರುತಿಸಲಾಗಿದೆ. ಗೋಕರ್ಣದಲ್ಲಿ ಮದುವೆ ಕಾರ್ಯ ಮುಗಿಸಿ ವಾಪಾಸ್ಸಾಗುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ.

Read More

ಮಲೇರಿಯಾ ವಿರೋಧಿ ಮಾಸಾಚರಣೆ

ಮುಂಡಗೋಡ: ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಸೋಮವಾರ ಸರಕಾರಿ ಆಸ್ಪತ್ರೆಯಲ್ಲಿ ಪತ್ರಕರ್ತರಿಗೆ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.    ಈ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಎಚ್.ಎಫ್.ಇಂಗಳೆ, ಮಲೇರಿಯಾ ರೋಗವೂ ಸೊಳ್ಳೆಯಿಂದ ಹರಡುವ ರೋಗವು 2016ರಲ್ಲಿ 3 ಪ್ರಕರಣ ಹಾಗೂ 2018ರಲ್ಲಿ ಮೂರು ಪ್ರಕರಣ ಹೊರತು ಪಡಿಸಿದರೆ ಕಳೆದ ಐದು ವರ್ಷದಲ್ಲಿ ಇದುವರೆಗೂ ಒಂದು ಪ್ರಕರಣವೂ ದಾಖಲಾಗಿಲ್ಲ. ಈ ಮಲೇರಿಯಾ ರೋಗ ಗೋವಾ ಹಾಗೂ ಮಂಗಳೂರ ಭಾಗಕ್ಕೆ ಕೂಲಿ ಕೆಲಸಕ್ಕೆ ಹೋದವರಿಗೆ ಕಾಣಿಸಿಕೊಂಡಿತ್ತು. ಇದೀಗ ಇಂತಹ…

Read More