ಮುಂಡಗೋಡ : ದಿ.4ರಂದು ಸಚಿವ ಮಂಕಾಳು ವೈದ್ಯರಿಂದ ಗ್ಯಾರಂಟಿ ಯೋಜನೆಯ ಕಚೇರಿ ಉದ್ಘಾಟನೆ

ಮುಂಡಗೋಡ : ಮೀನುಗಾರಿಕೆ ತಂದರು ಹಾಗೂ ಒಳನಾಡು ಜನತಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳು ವೈದ್ಯರು ದಿ.4ರಂದು ಬೆಳಿಗ್ಗೆ 11-30ಗಂಟೆಗೆ ಮುಂಡಗೋಡ ತಾಲೂಕಾ ಗ್ಯಾರಂಟಿ ಯೋಜನೆಯ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ನಾಳೆ ದಿ.3ರಂದು ಸಂಜೆ 7 ಗಂಟೆಗೆ ಹಳಿಯಾಳದಿಂದ ಮುಂಡಗೋಡಿಗೆ ಆಗಮಿಸುವ ಸಚಿವರು ಮುಂಡಗೋಡ ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಮಾಡಲಿದ್ದಾರೆಂದು ಸಚಿವರ ಪ್ರವಾಸ ಕಾರ್ಯಕ್ರಮದ ಪಟ್ಟಿಯಲ್ಲಿ ತಿಳಿಸಲಾಗಿದೆ.

Read More

ಸಿಎಂ ಕುರ್ಚಿ ಖಾಲಿಯಿಲ್ಲ… ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು : ಡಿಕೆಶಿ

ಬೆಂಗಳೂರು : ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಹೇಳಿದರು.  ನಾನು ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿ ಎನ್ನುವ ಶಾಸಕ ಆ‌ರ್.ವಿ. ದೇಶಪಾಂಡೆ ಅವರ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಿರಿಯರಾದ ದೇಶಪಾಂಡೆ ಅವರು ಆಸೆ ಪಡುವುದು ತಪ್ಪಲ್ಲ. ಆದರೆ, ಮಾಧ್ಯಮಗಳ ಮುಂದೆ ಮಾತನಾಡಬಾರದಿತ್ತು. ಹಿರಿಯರಾದ ಅವರಿಗೆ ಏನು ಗೌರವ ನೀಡಲಾಗುವುದೊ ಅದನ್ನು ನೀಡೋಣ ಎಂದರು.ನ್ಯಾಯಾಲಯದಲ್ಲಿ…

Read More

KPSC ಕೆಎಎಸ್ ಮರು ಪರೀಕ್ಷೆ; ಉದ್ಯೋಗಾಕಾಂಕ್ಷಿಗಳು, ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ ಜಯ: ಆರ್ ಅಶೋಕ್

ಬೆಂಗಳೂರು: 2 ವಾರಗಳಲ್ಲಿ ಕೆಪಿಎಸ್ಸಿಯ ಕೆಎಎಸ್ ಮರು ಪರೀಕ್ಷೆಗೆ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದರು. ಇದು ಉದ್ಯೋಗಾಕಾಂಕ್ಷಿಗಳು ಹಾಗೂ ಪ್ರತಿಪಕ್ಷಗಳ ಹೋರಾಟಕ್ಕೆ ಸಂದ ಜಯ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವಂತ ಅವರು, “ಕೆಪಿಎಸ್ ಸಿ ಪರೀಕ್ಷೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತು”. ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಘೋರ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದ್ದು, ಇದು…

Read More

ನಾಳೆ ದಿ.3ರಂದು 3 ಜಲಾಶಯಗಳಿಗೆ ಶಾಸಕ ಹೆಬ್ಬಾರ ಅವರಿಂದ ಬಾಗಿನ ಅರ್ಪಣೆ

ಮುಂಡಗೋಡ : ನಾಳೆ ದಿನ ದಿ.3ರಂದು ಮುಂಡಗೋಡ ತಾಲೂಕಿನ ಮೂರು ಜಲಾಶಯಗಳಿಗೆ ಶಾಸಕರಾದ ಶಿವರಾಮ ಹೆಬ್ಬಾರ್ ಬಾಗಿನ ಅರ್ಪಿಸಲಿದ್ದಾರೆ.  ನಾಳೆ ದಿ.3ರಂದು ಬೆಳಿಗ್ಗೆ 10 ಗಂಟೆಗೆ ಬಾಚಣಕಿ ಜಲಾಶಯಕ್ಕೆ, ಬೆಳಿಗ್ಗೆ 11 ಗಂಟೆಗೆ ಸನವಳ್ಳಿ ಜಲಾಶಯಕ್ಕೆ ಮತ್ತು ಮಧ್ಯಾಹ್ನ 12 ಗಂಟೆಗೆ ಚಿಗಳ್ಳಿ ಜಲಾಶಯಕ್ಕೆ ಶಾಸಕರಾದ ಶಿವರಾಮ ಹೆಬ್ಬಾರ್ ಬಾಗಿನ ಅರ್ಪಿಸಲಿದ್ದಾರೆಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಟಿ.ವೈ.ದಾಸನಕೊಪ್ಪ ತಿಳಿಸಿದ್ದಾರೆ.

Read More

ನಾಳೆ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ : ಅರಣ್ಯ ಇಲಾಖೆಯ 49 ಅಧಿಕಾರಿ, ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಪ್ರದಾನ

ಬೆಂಗಳೂರು : ಅರಣ್ಯ ಇಲಾಖೆಗೆ ಹೊಸದಾಗಿ ಆಯ್ಕೆಯಾಗಿರುವ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಹಾಗೂ ಗಣನೀಯ ಸೇವೆ ಸಲ್ಲಿಸಿದ 49 ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕವನ್ನು ನಾಳೆ (ಸೆ.3) ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮ ಹೇಳಿಕೆಯಲ್ಲಿ ಅವರು, 2023-24ನೇ ಸಾಲಿನಲ್ಲಿ 310…

Read More

ಸಚಿವ ಪ್ರಿಯಾಂಕ್ ಖರ್ಗೆ ಅಕ್ರಮ `CA ಸೈಟ್’ ಪಡೆದ ಆರೋಪ : ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ರಾಜ್ಯಪಾಲರು!

ಬೆಂಗಳೂರು : ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದಿರುವ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ದಾಖಲಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಪತ್ರ ಬರೆದಿದ್ದಾರೆ. ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದಿರುವ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು ನೀಡಿದ್ದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಪ್ರಕರಣದ ಕುರಿತು ವಿವರಣೆ ಕೇಳಿದ್ದಾರೆ. ಸಿದ್ಧಾರ್ಥ ವಿಹಾರ…

Read More

ಹೈಕಮಾಂಡ್ ಒಪ್ಪಿದರೆ, ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ : ದೇಶಪಾಂಡೆ

ಮೈಸೂರು: ಹೈಕಮಾಂಡ್ ಒಪ್ಪಿದರೆ ಹಾಗೂ ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಮುಖ್ಯಮಂತ್ರಿ ಆಗುತ್ತೇನೆ. ಆದರೆ, ಈಗ ಆ ಸ್ಥಾನದ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆ‌ರ್.ವಿ. ದೇಶಪಾಂಡೆ ಹೇಳಿದರು.  ಪತ್ರಕರ್ತರೊಂದಿಗೆ ರವಿವಾರ ಮಾತನಾಡಿದ ಅವರು, ನಾನು ಸಿದ್ದರಾಮಯ್ಯಗಿಂತ ಎರಡು ವರ್ಷ ದೊಡ್ಡವನು. ಸಚಿವನಾಗಿ ದಣಿದಿದ್ದೇನೆ. ಇನ್ನೇನಿದ್ದರೂ ಮುಖ್ಯಮಂತ್ರಿ ಆಗಬೇಕಷ್ಟೆ. ಎಲ್ಲರಂತೆಯೇ ನನಗೂ ಆಸೆ ಇದೆ. ಜೀವನದಲ್ಲಿ ಮಹತ್ವಾಕಾಂಕ್ಷೆ ಇರಬೇಕು ಎಂದರು.  ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆಯಾಗಿಲ್ಲ. ನನಗೆ ಗೊತ್ತಿಲ್ಲದೆ ಅಂಥ…

Read More

ವಿ.ಹಿಂ.ಪ. ಮತ್ತು ಭಜರಂಗದಳ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ, ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನೆ, ಷಷ್ಟಿ ವರ್ಷದ ಕಾರ್ಯಕ್ರಮ

ಮುಂಡಗೋಡ : ವಿಶ್ವ ಹಿಂದೂ ಪರಿಷತ್, ಭಜರಂಗದಳ ಇವರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ವಿಶ್ವ ಹಿಂದೂ  ಪರಿಷತ್ತಿನ ಸ್ಥಾಪನೆ, ಷಷ್ಟಿ ವರ್ಷದ ಕಾರ್ಯಕ್ರಮವನ್ನು ಕಾಳಗನಕೊಪ್ಪದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.  ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಗುರು ರುದ್ರಮುನಿ ಸ್ವಾಮೀಜಿ ಆಗಮಿಸಿದ್ದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಓಂ ಗ್ಯಾಸ್ ಮಾಲೀಕರಾದ ಬಸವರಾಜ ಓಸಿಮಠ ವಹಿಸಿದ್ದರು.  ವಿ.ಹಿಂ.ಪರಿಷತ್ತಿನ ತಾಲೂಕು ಅಧ್ಯಕ್ಷರಾದ ತಂಗಮ್ ಚಿನ್ನನ್, ವಿಶ್ವ ಹಿಂದೂ ಪರಿಷತ್ ತಾಲೂಕಾ ಕಾರ್ಯದರ್ಶಿ ಅಯ್ಯಪ್ಪ ಭಜಂತ್ರಿ,  ಭಜರಂಗದಳ ತಾಲೂಕಾ ಸಂಚಾಲಕ ಶಂಕರ್ ಲಮಾಣಿ,…

Read More

ಮುಡಾ ಹಗರಣ: ಕೋರ್ಟ್ ತೀರ್ಮಾನದ ಮೇಲೆ ಸಿಎಂ ಭವಿಷ್ಯ ನಿರ್ಧಾರವಾಗಲಿದೆ: ಬಸವರಾಜ ಬೊಮ್ಮಾಯಿ

ಮಂಡ್ಯ: ಮುಡಾ ಹಗರಣದ ವಿಚಾರ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಕೋರ್ಟ್ ಆದೇಶದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದುವರೆಯುತ್ತಾರೆಯೋ ಇಲ್ಲವೋ ಎನ್ನುವುದು ತೀರ್ಮಾನ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ರವಿವಾರ ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಒಂದು ಪ್ರಕರಣವನ್ನು ಪ್ರಾಷಿಕ್ಯೂಶನ್‌ಗೆ ಕೊಟ್ಟಿರುವುದು ಇದೇ ಮೊದಲ ಪ್ರಕರಣ ಅಲ್ಲ. ಹಲವಾರು ರಾಜ್ಯಗಳಲ್ಲಿ ಹಲವಾರು ಪ್ರಕರಣಗಳು ಆಗಿವೆ. ರಾಜ್ಯದಲ್ಲಿಯೂ ಆಗಿವೆ. ಇದೊಂದು ಸ್ಥಾಪಿತ ವ್ಯವಸ್ಥೆ ಆಗಿದೆ. ಹಲವಾರು ಸುಪ್ರೀಂ ಕೋರ್ಟ್ ತೀರ್ಪುಗಳು ಇವೆ. 2018…

Read More

ಮುಂಡಗೋಡ : ಜೂಜಾಟ… ಮೂರು ಕಡೆ ಪೊಲೀಸ ದಾಳಿ

ಮುಂಡಗೋಡ : 1 ರೂಪಾಯಿ ಕಟ್ಟಿದರೆ 80ರೂ. ನೀಡುವುದಾಗಿ ಆಮೀಷವೊಡ್ಡಿ ಜೂಜಾಟ ನಡೆಸುತ್ತಿದ್ದ ಮೂರು ಕಡೆ ಪೊಲೀಸರು ದಾಳಿ ಮಾಡಿದ ಘಟನೆ ಶನಿವಾರ ನಡೆದಿದೆ.  ಮುಂಡಗೋಡ ಬಂಕಾಪುರ ರಸ್ತೆಯ ವಿನಾಯಕ ಕಲಾಲ್ ಎಂಬಾತ ಆಗಸ್ಟ 31ರ ಮಧ್ಯಾಹ್ನ ಕಂಬಾರಕಟ್ಟಿ ಬಸ್ ನಿಲ್ದಾಣದ ಎದುರು ಜೂಜಾಟ ನಡೆಸುತ್ತಿದ್ದ. ಇನ್ನೊಬ್ಬರಿಗೆ ನಷ್ಟ ಆಗುವ ರೀತಿಯಲ್ಲಿ ಆತ ಹಣ ಕಟ್ಟಿಸಿಕೊಂಡಿದ್ದ. ಆತನ ಮೇಲೆ ದಾಳಿ ನಡೆಸಿದ ಪಿಎಸ್‌ಐ ಪರಶುರಾಮ ಮಿರ್ಜಗಿ 350ರೂ. ಹಣದೊಂದಿಗೆ ಬಿಳಿ ಚೀಟಿ ಹಾಗೂ ಅಂಕಿ-ಸಂಖ್ಯೆಗಳನ್ನು ಬರೆಯುತ್ತಿದ್ದ ಬಾಲ್‌ಪೆನ್…

Read More